ಡಿಸಿ-ಸಿಇಒ ಗ್ರಾಮ ವಾಸ್ತವ್ಯ


Team Udayavani, Feb 15, 2019, 10:23 AM IST

15-february-13.jpg

ಬಾಗಲಕೋಟೆ: ಜಿಲ್ಲಾಡಳಿತವನ್ನು ಗ್ರಾಮೀಣ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹಾಗೂ ಜಿಪಂ ಸಿಇಒ ಗಂಗೂಬಾಯಿ ಮಾನಕರ ಗುರುವಾರ, ಜಮಖಂಡಿ ತಾಲೂಕಿನ ಆಲಬಾಳ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿದರು.

ಗುರುವಾರ ರಾತ್ರಿ 7ರ ಹೊತ್ತಿಗೆ ಕಂದಾಯ ಇಲಾಖೆ ಮತ್ತು ಜಿ.ಪಂ. ಅಧೀನದ ವಿವಿಧ 28 ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ನಲ್ಲಿ ಬಾಗಲಕೋಟೆಯಿಂದ ಜಮಖಂಡಿ ತಾಲೂಕು
ಆಲಬಾಳ ಗ್ರಾಮಕ್ಕೆ ತೆರಳಿದರು.

ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಅವರೇ ಸ್ವತಃ ಬಸ್‌ನಲ್ಲಿ ಕುಳಿತ ಎಲ್ಲ ಅಧಿಕಾರಿಗಳ ಹಾಜರಾತಿ ಪಡೆದರು. ಬಳಿಕ ರಾತ್ರಿ ಆಲಬಾಳ ಗ್ರಾಮದಲ್ಲಿ ಗ್ರಾಮಸ್ಥರ ಸಭೆ ನಡೆಸಿ, ಕುಂದು-ಕೊರತೆ ಆಲಿಸಿದರು. ರಾತ್ರಿ ಇಡೀ ಗ್ರಾಮದಲ್ಲೇ ವಾಸ್ತವ್ಯ ಇದ್ದು, ರಾಜ್ಯ, ಕೇಂದ್ರ ಸರ್ಕಾರದ ಸೌಲಭ್ಯಗಳು ಜನರಿಗೆ ತಿಳಿಸುವ ಜತೆಗೆ, ಗ್ರಾಮದ ಸಮಸ್ಯೆ ಆಲಿಸಿದರು. 

ಶ್ರಮ-ಇಂಧನ ಉಳಿತಾಯ: ಡಿಸಿ ಮತ್ತು ಜಿಪಂ ಸಿಇಒ ಕೈಗೊಂಡ ಈ ಗ್ರಾಮ ವಾಸ್ತವ್ಯ ವಿಶೇಷತೆಯಿಂದ ಕೂಡಿತ್ತು. 28 ಜನ ಜಿಲ್ಲಾ ಮಟ್ಟದ ಅಧಿಕಾರಿಗಳು, ಅವರ ವಾಹನ, ಚಾಲಕರನ್ನು ಕರೆದುಕೊಂಡು ಹೋಗಿ, ಎಲ್ಲಾ ವಾಹನಗಳ ಇಂಧನ, ಚಾಲಕರ ಶ್ರಮ ವ್ಯಯಿಸುವ ಬದಲು, ಸಾರಿಗೆ ಸಂಸ್ಥೆಯ ಬಸ್‌ ಬಳಸಲಾಯಿತು. ಎಲ್ಲಾ ಅಧಿಕಾರಿಗಳೂ ಒಟ್ಟಿಗೆ ತೆರಳಿ, ಗ್ರಾಮ ವಾಸ್ತವ್ಯದ ಬಳಿಕ ಶುಕ್ರವಾರ ಒಟ್ಟಿಗೆ ಬಾಗಲಕೋಟೆಗೆ ಮರಳಲು ನಿರ್ಧರಿಸಿ, ಬಸ್‌ನಲ್ಲೇ ಸಂಚರಿಸಿ, ಬಸ್‌ನಲ್ಲೇ ಆಗಮಿಸಿದರು.

ಜಿಲ್ಲಾಡಳಿತದ ಸೇವೆಯನ್ನು ಗ್ರಾಮ ಮಟ್ಟದಲ್ಲಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಗ್ರಾಮ ವಾಸ್ತವ್ಯ ನಡೆಸಲಾಗುತ್ತಿದೆ. ಜನರ ಕುಂದು-ಕೊರತೆ ಆಲಿಸಿ, ಸ್ಥಳೀಯವಾಗಿ ಪರಿಹರಿಸಲು ಪ್ರಯತ್ನಿಸಲಾಗುವುದು. ಜಿಪಂ ಸಿಇಒ ವಿಶೇಷ
ಮುತುವರ್ಜಿ ವಹಿಸಿದ್ದು, ಜಿ.ಪಂ. ಮತ್ತು ಕಂದಾಯ ಇಲಾಖೆಯ ಸೌಲಭ್ಯ ಜನತೆಗೆ ಕಲ್ಪಿಸಲಾಗುವುದು.
 ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.