ಕೈ ಮುಗಿತೇವ್ರಿ ಸಾಹೇಬ್ರ, ಕೈ ಬಿಡಬೇಡಿ…: ಸಿದ್ದುಗೆ ಬಾದಾಮಿ ಅಭಿಮಾನಿಗಳ ಮನವಿ

ಬಿಟ್ಟು ಹೋದರೆ ಕ್ಷೇತ್ರದಲ್ಲಿ ಭಾರಿ ಗೊಂದಲ... ಜನತೆಗೆ ಸಾಕಷ್ಟು ನೋವು...

Team Udayavani, Nov 19, 2022, 7:52 PM IST

1-ad-adsa-dasd

ಕುಳಗೇರಿ ಕ್ರಾಸ್:(ಬಾಗಲಕೋಟೆ) ವಿರೋಧ ಪಕ್ಷದ ನಾಯಕರು ನಮ್ಮ ಶಾಸಕರಾದ ಸಿದ್ಧರಾಮಯ್ಯನವರು ಬದಾಮಿಯಿಂದಲೇ 2023ರ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ. ಯಕ್ಕಪ್ಪನವರ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

ಗ್ರಾಮದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರಾ ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಹಿಂದೆಂದೂ ಆಗದ ಕೆಲಸ ಕಾರ್ಯಗಳನ್ನ ಮಾಡಿದ್ದಾರೆ. ಆಯ್ಕೆಯಾದ ಕೇವಲ ಎರಡು ವರ್ಷದಲ್ಲೇ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಗಳನ್ನ ಈಡೇರಿಸಿದ್ದಾರೆ. ರಸ್ತೆ, ನೀರು, ಶಾಲೆ-ಕಾಲೇಜು ಸೇರಿದಂತೆ ನಮ್ಮ ಐತಿಹಾಸಿಕ ಸ್ಥಳಗಳನ್ನು ಸಹ ಅಭಿವೃದ್ಧಿ ಮಾಡಿದ್ದಾರೆ.ಈ ಬಾರಿ ಅವರು ಮಾಡಿದ ಅಭಿವೃದ್ಧಿಯೇ ಅವರನ್ನ ಕೈ ಹಿಡಿಯಲಿದೆ. ಆ ಕಾರಣ ಮಾನ್ಯ ಸಿದ್ಧರಾಮಯ್ಯನವರು ನಮ್ಮ ಬಾದಾಮಿಯಿಂದಲೇ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಶಶಿ ಉದಗಟ್ಟಿ, ರಾಮಣ್ಣ ಡೊಳ್ಳಿನ, ಹನಮಂತ ನರಗುಂದ ಮಾತನಾಡಿ ಈ ಹಿಂದೆ ಚಾಮುಂಡಿ ಕ್ಷೇತ್ರ ಕೈ ಬಿಟ್ಟರೂ…ಬಾದಾಮಿ ಜನತೆ ಮಾತ್ರ ಅವರನ್ನ ಕೈ ಬಿಡಲಿಲ್ಲ… ಕಾರಣ ಪುನರ್ಜನ್ಮ ಕೊಟ್ಟ ಬಾದಾಮಿ ಜನತೆಯನ್ನ ಕೈ ಬಿಡಬಾರದು ಎಂದು ಮನವಿ ಮಾಡಿಕೊಂಡರು. ಒಂದು ವೆಳೆ ಮಾನ್ಯ ಸಿದ್ಧರಾಮಯ್ಯನವರು ಕ್ಷೇತ್ರ ಬಿಟ್ಟು ಹೋದರೆ ಕ್ಷೇತ್ರದಲ್ಲಿ ಭಾರಿ ಗೊಂದಲ ಜೊತೆಗೆ ನಮ್ಮ ಕ್ಷೇತ್ರದ ಜನತೆಗೆ ಸಾಕಷ್ಟು ನೋವು ತೊಂದರೆ ಉಂಟಾಗಲಿದೆ ಎಂದು ಮುಖಂಡರು, ಕಾರ್ಯಕರ್ತರು ತಮ್ಮ ಮನದಾಳದ ಮಾತುಗಳನ್ನ ಬಿಚ್ಚಿಟ್ಟರು.

ಅವರು ಎಲ್ಲೇ ನಿಂತರು ಮೊದಲು ಬಾದಾಮಿ ಕ್ಷೇತ್ರವನ್ನೇ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸವೂ ನಮಗಿದೆ. ಎಲ್ಲ ಸುದ್ದಿ ವಾಹಿನಿಯಲ್ಲೂ ಬಾದಾಮಿಯೇ ಸೇಫ್ ಎಂಬ ಮಾಹಿತಿ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳನ್ನ ಎಲ್ಲ ಪಕ್ಷದವರೂ ನೆನೆಯುತ್ತಿದ್ದಾರೆ ಕ್ಷೇತ್ರದ ಮತದಾರರು ಈ ಬಾರಿ ಅವರನ್ನ ಪಕ್ಷಾತೀತವಾಗಿ ಹೆಚ್ಚು ಮತಗಳಿಂದ ಆಯ್ಕೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಸಣ್ಣಬೀರಪ್ಪ ಪೂಜಾರ, ನಾಗಪ್ಪ ಅಡಪಟ್ಟಿ, ಶಶಿಕಾಂತ ಉದಗಟ್ಟಿ, ಬಸವರಾಜ ಬ್ಯಾಹಟ್ಟಿ, ಹನಮಂತ ಹುಡೇದಮನಿ, ಬಸವರಾಜ ಕಟ್ಟಿಕಾರ, ಹನಮಂತ ನರಗುಂದ, ವೆಂಕಣ್ಣ ಹೊರಕೇರಿ, ಶೇಖಪ್ಪ ಪವಾಡಿನಾಯ್ಕರ್, ಲಕ್ಷ್ಮಣ್ ದಾದನಟ್ಟಿ. ಸಣ್ಣಬೀರಪ್ಪ ದ್ಯಾವನಗೌಡ್ರ, ರಾಮಣ್ಣ ಡೊಳ್ಳಿನ, ಕರಿಗೌಡ ಮುಷ್ಟಿಗೇರಿ, ಬಸವರಾಜ ತೂರನೂರ, ಚಂದ್ರಗೌಡ ಪಾಟೀಲ, ಶಿವಪ್ಪ ಅಯ್ಯನ್ನವರ, ಪುಂಡಲಿಕ ಘಟ್ನೂರ್, ಶಿವಾನಂದ ಮಣ್ಣೂರ, ದ್ಯಾಮನಗೌಡ ಪಾಟೀಲ, ಸಿದ್ದಪ್ಪ ಖಾನಾಪೂರ, ಸಿದ್ದಪ್ಪ ಉದ್ದನ್ನವರ, ಹನಮಂತ ಕರಲಿಂಗನ್ನವರ, ಸಕ್ರಪ್ಪ ಕಲ್ಲಾಪೂರ ಸೇರಿದಂತೆ ಸುತ್ತಲಿನ ಗ್ರಾಮದ ಕಾರ್ಯಕರ್ತರು ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.