ಬಾದಾಮಿ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ

ಈ ಅನುದಾನಕ್ಕೂ ಕೂಡಾ ಕ್ರಿಯಾ ಯೋಜನೆ ಸಿದ್ಧಪಡಿಸಲು ಪುರಸಭೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Team Udayavani, Sep 1, 2022, 4:54 PM IST

ಬಾದಾಮಿ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ

ಬಾದಾಮಿ: ಐತಿಹಾಸಿಕ ಚಾಲುಕ್ಯರ ರಾಜಧಾನಿ ಬಾದಾಮಿ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಇಲ್ಲಿನ ಪ್ರವಾಸಿ ತಾಣಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪೂರಕ ಕೆಲಸ ಕಾರ್ಯಗಳಿಗೆ ಹೆಚ್ಚಿನ ವೇಗ ನೀಡಲಾಗುತ್ತಿದೆ. ಇದಕ್ಕಾಗಿಯೇ ಉಪವಿಭಾಗಾಧಿ ಕಾರಿ ಶ್ವೇತಾ ಬೀಡಿಕರ ಅವರನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರನ್ನಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.

ಮಂಗಳವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಮಂಗಳವಾರ ಒಂದೊಂದು ತಾಲೂಕಿಗೆ ಭೇಟಿ ನೀಡಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವುದರ ಜತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿಯ ಪರಿಶೀಲನೆ ನಡೆಸಲಾಗುತ್ತಿದೆ. ಅದರಂತೆ ಮಂಗಳವಾರ ಬಾದಾಮಿ ತಹಶೀಲ್ದಾರ್‌ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಇದಕ್ಕೆ ಪೂರಕವಾಗಿ ಹೆಚ್ಚಿನ ಪ್ರಗತಿಗಾಗಿ ಸೂಕ್ತ ಸಲಹೆ ಸೂಚನೆಯನ್ನು ತಹಶೀಲ್ದಾರ್‌ ಅವರಿಗೆ ನೀಡಲಾಗಿದೆ. ಭೂಮಿ ರ್‍ಯಾಂಕಿಂಗ್‌ನಲ್ಲಿ ಬಾಗಲಕೋಟೆ ಜಿಲ್ಲೆ ರಾಜ್ಯಕ್ಕೆ 2ನೇ ಸ್ಥಾನ ಮತ್ತು ಅಟಲ್‌ಜೀ ಜನಸ್ನೇಹಿ ಕೇಂದ್ರದ ಕಾರ್ಯ ನಿರ್ವಹಣೆಯಲ್ಲಿ 7 ನೇ ಸ್ಥಾನ ಪಡೆದುಕೊಂಡಿದೆ ಎಂದು ತಿಳಿಸಿದರು.

ಬಾದಾಮಿ ತಾಲೂಕಿನ 30 ಗ್ರಾಮಗಳಲ್ಲಿ ರುದ್ರಭೂಮಿ ಇಲ್ಲದಿರುವ ಬಗ್ಗೆ ತಿಳಿದು ಬಂದಿದ್ದು, ಇದರಲ್ಲಿ ಕೇವಲ 3 ಗ್ರಾಮಗಳಲ್ಲಿ ಸರಕಾರಿ ಜಮೀನು ಲಭ್ಯವಿದೆ. ಉಳಿದ 27 ಗ್ರಾಮಗಳಲ್ಲಿ ಗ್ರಾಮಸ್ಥರ ಮನವೊಲಿಸಿ ಕಡಿಮೆ ಸರಕಾರಿ ದರದಲ್ಲಿ ಜಮೀನು ಖರೀದಿಸಲು ಚಿಂತನೆ ನಡೆಸಲಾಗಿದೆ. ಗ್ರಾಮಸ್ಥರು ಇದಕ್ಕೆ ಸಹಕರಿಸಬೇಕು ಎಂದರು.

ಕೇಂದ್ರ ಸರಕಾರದ ಹೃದಯ ಯೋಜನೆ ಅಡಿಯಲ್ಲಿ ಮಂಜೂರಾಗಿರುವ 18.43 ಕೋಟಿ ರೂ. ಅನುದಾನದಲ್ಲಿ ಈಗಾಗಲೇ ಸಿಪಿಡಬ್ಲೂ ಇಲಾಖೆ 6.85 ಕೋಟಿ ರೂ ಅನುದಾನದಲ್ಲಿ 5.89 ಕೋಟಿ ರೂ. ವೆಚ್ಚ ಮಾಡಿದೆ. ಉಳಿದ 99 ಲಕ್ಷ ರೂ. ವೆಚ್ಚದ ಬಸವೇಶ್ವರ ಮತ್ತು ಪುಲಿಕೇಶಿ ಮೂರ್ತಿಗಳ ಸ್ಥಾಪನೆ ಆಗಬೇಕಾಗಿದೆ. ಈ ಮೂರ್ತಿಗಳು ಈಗಾಗಲೇ ಸಿದ್ಧವಾಗಿವೆ. ಇವುಗಳ ಸ್ಥಾಪನೆಗೆ ಜಾಗ ನಿಗದಿಯಾಗಬೇಕಾಗಿದೆ. ಹೀಗಾಗಿ ಜಾಗೆ ಪರಿಶೀಲನೆಯ ಹಂತದಲ್ಲಿದೆ. ರಸ್ತೆ ಮಧ್ಯೆ ಭಾಗದಲ್ಲಿ ಪ್ರತಿಷ್ಟಾಪಿಸಲು ಸಾಧ್ಯವಿಲ್ಲ. ಇದಕ್ಕೆ ಸರ್ವೋಚ್ಛ ನ್ಯಾಯಲಯದ ಆದೇಶವಿದೆ.

ಸ್ಥಳೀಯ ಪುರಸಭೆಯ ಒಡೆತನದ ಮತ್ತು ಸರಕಾರಿ ಜಾಗ ಗುರುತಿಸಲಾಗುತ್ತಿದೆ ಎಂದರು. ಹೃದಯ ಯೋಜನೆ ಅಡಿಯಲ್ಲಿ ಉಳಿದ 11.58 ಕೋಟಿ ರೂ. ಅನುದಾನದಲ್ಲಿ ಪುರಸಭೆ ವತಿಯಿಂದ ಈಗಾಗಲೇ 7.55 ಕೋಟಿ ರೂ. ಅನುದಾನದ ಕಾಮಗಾರಿ ಮಾಡಲಾಗಿದೆ. ಉಳಿದ 4 ಕೋಟಿ ರೂ. ಅನುದಾನ ಉಳಿತಾಯವಾಗಿದೆ. ಈ ಅನುದಾನಕ್ಕೂ ಕೂಡಾ ಕ್ರಿಯಾ ಯೋಜನೆ ಸಿದ್ಧಪಡಿಸಲು ಪುರಸಭೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನು ಅನುಮೋದನೆ ಪಡೆದು ನಿಯಮಾನುಸಾರ ಖರ್ಚು ಭರಿಸಲಾಗುವುದು ಎಂದು ತಿಳಿಸಿದರು.

ಉಳಿದಂತೆ ಪ್ರವಾಸೋದ್ಯಮ ಇಲಾಖೆಯ ಕಾಮಗಾರಿಗಳ ವಿವರ ನೀಡಿದ ಅವರು ಮೇಲಿಂದ ಮೇಲೆ ಬಾದಾಮಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗುವುದು ಚಾಲುಕ್ಯರ ನಾಡು ಐತಿಹಾಸಿಕ ಪ್ರವಾಸಿ ತಾಣವನ್ನು ಸೌಂದಯಿìಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಬಾಗಲಕೋಟೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಬಾದಾಮಿ ತಹಶೀಲ್ದಾರ್‌ ಜೆ.ಬಿ. ಮಜ್ಜಗಿ, ಗುಳೇದಗುಡ್ಡ ತಹಶೀಲ್ದಾರ್‌ ಎಸ್‌.ಬಿ. ಬೊಮ್ಮನ್ನವರ, ಬಿಇಒ ಆರೀಫ್‌ ಬಿರಾದಾರ, ಮುಖ್ಯಾಧಿಕಾರಿ ಎ.ಎಚ್‌.ಮುದ್ದೇಬಿಹಾಳ, ಎಇಇ ನಾರಾಯಣ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.