ಮದರಸಾ ಮುಂಭಾಗ ಕರ್ತವ್ಯ ನಿರ್ವಹಿಸಿದ್ದ ಗುಪ್ತವಾರ್ತೆ ಪೊಲೀಸ್ ಪೇದೆಗೆ ಸೋಂಕು


Team Udayavani, Apr 15, 2020, 2:48 PM IST

ಮದರಸಾ ಮುಂಭಾಗ ಕರ್ತವ್ಯ ನಿರ್ವಹಿಸಿದ್ದ ಗುಪ್ತವಾರ್ತೆ ಪೊಲೀಸ್ ಪೇದೆಗೆ ಸೋಂಕು

ಬಾಗಲಕೋಟೆ : ಜಿಲ್ಲೆಯ ಮುಧೋಳ ಸಿಪಿಐ ಕಚೇರಿಯಲ್ಲಿ ಗುಪ್ತ ವಾರ್ತೆ ಸಿಬ್ಬಂಧಿಯಾಗಿ  ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೂ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇದರಿಂದ ಲಾಕ್ ಡೌನ್ ಕಡ್ಡಾಯ  ಅನುಷ್ಠಾನಕ್ಕಾಗಿ ಕೋವಿಡ್-19  ವಿರುದ್ಧ ಹೋರಾಡುತ್ತಿದ್ದ ಪೊಲೀಸರಲ್ಲೂ  ಭೀತಿ ಹೆಚ್ಚಿದೆ.

ರಾಜ್ಯ ಸರ್ಕಾರ  ಬುಧವಾರ ಮಧ್ಯಾಹ್ನ ಕೋವಿಡ್-19 ಸೋಂಕಿತರ ಹೆಲ್ತ್ ಬುಲೆಟಿನ್ ಬಿಡುಗಡೆ  ಮಾಡಿದ್ದು,  ರೋಗಿ
ಸಂಖ್ಯೆ ಪಿ-262ನೇ ವ್ಯಕ್ತಿ,  ಮುಧೋಳದಲ್ಲಿ ಸೋಂಕು ತಗುಲಿದ  ಇಬ್ಬರು ವ್ಯಕ್ತಿಗಳಿದ್ದ  ಮದರಸಾ ಸುತ್ತ  ಕರ್ತವ್ಯ ನಿರ್ವಹಿಸುತ್ತಿದ್ದ  39  ವರ್ಷದ  ಪೊಲೀಸ್ ಪೇದೆಗೆ ಸೋಂಕು  ತಗುಲಿರುವುದು  ದೃಢಪಟ್ಟಿದೆ.

ಪೇದೆ ಮೂಲತಃಜಮಖಂಡಿಯವರಾಗಿದ್ದು, ಮುಧೋಳದ ಸಿಪಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾ.27ರಂದು ಮದರಸಾದಲ್ಲಿ ಲಾಕ್ ಡೌನ್ ಉಲ್ಲಂಘಿಸಿ, ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಮೊದಲಿಗೆ ಅಲ್ಲಿಗೆ ಭೇಟಿ ನೀಡಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಇದೇ ಪೇದೆ. ಅಲ್ಲದೇ ಜಮಖಂಡಿಂದ ನಿತ್ಯ ಮುಧೋಳಕ್ಕೆ ಬಂದು ಹೋಗುತ್ತಿದ್ದ ಅವರು, ಜಮಖಂಡಿಯಲ್ಲಿ ಮನೆ ಹೊಂದಿದ್ದಾರೆ. ಈಗ ಪೇದೆಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಅವರ ಮನೆಯವರು, ಇಲಾಖೆಯಲ್ಲಿ ಕೆಲಸ ಮಾಡುವಾಗ ಅವರೊಂದಿಗೆ ನೇರ, ಪ್ರಾಥಮಿಕ ಹಾಗೂ ದ್ವಿತೀಯ ಹಂತದಲ್ಲಿ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈಗಾಗಲೇ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಗಂಟಲು ಮಾದರಿ ಪಡೆದು, ಪರೀಕ್ಷೆಗೆ ರವಾನಿಸಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ತೀವ್ರ ಜ್ವರ ಹಾಗೂ ನಿರಂತರ ಸೀನುವ ಸಮಸ್ಯೆಗೆ ಒಳಗಾಗಿದ್ದ ಪೊಲೀಸ್ ಪೇದೆಗೆ ಜಮಖಂಡಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಪರೀಕ್ಷೆಗೆ ಒಳಪಡಿಸಿದ್ದು, ಕೋವಿಡ್-19 ಖಚಿತಪಟ್ಟಿದೆ. ಸಧ್ಯ ಅವರನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ಯೂಶನ್ ಹೇಳುವ ಶಿಕ್ಷಕಿ ಪತಿಗೆ ಸೋಂಕು :
ಬಾಗಲಕೋಟೆ ಹಳೆಯ ನಗರದಲ್ಲಿ ಈಗಾಗಲೇ 10 ಸೋಂಕು ಪ್ರಕರಣ ಪತ್ತೆಯಾದ ಪ್ರದೇಶದಲ್ಲೇ ಬುಧವಾರ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಕಳೆದ ಏ.9ರಂದು ಕೋವಿಡ್-19 ಖಚಿತಪಟ್ಟ ರೋಗಿ ಸಂಖ್ಯೆ ಪಿ 186 ನ ನಾಲ್ಕು ವರ್ಷದ ಮಗುವಿನೊಂದಿಗೆ ಸಂಪರ್ಕವಿದ್ದ 52 ವರ್ಷದ ಪುರುಷ (ಪಿ262)ನಿಗೂ ಸೋಂಕು ಖಚಿತಪಟ್ಟಿದೆ. ಈ ಪುರುಷನ ಪತ್ನಿ ಮನೆಯಲ್ಲಿ ಮಕ್ಕಳಿಗೆ ಟ್ಯೂಶನ್ ಹೇಳುತ್ತಿದ್ದರು. ಈ ಪುರುಷನ ಪತ್ನಿಗೂ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಒಟ್ಟಾರೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ವರೆಗೆ ಒಟ್ಟು 14 ಜನರಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬ ವೃದ್ಧ ಮೃತಪಟ್ಟಿದ್ದಾನೆ. ಇದೀಗ ಟ್ಯೂಶನ್ ಹೇಳುವ ಮಹಿಳೆಯ ಪತಿ ಹಾಗೂ ಮುಧೋಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಜನರನ್ನು ತಪಾಸಣೆಗೆ ಒಳಪಡಿಸಬೇಕಾದ ತುರ್ತು ಅನಿವಾರ್ಯತೆ ಜಿಲ್ಲಾಡಳಿತಕ್ಕಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.