ಮತ್ತೆ ಆರಂಭಗೊಂಡ ಬಾದಾಮಿ ಶುಗರ್ಸ್


Team Udayavani, Feb 10, 2021, 4:43 PM IST

ಮತ್ತೆ ಆರಂಭಗೊಂಡ ಬಾದಾಮಿ ಶುಗರ್ಸ್

ಬಾಗಲಕೋಟೆ: ಕಳೆದ ಸುಮಾರು ಹತ್ತಕ್ಕೂ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಜಿಲ್ಲೆಯ ಬಾದಾಮಿತಾಲೂಕಿನ ಬಾದಾಮಿ ಶುಗರ್ ಮಂಗಳವಾರದಿಂದ  ಪುನಾರಂಭಗೊಂಡಿದ್ದು, ಬಾದಾಮಿ ತಾಲೂಕಿನ ರೈತರಲ್ಲಿ ಹರ್ಷ ತಂದಿದೆ.

ಕಾರ್ಖಾನೆಯ ಆವರಣದಲ್ಲಿ ಮಂಗಳವಾರ ಎಂಆರ್‌ಎನ್‌ (ನಿರಾಣಿ) ಉದ್ಯಮ ಸಮೂಹದ ಕಾರ್ಯ ನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿಕಬ್ಬು ನುರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ರೈತರಲ್ಲಿ ಹರ್ಷ: ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಬಾದಾಮಿ ಶುಗರÕ ಕಾರ್ಖಾನೆ ಪುನಾರಂಭಗೊಂಡಿದೆ. ಇದರಿಂದ ಭಾಗದ ರೈತರಲ್ಲಿಹರ್ಷ ತಂದಿದೆ. ನಿರಾಣಿ ಉದ್ಯಮ ಸಮೂಹ ರೈತರ ಹಿತದೃಷ್ಟಿಯಿಂದ ಈ ಕಾರ್ಖಾನೆ ಆರಂಭಿಸಿದ್ದು, ಈ ಭಾಗದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

10ವರ್ಷಕ್ಕೂ ಹೆಚ್ಚು ಕಾಲ ಬಂದ್‌ ಆಗಿದ್ದ ಈ ಕಾರ್ಖಾನೆಯನ್ನು ನಿರಾಣಿ ಉದ್ಯಮ ಸಮೂಹವು ತನ್ನ ಸುಪರ್ದಿಗೆ ತೆಗೆದುಕೊಂಡು ಅತ್ಯಂತ ಕಡಿಮೆ ಅವಧಿಯಲ್ಲಿ ಕಾರ್ಖಾನೆಯನ್ನು ಸಿದ್ದಪಡಿಸಿ ಕಬ್ಬು ನುರಿಸಲು ಆರಂಭಿಸಿರುವುದು ಒಂದುದಾಖಲೆಯಾಗಿದೆ. ಬರಡು ಭೂಮಿಗೆ ನೀರಾವರಿಹಾಗೂ ರೈತರು ಬೆಳೆದ ಕಬ್ಬಿಗೆ ಮಾರುಕಟ್ಟೆ ಕಲ್ಪಿಸಲು ನಿರಾಣಿ ಉದ್ಯಮ ಸಮೂಹ ಸದಾ ರೈತರೊಂದಿಗಿದೆಎಂದು ಹೇಳಿದರು.

ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ 1 ಲಕ್ಷ ಎಕರೆ ನೀರಾವರಿ ಕಲ್ಪಿಸುವುದು ಸಚಿವ ಮುರುಗೇಶ ನಿರಾಣಿಅವರ ಸಂಕಲ್ಪವಾಗಿದೆ. ಈಗಾಗಲೇ ಬಾದಾಮಿ ತಾಲೂಕಿನಲ್ಲಿ ಹೆರಕಲ್‌ ಏತ ನೀರಾವರಿ ಮೂಲಕ 40ಸಾವಿರ ಎಕರೆಗೆ ನೀರಾವರಿ ಸೌಕರ್ಯ ನೀಡಲಾಗಿದೆ. ಬಾದಾಮಿ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಭಾಗದ ನೀರಾವರಿಗಾಗಿವಿಶೇಷ ಪ್ರಯತ್ನ ಮಾಡಿದ್ದು, ಹಲವಾರು ಯೋಜನೆಗಳನ್ನು ಕಾರ್ಯಗತಗೊಳಿಸಿದ್ದಾರೆ. ಈ ಭಾಗವು ಹಸಿರಿನಿಂದ ಕಂಗೊಳಿಸಬೇಕು. ರೈತರು ಕಬ್ಬು ಬೆಳೆಯಬೇಕು. ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಸಿದ್ದರಾಮಯ್ಯ ಹಾಗೂ ಮುರುಗೇಶ ನಿರಾಣಿ ಅವರ ಆಶಯವಾಗಿದೆ ಎಂದು ಹೇಳಿದರು.

ಕಬ್ಬು ಬೆಳೆಯುವ ರೈತರಿಗೆ ನಿಶ್ಚಿತ ಮಾರುಕಟ್ಟೆ ಒದಗಿಸುವ ಮಹಾದಾಸೆಯಿಂದ ನಿರಾಣಿ ಸಮೂಹ ಈಭಾಗದಲ್ಲಿ ಎಂ.ಆರ್‌.ಎನ್‌, ಕೇದಾರನಾಥ ಹಾಗೂ ಬಾದಾಮಿ ಸಕ್ಕರೆ ಕಾರ್ಖಾನೆ ಆರಂಭಿಸಿದೆ. ಆ ಮೂಲಕ3ನೇ ಕಾರ್ಖಾನೆ ಈಗ ಕಾರ್ಯಾರಂಭ ಮಾಡಿದೆ. ಎಂದು ಹೇಳಿದರು.

48ಗಂಟೆಯಲ್ಲಿ ಬಿಲ್‌ ಪಾವತಿಗೆ ವ್ಯವಸ್ಥೆ: ರೈತರಿಗೆ ಸಮಯಕ್ಕೆ ಸರಿಯಾಗಿ ಬಿಲ್‌ ಪಾವತಿ ಮಾಡುವ ಮೂಲಕ ರೈತನ ಶ್ರಮಕ್ಕೆ ತಕ್ಕ ಆದಾಯ ದೊರೆಯುವಂತೆಮಾಡುವುದು ನಿರಾಣಿ ಸಮೂಹದ ಮೊದಲ ಆದ್ಯತೆಯಾಗಿದೆ. ಈ ಹಂಗಾಮಿನಲ್ಲಿ ಎಂಆರ್‌ಎನ್‌ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆಜ.31 ರವರೆಗೆ ಹಾಗೂ ಕೇದಾರನಾಥ ಶುಗರ್ ಕಬ್ಬು ಪೂರೈಸುತ್ತಿರುವ ರೈತರಿಗೆ ಫೆ.7 ರವರೆಗಿನ ಬಿಲ್ಲುಗಳನ್ನು ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಅದರಂತೆ ಬಾದಾಮಿ ಶುಗರ್ಗೆ ಕಬ್ಬು ಕಳಿಸುವ ರೈತರಿಗೆ ಕಬ್ಬು ಪೂರೈಸಿದ 48 ಗಂಟೆಗಳಲ್ಲಿ ಬಿಲ್‌ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಹಿರಿಯ ಮುಖಂಡ ಪಿ.ಆರ್‌. ಗೌಡರ ಮಾತನಾಡಿ, ಹಲವಾರು ಸ್ಥಗಿತಗೊಂಡ ಕಾರ್ಖಾನೆಗಳಿಗೆ ಮರುಜೀವ ನೀಡಿ ಯಶಸ್ವಿಯಾಗಿರುವ ಸಚಿವ ಮುರುಗೇಶ ನಿರಾಣಿಯ ಅವರ ಮಾರ್ಗದರ್ಶನದಲ್ಲಿ ಬಾದಾಮಿ ಶುಗರ್ ಇನ್ನು ಮುಂದೆ ನಿರಾಂತಕವಾಗಿ ಕಾರ್ಯ ನಿರ್ವಹಿಸಲಿದೆ. ಈ ಭಾಗದ ರೈತರ ಸೇವೆಯಕಾರ್ಯದಲ್ಲಿ ನಿರತವಾಗಲಿದೆ ಎಂದು ಹೇಳಿದರು. ಮುಖಂಡ ಮಧು ಯಡ್ರಾಮಿ ಮಾತನಾಡಿ,ಬಾದಾಮಿ ತಾಲೂಕಿನಲ್ಲಿ ನಿರಾಣಿ ಸಮೂಹ 3ಕಾರ್ಖಾನೆ ಪ್ರಾರಂಭಿಸಿರುವುದರಿಂದ ರೈತರಿಗೆ ಅನುಕೂಲವಾಗುವ ಜತೆಗೆ ಈ ಭಾಗದ ಯುವಕರಿಗೆ ಸ್ಥಳಿಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಇದು ಬಾದಾಮಿ ತಾಲೂಕಿನ ಆರ್ಥಿಕ ವಿಕಾಸಕ್ಕೆ ನಾಂದಿಯಾಗಲಿದೆ ಎಂದು ತಿಳಿಸಿದರು.

ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ರವಿಕಾಂತ ಪಾಟೀಲ ಮಾತನಾಡಿ ಕಾರ್ಮಿಕರು ಹಾಗೂ ಅಧಿಕಾರಿಗಳ ಅವಿರತ ಶ್ರಮದಿಂದ ಮುಚ್ಚಿದ ಕಾರ್ಖಾನೆಯನ್ನು ಕಡಿಮೆ ಅವಧಿಯಲ್ಲಿ ಪುನರಾರಂಭ ಮಾಡಲು ಸಹಕಾರಿಯಾಗಿದೆ. ಬಾದಾಮಿ ಭಾಗದ ರೈತರ ಪಾಲಿಗೆ ವರದಾನವಾಗಲಿರುವ ಕಾರ್ಖಾನೆಯಅಭಿವೃದ್ದಿಗೆ ಕೈಜೋಡಿಸಬೇಕು ಎಂದರು. ಬೀಳಗಿ ಬಿಜೆಪಿ ಘಟಕದ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮುಖಂಡರಾದ ಮಹೆಂದ್ರ ಪಾಟೀಲ, ಮುಚಖಂಡಯ್ಯ ಹಂಗರಗಿ, ಆರ್‌.ವಿ. ವಟ್ನಾಳ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.