ಪ್ರತಿಷ್ಠೆ ಕೈಬಿಟ್ಟು ಸಮಸ್ಯೆ ಬಗೆಹರಿಸಲಿ
Team Udayavani, Apr 15, 2021, 8:10 PM IST
ಲೋಕಾಪುರ: ಕೊರೊನಾ ರೋಗದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು, ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆ ಬಗೆಹರಿಸಬೇಕಿತ್ತು. ಆದರೆ, ರಾಜ್ಯ ಸರಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ. ನೌಕರರ ಬೇಡಿಕೆಗಳನ್ನು ಈಡೇರಿಸದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣ ಸ್ವಯಂಕೃತ ಅಪರಾಧವಾಗಿದೆ ಎಂದರು.
ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್ಆರ್ ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು, ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಾಶಿನಾಥ ಹುಡೇದ ಮಾತನಾಡಿದರು. ಈ ವೇಳೆ ಗೋವಿಂದ ಕೌಲಗಿ, ನಾಗರಾಜ ಜಾಲಿಕಟ್ಟಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ