ಬಾದಾಮಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ
Team Udayavani, Jun 29, 2019, 12:06 PM IST
ಬಾದಾಮಿ: ಸಾರ್ವಜನಿಕರ ಅಹವಾಲು ಆಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ.
ಬಾದಾಮಿ: ಇಲ್ಲಿನ ರಾಮದುರ್ಗ ರಸ್ತೆಯ ಶಾಸಕರ ಗೃಹ ಕಚೇರಿಯಲ್ಲಿ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ತಾಲೂಕಿನ ಕೆರೂರ, ಗುಳೇದಗುಡ್ಡ, ಕುಳಗೇರಿ ಸೇರಿದಂತೆ ವಿವಿಧ ಗ್ರಾಮೀಣ ಭಾಗಗಳಿಂದ ಬಂದಂತಹ ಮಹಿಳೆಯರು, ಯುವಕರು, ವೃದ್ಧರು ತಮ್ಮ ಸಮಸ್ಯೆಗಳ ಮನವಿಯನ್ನು ಸಲ್ಲಿಸಿದರು. ವಸತಿ, ಉದ್ಯೋಗ, ರಸ್ತೆ, ಸಾರಿಗೆ ಸಂಪರ್ಕ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ವರ್ಗಾವಣೆ, ಕುಡಿಯುವ ನೀರು ಸೇರಿದಂತೆ ವಿವಿದ ಸಮಸ್ಯೆಗಳ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಕೆಲವು ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹರಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಮುಖಂಡರಾದ ಎಂ.ಬಿ. ಹಂಗರಗಿ, ಡಾ.ಎಂ.ಜಿ. ಕಿತ್ತಲಿ, ಎಂ.ಡಿ. ಎಲಿಗಾರ, ಹೊಳಬಸು ಶೆಟ್ಟರ, ಮಹೇಶ ಹೊಸಗೌಡ್ರ, ಮಹಾಂತೇಶ ಹಟ್ಟಿ, ರಾಜಮಹಮ್ಮದ ಬಾಗವಾನ, ಎಸ್. ಡಿ. ಜೋಗಿನ, ಪಿ.ಆರ್.ಗೌಡರ, ಮಧು ಯಡ್ರಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ