ಹಿಂದುಳಿದವರು ಸ್ವಾಭಿಮಾನದ ಜೀವನ ರೂಪಿಸಿಕೊಳ್ಳಿ

ಸಕಾರಾತ್ಮವಾಗಿ ಸ್ಪಂದಿಸಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಮಾತನಾಡೋಣ ಎಂದಿದ್ದಾರೆ

Team Udayavani, Nov 2, 2021, 5:40 PM IST

ಹಿಂದುಳಿದವರು ಸ್ವಾಭಿಮಾನದ ಜೀವನ ರೂಪಿಸಿಕೊಳ್ಳಿ

ಮುಧೋಳ : ಕಳೆದ ನಾಲ್ಕು ವರ್ಷದಿಂದ ಪದೇ ಪದೆ ಮುಂದೂಡಿಕೆಯಾಗುತ್ತಿದ್ದ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಇಂದು ಅದ್ಧೂರಿಯಾಗಿ ನಡೆದಿದ್ದು ನನಗೆ ತೀವ್ರ ಸಂತಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಡಾ.ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಹಿತ ಚಿಂತನೆಗೆ ಶ್ರಮಿಸುತ್ತಿದ್ದ ಅಂಬೇಡ್ಕರ್‌ ಅವರು ಶಿಕ್ಷಣದಿಂದ ಮಾತ್ರ ದೀನ ದಲಿತರ ಏಳಿಗೆ ಸಾಧ್ಯ ಎಂದು ನಂಬಿದ್ದರು. ಅವರ ಮಾತಿನಂತೆ ನನ್ನ ಕ್ಷೇತ್ರದಲ್ಲಿ 9 ವಸತಿ ಶಾಲೆ ನಿರ್ಮಿಸಿ ಬಡವಿದ್ಯಾರ್ಥಿಗಳ ಓದಿಗೆ ಶ್ರಮಿಸುತ್ತಿದ್ದೇನೆ ಎಂದು ಹೇಳಿದರು.

ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ನೆಲೆಗಟ್ಟಿನಲ್ಲಿ ಜೀವನ ರೂಪಿಸಿಕೊಂಡಿದ್ದ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ನಮಗೆಲ್ಲ ದಾರಿದೀಪವಾಗಬೇಕು ಎಂದು ಹೇಳಿದರು. ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಜೀವನಾದರ್ಶಗಳನ್ನು ಯುವಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಹೇಳಿದರು.

ಸಂಸದ ಪಿ.ಸಿ. ಗದ್ದಿಗೌಡರ ಮಾತನಾಡಿ, ದೇಶದ ಬದಲಾವಣೆಗೆ ನಾಂದಿ ಹಾಡಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಹಾಕಿಕೊಟ್ಟ ದಾರಿಯಲ್ಲಿ ಯುವಜನತೆ ಸಾಗಬೇಕು. ಗುಣಮಟ್ಟದ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು. ನಳಂದ ವಿಹಾರದ ಬಂತೇಜಿ ಬೋರತ್ನ ಅವರು ಮಾತನಾಡಿ, ನಗರದಲ್ಲಿ ನಿರ್ಮಾಣಗೊಂಡಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಮೂರ್ತಿ ನೋಡಿದಾಗ ಪ್ರತಿಯೊಬ್ಬರಲ್ಲಿಯೂ ಸ್ವಾಭಿಮಾನದ ಚಿಲುಮೆ ಉಕ್ಕಬೇಕು ಎಂದು ಹೇಳಿದರು.

ನೆರೆಯ ಆಂಧ್ರಪ್ರದೇಶದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ 130ಅಡಿ ಎತ್ತರದ ಮೂರ್ತಿಗೆ ಸಿದ್ಧತೆ ನಡೆದಿದ್ದು, ನಮ್ಮ ರಾಜ್ಯದಲ್ಲಿಯೂ ಆ ಮಾದರಿಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಬೇಕು ಎಂದು ಸಚಿವ ಗೋವಿಂದ ಕಾರಜೋಳ ಅವರ ಬಳಿ ಹೇಳಿಕೊಂಡಿದ್ದೇವೆ. ಅವರು ನಮ್ಮ ಮಾತಿಗೆ ಸಕಾರಾತ್ಮವಾಗಿ ಸ್ಪಂದಿಸಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಮಾತನಾಡೋಣ ಎಂದಿದ್ದಾರೆ ಎಂದು ತಿಳಿಸಿದರು.

ನಗರಸಭೆ ಹಂಗಾಮಿ ಅಧ್ಯಕ್ಷೆ ಸ್ವಾತಿ ಕುಲಕರ್ಣಿ, ಬಿಜೆಪಿ ಮುಖಂಡ ಕೆ.ಆರ್‌. ಮಾಚಪ್ಪನವರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಭೀಮನಗೌಡ ಪಾಟೀಲ, ಎಪಿಎಂಸಿ ಅಧ್ಯಕ್ಷ ಭೀಮಪ್ಪ ತಳವಾರ, ಉಪಾಧ್ಯಕ್ಷ ಲಕ್ಷ್ಮಣ ಮಾದರ, ನಗರ ಯೋಜನಾ ಘಟಕದ ಅಧ್ಯಕ್ಷ ಪ್ರಕಾಶ ವಸ್ತ್ರದ, ನಗರ ಆಶ್ರಯ ಸಮಿತಿ ಅಧ್ಯಕ್ಷ ಕಲ್ಲಪ್ಪಣ್ಣ ಸಬರದ, ಬಿಜೆಪಿ ಗ್ರಾಮೀಣ ಘಟಕ ಅಧ್ಯಕ್ಷ ಹನಮಂತ ತುಳಸಿಗೇರಿ, ನಗರ ಘಟಕ ಅಧ್ಯಕ್ಷ ಡಾ| ರವಿ ನಂದಗಾವಿ, ಬಿಜೆಪಿ ಮುಖಂಡ ಅರುಣ ಕಾರಜೋಳ, ಜಿಲ್ಲಾಧಿಕಾರಿ ಡಾ| ರಾಜೇಂದ್ರ, ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ, ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ್‌
ಸಂಗಮೇಶ ಬಾಡಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಘೋರ್ಪಡೆ, ನಗರಸಭೆ ಆಯುಕ್ತ ಎಸ್‌.ಜಿ. ಅಂಬಿಗೇರ, ಎಚ್‌.ಆರ್‌. ಪಾಟೀಲ, ಮೋಹನ ಕೋರಡ್ಡಿ ಇದ್ದರು.

ಪುತ್ಥಳಿ ಅನಾವರಣ : ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರ ಮೆರವಣಿಗೆ ನಡೆಯಿತು. ಬಳಿಕ ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ಸಮಾಪ್ತಿಗೊಂಡು ಸಚಿವ ಕಾರಜೋಳ ಪುತ್ಥಳಿ
ಅನಾವರಣಗೊಳಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.