ರಾಜ್ಯದಲ್ಲೀಗ ಬಾಗಲಕೋಟೆ ಶಕ್ತಿ ಕೇಂದ್ರ: ಯಾವ ಜಿಲ್ಲೆಗೂ ಇಲ್ಲದ ಸೌಭಾಗ್ಯ ಕೋಟೆನಾಡಿಗೆ


Team Udayavani, Jan 14, 2021, 9:58 AM IST

ರಾಜ್ಯದಲ್ಲೀಗ ತುಮಕೂರು ಶಕ್ತಿ ಕೇಂದ್ರ: ಯಾವ ಜಿಲ್ಲೆಗೂ ಇಲ್ಲದ ಸೌಭಾಗ್ಯ ಕೋಟೆನಾಡಿಗೆ

ಬಾಗಲಕೋಟೆ: ರಾಜ್ಯ ರಾಜಕಾರಣದಲ್ಲಿ ಕೋಟೆನಾಡು ಬಾಗಲಕೋಟೆ ಈಗ ಶಕ್ತಿ ಕೇಂದ್ರವಾಗಿ ಹೊರ ಹೊಮ್ಮಿದೆ. ರಾಜ್ಯದ ಯಾವುದೇ ಜಿಲ್ಲೆಗೆ ಇಲ್ಲದ ರಾಜಕೀಯ ಸ್ಥಾನಮಾನಗಳ ಶಕ್ತಿ ಕೇಂದ್ರದ ಸೌಭಾಗ್ಯ ಕೋಟೆ ನಾಡಿಗೆ ಲಭಿಸಿದೆ.

ಹೌದು, ರಾಜ್ಯ ಸರ್ಕಾರದಲ್ಲಿ ಪ್ರಭಲ ಎನಿಸಿರುವ ಪಿಡಬ್ಲುಡಿ ಖಾತೆಯೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನ, ವಿಧಾನಸಭೆಯ ವಿರೋಧ ಪಕ್ಷದ ನಾಯಕರು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು ಇದೇ ಜಿಲ್ಲೆಯವರು. ಬುಧವಾರ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೀಳಗಿ ಕ್ಷೇತ್ರದ ಮುರುಗೇಶ ನಿರಾಣಿ, ಬೆಂಗಳೂರಿನ ಮಹದೇವಪುರ ವಿಧಾನಸಭೆ ಪ್ರತಿನಿಧಿಸುವ ಅರವಿಂದ ಲಿಂಬಾವಳಿ ಕೂಡ ಬಾಗಲಕೋಟೆ ಜಿಲ್ಲೆಯವರು ಎಂಬುದು ವಿಶೇಷ.

ಜಿಲ್ಲೆಗೆ ಬಂಪರ್ ಕೊಡುಗೆ: ರಾಜಕೀಯ ಚಟುವಟಿಕೆಗಳಲ್ಲಿ ಸದಾ ಕೇಂದ್ರಬಿಂದು ಎನಿಸಿಕೊಳ್ಳುವ ಬಾಗಲಕೋಟೆ, ಅಧಿಕಾರ ಹಿಡಿಯುವಲ್ಲೂ ಅಷ್ಟೇ ಮುಂಚೂಣಿಯಲ್ಲಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾತ್ರ ಜಿಲ್ಲೆಗೆ ಸಚಿವ ಸ್ಥಾನ ದೊರೆತಿರಲಿಲ್ಲ. ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಸರ್ಕಾರವಿರಲಿ, ಜಿಲ್ಲೆಗೆ ಒಬ್ಬರಿಲ್ಲ, ಇಬ್ಬರು ಸಚಿವರಾಗುತ್ತಲೇ ಇರುತ್ತಾರೆ. ಅಂತಹ ರಾಜಕೀಯ ಶಕ್ತಿ ಜಿಲ್ಲೆಯ ನಾಯಕರಲ್ಲೂ ಇದೆ.

ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಆಗಿರುವ ಗೋವಿಂದ ಕಾರಜೋಳ, ಪಿಡಬ್ಲುಡಿಯಂತಹ ಪ್ರಮುಖ ಖಾತೆ ನಿರ್ವಹಿಸುತ್ತಿದ್ದಾರೆ. ಅವರೊಂದಿಗೆ ಇದೀಗ ಮುರುಗೇಶ ನಿರಾಣಿ ಕೂಡ, 2ನೇ ಬಾರಿ ಸಚಿವರಾಗಿದ್ದಾರೆ. ಈ ಹಿಂದೆ ಐದು ವರ್ಷ ಕೈಗಾರಿಕೆ ಸಚಿವರಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಈ ಬಾರಿಯೂ ಕೈಗಾರಿಕೆ ಖಾತೆ ದೊರೆಯುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ಇದನ್ನೂ ಓದಿ:ಬೇಗುದಿ ಸ್ಫೋಟಕ್ಕೆ ವಿಸ್ತರಣೆ ಟಿಕ್‌ ಟಿಕ್‌…. ಕುತ್ತಾಗಲಿದೆಯೇ ಆರೋಪ, ಆಕ್ರೋಶ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲೂ ಜಿಲ್ಲೆಗೆ ಎರಡು ಸಚಿವ ಸ್ಥಾನ ದೊರೆತಿದ್ದವು. ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಎಸ್.ಆರ್. ಪಾಟೀಲ, ಐಟಿ-ಬಿಟಿ ಸಚಿವರಾಗಿದ್ದರೆ, ತೇರದಾಳ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಉಮಾಶ್ರೀ ಕೂಡ ಎರೆಡೆರಡು ಖಾತೆ ನಿರ್ವಹಿಸಿದ್ದರು. ಪಾಟೀಲ ಬಳಿಕ ಎಚ್.ವೈ. ಮೇಟಿ, ಅವರ ಬಳಿಕ ಆರ್.ಬಿ. ತಿಮ್ಮಾಪುರ ಕೂಡ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ವಿರೋಧ ಪಕ್ಷದ ಸ್ಥಾನಗಳೂ ಜಿಲ್ಲೆಗೆ: ಸರ್ಕಾರದಷ್ಟೇ ಪ್ರಮುಖ ಸ್ಥಾನಮಾನ ಹೊಂದಿರುವ ವಿಧಾನಸಭೆ ಹಾಗೂ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನಗಳೂ ಜಿಲ್ಲೆಗೆ ಒಲಿದಿವೆ. ಬಾದಾಮಿ ಕ್ಷೇತ್ರ ಪ್ರತಿನಿಧಿಸುವ ಸಿದ್ದರಾಮಯ್ಯ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇನ್ನು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಎಸ್.ಆರ್. ಪಾಟೀಲರು, ಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹೀಗಾಗಿ ಜಿಲ್ಲೆಗೆ ಎರಡು ವಿರೋಧ ಪಕ್ಷದ ನಾಯಕ ಸ್ಥಾನಗಳು, ಓರ್ವ ಡಿಸಿಎಂ, ಲಿಂಬಾವಳಿ ಸಹಿತ ಇಬ್ಬರು ಸಚಿವರು ಲಭಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಕೋಟೆ ನಾಡು ಶಕ್ತಿ ಕೇಂದ್ರವಾಗಿ ಹೊರ ಹೊಮ್ಮಿದೆ.

ಅಭಿವೃದ್ಧಿಗೆ ಬಳಕೆಯಾಗಲಿ: ಸರ್ಕಾರ, ವಿರೋಧ ಪಕ್ಷ ಸಹಿತ ಎರಡಲ್ಲೂ ಪ್ರಮುಖ ಹುದ್ದೆಗಳು ಜಿಲ್ಲೆಗೆ ಲಭಿಸಿದ್ದು, ಅವುಗಳ ಸದ್ಭಳಕೆಯಾಗಬೇಕಿದೆ. ರಾಜಕೀಯ ಪ್ರತಿಷ್ಟೆಗಳೇನೇ ಇದ್ದರೂ, ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಎಲ್ಲರೂ ಒಂದಾಗಿ ಚಿಂತಿಸಿ, ಮುಂದಡಿ ಇಡಬೇಕು ಎಂಬುದು ಪ್ರಜ್ಞಾವಂತರ ಒತ್ತಾಸೆ.

ಆಲಮಟ್ಟಿ ಜಲಾಶಯವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಬೇಕು. ಜಿಲ್ಲೆಗೆ ಬಿ ಸ್ಕೀಂನಡಿ ಹಂಚಿಕೆಯಾದ ನೀರು ಬಳಸಿಕೊಳ್ಳಬೇಕು. ಜಿಲ್ಲೆಯ ಸಮಗ್ರ ನೀರಾವರಿ, ಕೆರೆಗಳಿಗೆ ನೀರು ತುಂಬಿಸಿ, ಅಂತರ್‌ಜಲ ಹೆಚ್ಚಿಸಬೇಕು. ಹೆಸರಿಗೆ ಮಾತ್ರ ಸಿಮೀತವಾದ ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ದೊಡ್ಡ ಮಟ್ಟದ ಅನುದಾನದೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ವಿಸ್ತರಿಸಬೇಕು, ಪ್ರತಿ ಹಳ್ಳಿಯೂ ಮಾದರಿಯಾಗಬೇಕು. ಅಂತಹ ವಿಫುಲ ಅವಕಾಶ-ಸಾಮರ್ಥ್ಯ ಎಲ್ಲವೂ ಜಿಲ್ಲೆಯ ರಾಜಕೀಯ ನಾಯಕರ ಕೈಗೆ ಸಿಕ್ಕಿವೆ. ಅದನ್ನು ಸದ್ಭಳಕೆ ಮಾಡಿಕೊಳ್ಳುವ ಪ್ರಯತ್ನವಾಗಲಿ ಎಂಬುದು ಜಿಲ್ಲೆಯ ಜನರ ಅಭಿಲಾಸೆ.

ಸಮಗ್ರ ಅಭಿವೃದ್ಧಿಗೆ ಮುಂದಾಗಲಿ

ಬಾಗಲಕೋಟೆ ಜಿಲ್ಲೆ ಈಗ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರವಾಗಿದೆ. ಡಿಎಂಸಿ, ಸಚಿವರು, ವಿರೋಧ ಪಕ್ಷದ ನಾಯಕರು ನಮ್ಮ ಜಿಲ್ಲೆಯವರೇ ಇದ್ದಾರೆ. ಆಲಮಟ್ಟಿ ಜಲಾಶಯ ಎತ್ತರಿಸಬೇಕು, ಮುಳುಗಡೆಯಾಗುವ 1.36 ಲಕ್ಷ ಎಕರೆ ಭೂಮಿಗೆ ಮಾರುಕಟ್ಟೆ ದರದ ಬೆಲೆ ನೀಡಬೇಕು. ಈ ಅವಧಿಯಲ್ಲಾದರೂ ಈ ಪ್ರಮುಖ ಕೆಲಸ ನಮ್ಮ ಜಿಲ್ಲೆಯ ನಾಯಕರಿಂದ ಆಗಲಿ.

-ಪ್ರಕಾಶ ಅಂತರಗೊಂಡ, ಮುಖಂಡ, ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ

 

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.