ದೇಶಾಭಿಮಾನದಿಂದ ಬದಕನ್ನು ಕಟ್ಟಿಕೊಳ್ಳಬೇಕು: ಡಾ. ಮಹಾಂತೇಶ ಎಸ್. ಕಡಪಟ್ಟಿ


Team Udayavani, Aug 14, 2022, 12:53 PM IST

6

ಹುನಗುಂದ: 75 ವರ್ಷಗಳಲ್ಲಿ ಭಾರತೀಯರು ಸಾಧಿಸಿದ್ದೇನು? ಸಾಧಿಸಬೇಕಾಗಿರುವುದು ಏನಿದೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ರಾಷ್ಟ್ರ ನಾಯಕರ ತ್ಯಾಗ ಬಲಿದಾನಗಳನ್ನು ಸದಾ ಸ್ಮರಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿರಬೇಕು ಎಂದು ಡಾ. ಮಹಾಂತೇಶ ಎಸ್. ಕಡಪಟ್ಟಿ ಹೇಳಿದರು.

ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್. ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಎನ್.ಸಿ.ಸಿ., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಆಯೋಜಿಸಿದ ಮಾಜಿ ಸೈನಿಕರ ಸನ್ಮಾನ, ಹರ್ ಘರ್ ತಿರಂಗಾ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರೂ ದೇಶಾಭಿಮಾನದಿಂದ ಬದುಕನ್ನು ಕಟ್ಟಿಕೊಳ್ಳುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಯೋಧರಾದ ಬಾಲಪ್ಪ ಕಿರಸೂರ, ಮಲ್ಲಪ್ಪ ಉಮಚಗಿ, ಪ್ರಶಾಂತ ಬನ್ನಟ್ಟಿ, ಸಂಗಪ್ಪ ಹಡಪದ, ವಿಜಯ ದಳವಾಯಿ, ಬಸನಗೌಡ ಮಾಲಿಪಾಟೀಲ, ಶ್ರೀಶೈಲ ಇದ್ದಲಗಿ, ವಿಜಯಕುಮಾರ ರೇವಣಕಿಮಠ, ಸಂಗನಬಸಪ್ಪ ಹುಲ್ಯಾಳ, ಶಿವುಕುಮಾರ ತೆಗ್ಗಿನಮನಿ ಅವರನ್ನ ಸನ್ಮಾನಿಸಿ ಅವರ ಸೇನಾ ಸೇವಾ ದಿನದ ಕಾರ್ಯಚಟುವಟಿಕೆಗಳನ್ನು ಸ್ಮರಿಸಲಾಯಿತು.

ಯಾವ ದೇಶದ ಯುವಕರು ಸದೃಢರಾಗಿರುತ್ತಾರೆಯೋ ಅಂತಹ ದೇಶ ಸದೃಢವಾಗಿರುತ್ತದೆ. ಯುವಕರು ಸದಾ ಕಾಲ ಆರೋಗ್ಯದಿಂದ ಇರಬೇಕಾದರೆ ನಡಿಗೆ, ಓಟ, ಯೋಗದಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.

ದೇಹ ಸದೃಢವಾಗದಿದ್ದರೆ ಎಲ್ಲವನ್ನೂ ಕಳೆದುಕೊಂಡಂತೆ ಎಂದು ಲೆಪ್ಟಿನೆಂಟ್ ಎಸ್.ಬಿ.ಚಳಗೇರಿ ಹೇಳಿದರು.

ವೇದಿಕೆಯಲ್ಲಿ ವಿ.ಮ.ವಿ.ವ ಸಂಘದ ನಿರ್ದೇಶಕ ಮಹಾಂತೇಶ ಕತ್ತಿ, ವೀರಣ್ಣ ಬಳೂಟಗಿ, ಎಂ.ಎಸ್. ಮಠ ಮತ್ತು ವಿಜಯ ಮಹಾಂತೇಶ, ಉಚಿತ ಪ್ರಸಾದ ನಿಲಯದ ಕಾರ್ಯಾಧ್ಯಕ್ಷ ಸಂಗಣ್ಣ ಚಿನಿವಾಲರ, ಪ್ರಾಚಾರ್ಯ ಪ್ರೊ. ಎಸ್. ಕೆ. ಮಠ, ಪದವಿ ಪೂರ್ವ ಪ್ರಾಚಾರ್ಯ ಎಚ್. ಎಸ್. ಬೋಳಿ ಶೆಟ್ಟರ್ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಸವಿತಾ ಟಿ. ಪ್ರಾರ್ಥಿಸಿದರು. ತಿಪ್ಪೇಸ್ವಾಮಿ ಡಿ.ಎಸ್. ವಂದಿಸಿದರು. ಡಾ.ಎಸ್.ಆರ್.ನಾಗಣ್ಣವರ ನಿರೂಪಿಸಿದರು.

ಮಾಜಿ ಯೋಧರೊಂದಿಗೆ ಎನ್.ಸಿ.ಸಿ., ಎನ್.ಎಸ್.ಎಸ್., ರೋವರ‍್ಸ್ ಮತ್ತು ರೇಂಜರ‍್ಸ್ ಗಳೊಂದಿಗೆ ಸಂಘದ ಕಾರ್ಯಕಾರಿ ಮಂಡಳಿಯ ನಿರ್ದೇಶಕರು, ಮಹಾವಿದ್ಯಾಲಯದ ಸಿಬ್ಬಂದಿಯವರು ನಗರದ ಬೀದಿಗಳಲ್ಲಿ ಪ್ರೀಡಂ ರನ್ ಕೈಗೊಂಡರು.

ಟಾಪ್ ನ್ಯೂಸ್

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Hunagund: ನಿಯಮ ಪಾಲಿಸದೇ ರಸ್ತೆ ತಡೆ ನಿರ್ಮಾಣ

Hunagund: ನಿಯಮ ಪಾಲಿಸದೇ ರಸ್ತೆ ತಡೆ ನಿರ್ಮಾಣ

1-sadsadsa

Rabkavi Banhatti; ಶೂನ್ಯ ವಿದ್ಯುತ್ ಬಿಲ್: ಸಂತಸದಲ್ಲಿ ನೇಕಾರರು

Protest: ಮಹಾಲಿಂಗಪುರ ತಾಲೂಕಿಗಾಗಿ ಅಂತಿಮ ಹೋರಾಟ… ಇಂದಿನಿಂದ ಉಪವಾಸ ಸತ್ಯಾಗ್ರಹ

Protest: ಮಹಾಲಿಂಗಪುರ ತಾಲೂಕಿಗಾಗಿ ಅಂತಿಮ ಹೋರಾಟ… ಇಂದಿನಿಂದ ಉಪವಾಸ ಸತ್ಯಾಗ್ರಹ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.