ಕೋವಿಡ್ ಸೀರಿಯಸ್‌: ಜನರಿಗಿಲ್ಲ ಕಾಮನ್‌ಸೆನ್ಸ್‌!

ಬಾಗಲಕೋಟೆ ನಗರವೀಗ ಹಾಟ್‌ಸ್ಪಾಟ್‌ ಆದರೂ ಅನಗತ್ಯ ಅಲೆದಾಟ ನಿಲ್ಲುತ್ತಿಲ್ಲ

Team Udayavani, Apr 15, 2020, 2:01 PM IST

15-April-16

ಬಾಗಲಕೋಟೆ: ನಗರದ ಕಿಲ್ಲಾ ಭಾಗದಲ್ಲಿ ಅನಗತ್ಯವಾಗಿ ರಸ್ತೆಗೆ ಬಂದ ಯುವಕರಿಗೆ ಎಚ್ಚರಿಕೆ ನೀಡಿ ಬಸ್ಕಿ ಹೊಡಿಸಲಾಯಿತು.

ಬಾಗಲಕೋಟೆ: ಇಲ್ಲಿನ ಹಳೆಯ ನಗರದ ಒಂದೇ ಏರಿಯಾದಲ್ಲಿ ಬರೋಬರಿ 10 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಡೀ ನಗರವೀಗ ಹಾಟ್‌ಸ್ಪಾಟ್‌ ಆಗಿದೆ. ಇದರಿಂದ ಲಾಕ್‌ಡೌನ್‌ ಬಿಗಿಗೊಳಿಸಿದರೂ ಜನರ ಅಗತ್ಯ ಅಲೆದಾಟ ಮಾತ್ರ ನಿಲ್ಲುತ್ತಿಲ್ಲ ಎಂಬ ಅಸಮಾಧಾನ ಪ್ರಜ್ಞಾವಂತರಿಂದ ಕೇಳಿ ಬರುತ್ತಿದೆ.

ನಗರದ ವಾರ್ಡ್‌ ನಂ.4 ಮತ್ತು 14ರ ಪ್ರದೇಶದಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇದರ ಮಧ್ಯೆ ಇನ್ನೂ ಹಲವು ವಾರ್ಡ್‌ಗಳಿವೆ. ವಾರ್ಡ್‌ 14ರಲ್ಲಿ ಮೃತ ವೃದ್ಧ ಮತ್ತು ಈವರೆಗೆ ಸೋಂಕು ಕಂಡು ಬಂದ 9 ಜನರ ಮನೆಗಳಿವೆ. 4ರಲ್ಲಿ ವೃದ್ಧನ ದಿನಸಿ ಅಂಗಡಿ ಇದೆ. ಹೀಗಾಗಿ ಎರಡೂ ಏರಿಯಾ ಸೀಲ್‌ ಮಾಡಿ, ಜನರು ಓಡಾದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಆದರೂ, ಸಕಾರಣವಿಲ್ಲದೇ ಓಡಾಡುವವರ ಸಂಖ್ಯೆ ಇಳಿಯುತ್ತಿಲ್ಲ. ಲಾಠಿ ಬೀಸಿ, ಬಸ್ಕಿ ಹೊಡೆಸಿದರೂ ಕೆಲವರು ರಸ್ತೆಗಿಳಿಯುತ್ತಲೇ ಇದ್ದಾರೆ.

ಪಿಡಿಒ ಮೇಲೆ ಹಲ್ಲೆ: ಇನ್ನು ಮುಧೋಳ ತಾಲೂಕು ದಾನಹಟ್ಟಿಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲು ಹೋದ ಪಿಡಿಒನ ಮೇಲೆ ಗ್ರಾಮದ ಯುವಕನೊಬ್ಬ ಹಲ್ಲೆ ನಡೆಸಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಾಗಲಕೋಟೆ ಹಳೆಯ ನಗರದಲ್ಲಿ ನಗರಸಭೆ ಮಾಜಿ ಸದಸ್ಯ ಹಾಗೂ ಅಪರ ಜಿಲ್ಲಾ ಧಿಕಾರಿ ಮಧ್ಯೆ ವಾಗ್ವಾದವೂ ನಡೆದಿದೆ. ಏಕವಚನದಲ್ಲಿ ಮಾತನಾಡಿದರೆಂದು ಎಡಿಸಿ ವಿರುದ್ಧ ನಗರಸಭೆ ಮಾಜಿ ಸದಸ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಪ್ರಕರಣಗಳೆಲ್ಲ ಕೊರೊನಾದಂತಹ ಸಂದರ್ಭದಲ್ಲಿ ಸರಿಯಾ ಎಂಬ ಕಾಮನ್‌ಸೆನ್ಸ್‌ ಇಲ್ಲದೇ ನಡೆಯುತ್ತಿರುವುದು ವಿಪರ್ಯಾಸ ಎಂದು ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಗರ್ಭಿಣಿಗೆ ನೆರವಾದ ಪತ್ರಕರ್ತರು: ಕಾರಣವಿಲ್ಲದೇ ಕೆಲವರು ಓಡಾಡುತ್ತಿದ್ದರೆ, ಇನ್ನೂ ಕೆಲವರು ಆಸ್ಪತ್ರೆ, ತುರ್ತು ಸಂದರ್ಭದಲ್ಲಿ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಯೊಬ್ಬರು, ವಾಹನ ಸಿಗದೇ ಅಳುತ್ತ, ನಡೆದುಕೊಂಡು ಹೊರಟಿದ್ದನ್ನು ಗಮನಿಸಿದ ನಗರದ ಪತ್ರಕರ್ತರೇ, ಆ ಮಹಿಳೆಯನ್ನು ಊರು ಸೇರಲು ಆ್ಯಂಬುಲೆನ್ಸ್‌ ತರಿಸಿ, ಮಾನವೀಯತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.