ಕೆರೆಗೆ ನೀರು ತುಂಬಿಸುವ ಕಾರ್ಯ ಎಂದು?

•ಪರದಾಡುತ್ತಿರುವ ರೈತರ ಆತಂಕ ದೂರ ಮಾಡಲಿ•ಘಟಪ್ರಭಾ ನದಿಯಿಂದ ಕೆರೆ ತುಂಬಿಸಿ

Team Udayavani, Jul 15, 2019, 9:58 AM IST

bk-tdy-2..

ಕಲಾದಗಿ: ಶೆಲ್ಲಿಕೇರಿ ಕ್ರಾಸ್‌ ಬಳಿ ಕಳಸಕೊಪ್ಪ ಕೆರೆಗೆ ನೀರು ತುಂಬಿಸುವ ಪಂಪ್‌ಹೌಸ್‌ ಮುಂದೆ ನೀರು ತುಂಬಿಕೊಂಡಿದೆ.

ಕಲಾದಗಿ: ಕಳಸಕೊಪ್ಪ ಕೆರೆ ಸೇರಿದಂತೆ ಕಲಾದಗಿ ಹೋಬಳಿಮಟ್ಟದ ಏಳು ಕೆರೆಗಳನ್ನು ತುಂಬಿಸುವ ಕಾರ್ಯ ಕೈಗೊಳ್ಳಬೇಕಾಗಿದೆ.

ಕಲಾದಗಿ ಹೋಬಳಿ ಮಟ್ಟದಲ್ಲಿ ಮಳೆ ನಿರೀಕ್ಷೆ ಪ್ರಮಾಣದಲ್ಲಿ ಸುರಿಯದೇ ನಿರಾಸೆ ಮೂಡಿಸಿದೆ, ನೀರಿಗಾಗಿ ರೈತ ಸಮುದಾಯ ಇನ್ನೂ ಕಂಗಾಲಾಗಿದೆ. ಜನಪ್ರತಿನಿಧಿಗಳು, ಕೆಬಿಜೆಎನ್‌ಎಲ್ ಅಧಿಕಾರಿಗಳು ಕೆರೆಗೆ ನೀರು ಎಂದು ತುಂಬಿಸುತ್ತಾರೆ ಎಂದು ಕಾಯುತ್ತಿದ್ದಾರೆ.

ಹೋಬಳಿ ವ್ಯಾಪ್ತಿಯಲ್ಲಿ ಇರುವ ಹತ್ತಾರು ಕೆರೆಗಳು ಬತ್ತಿ ಬರಿದಾಗಿವೆ, ಅಂತರ್ಜಲ ಮಟ್ಟ ಕುಸಿದು ರೈತರ ಕೊಳವೆಬಾವಿಗಳು ಬತ್ತಿ ಬರಿದಾಗುತ್ತಿವೆ. ಘಟಪ್ರಭಾ ನದಿಯಿಂದ ಕಳಸಕೊಪ್ಪ ಕೆರೆ, ಗೊವಿಂದಕೊಪ್ಪ ಕೆರೆ, ತುಳಸಿಗೇರಿ ಕೆರೆ, ಗದ್ದನಕೇರಿ ಕೆರೆಗೆ, ಕೆರೂರ ಭಾಗದ ಏಳು ಕೆರೆಗಳಿಗೆ ನೀರು ತುಂಬಿಸಿ ನೀರಿಗಾಗಿ ಪರದಾಡುತ್ತಿರುವ ರೈತರ ಆತಂಕ ದೂರ ಮಾಡಬೇಕಾಗಿದೆ.

ಕಳಸಕೊಪ್ಪ ಕೆರೆಯಲ್ಲಿ ನೀರು ಆವರಿಸುವ ಕ್ಷೇತ್ರ 270 ಹೆಕ್ಟೇರ್‌ ಆಗಿದ್ದು, 667.1845 ಎಕರೆ ಪ್ರದೇಶದಲ್ಲಿ ನೀರು ನಿಲ್ಲುತ್ತದೆ. ಕೆರೆ ನೀರು ನಿಲ್ಲುವ ಎತ್ತರ 5.80 ಮೀಟರನಷ್ಟಿದೆ. ಕೆರೆಯ ಕಟ್ಟೆಯ ಎತ್ತರ 57 ಅಡಿ, ಉದ್ದ 1616 ಅಡಿ, ಮೇಲಗಲ 12 ಅಡಿ ಅಗಲ ಹೊಂದಿದೆ, ಕೆಳ ಅಗಲ 228 ಅಡಿಗಳಷ್ಟಿದೆ. 200 ಹೆಕ್ಟೇರ ಪ್ರದೇಶ ಮುಳುಗಡೆಯಾಗಿಸಿ ನೀರು ತುಂಬಿ ಹೊರಚೆಲ್ಲುವ ಕೋಡಿ 909 ಅಡಿ ಉದ್ದವಿದೆ. 0.24 ಟಿಎಂ.ಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ.

ಘಟಪ್ರಭಾ ನದಿಯಲ್ಲಿ ದಿನದಿಂದ ದಿನಕ್ಕೆ ನೀರು ಏರಿಕೆಯಾಗುತ್ತಿದ್ದು ಒಡಲು ತುಂಬಿಕೊಂಡಿದೆ. ಮತಕ್ಷೇತ್ರದ ಜನಪ್ರತಿನಿಧಿಗಳು, ಕೃಷ್ಣಾ ಭಾಗ್ಯ ಜಲ ನಿಗಮ ಮಂಡಳಿಯ ಅಧಿಕಾರಿಗಳು ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಮುಂದಾಗುತ್ತಿಲ್ಲ ಎಂದು ಈ ಭಾಗದ ರೈತರು ಆರೋಪಿಸುತ್ತಿದ್ದಾರೆ.

ಬಾಗಲಕೋಟೆ ತಾಲೂಕಿನ 6 ಗ್ರಾಮಗಳ 1143 ಹೆಕ್ಟೇರ್‌ ಪ್ರದೇಶವನ್ನು ನೀರಾವರಿಗೆ ಒಳಪಡಿಸುವ, ಚಿಕ್ಕಶೆಲ್ಲಿಕೇರಿ, ಹಿರೇಶೆಲ್ಲಿಕೇರಿ, ಕಗಲಗೊಂಬ, ನೀರಬೂದಿಹಾಳ, ಕಳಸಕೊಪ್ಪ, ಕೆರಕಲಮಟ್ಟಿ, ಕಲಾದಗಿಯಲ್ಲಿ ಬತ್ತಿದ ಕೊಳವೆ ಬಾವಿಗಳಿಗೆ ಮರುಜೀವ ತುಂಬುವ ಕೆರೆಗೆ ಈಗಿನಿಂದಲೇ ನೀರು ತುಂಬಿಸಲು ಆರಂಭಿಸಬೇಕಾಗಿದೆ. ಇಲ್ಲದಿದ್ದಲ್ಲಿ ಕೆರೆಗಳು ಸಂಪೂರ್ಣವಾಗಿ ತುಂಬಿಕೊಳ್ಳುವುದಿಲ್ಲ ಎನ್ನುವ ಅಭಿಪ್ರಾಯ ರೈತರದ್ದಾಗಿದೆ.

 

•ಚಂದ್ರಶೇಖರ ಆರ್‌.ಎಚ್

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.