ಕೆರೂರ: ರಸ್ತೆ ಬದಿ ನಿಂತವರ ಮೇಲೆ ಹರಿದ ಲಾರಿ ಮೂರು ಸಾವು, ಮೂವರು ಗಂಭೀರ
Team Udayavani, Mar 17, 2020, 5:40 PM IST
ಕೆರೂರ(ಬಾಗಲಕೋಟೆ): ರಸ್ತೆ ಬದಿ ನಿಂತವರ ಮೇಲೆ ಸರಕು ಸಾಗಾಟ ಲಾರಿ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನು ಮೂವರು ಗಂಭೀರ ಗಾಯಗೊಂಡ ಘಟನೆ ಕೆರೂರ ಪಟ್ಟಣದ ಅಮೃತ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಂಗಳವಾರ ಸಂಭವಿಸಿದೆ.
ಮೃತರಲ್ಲಿ ಓರ್ವನ ಹೆಸರು ತಿಳಿದು ಬಂದಿದ್ದು, ಪಟ್ಟಣದ ಲಕ್ಷ್ಮಣ ಹಾದಿಮನಿ (28) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ನರಗುಂದ ನಿವಾಸಿಗಳೆಂದು ತಿಳಿದು ಬಂದಿದೆ.
ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಎಸ್.ಪಿ.ಆರ್ ಟ್ರಾನ್ಸ್ ಪೋರ್ಟ್ ನ ಸರಕು ಲಾರಿ ಚಾಲಕ ಕುಡಿದ ಮತ್ತಿನಲ್ಲಿ ಲಾರಿಯನ್ನು ವೇಗವಾಗಿ ಓಡಿಸಿದ್ದು, ಈ ಸಂದರ್ಭ ಕೃಷಿ ಸಾಮಗ್ರಿಗಳನ್ನು ಮಾರಾಟ ಮಾಡಿ ತಮ್ಮೂರಿಗೆ ತೆರಳಲು ರಸ್ತೆ ಬದಿ ನಿಂತಿದ್ದ ಜನರ ಮೇಲೆ ಲಾರಿ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹೊಡೆದ ರಭಸಕ್ಕೆ ದೇಹಗಳು ಸಂಪೂರ್ಣ ಛಿತ್ರಗೊಂಡಿವೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು