ಕೆರೂರ: ರಸ್ತೆ ಬದಿ ನಿಂತವರ ಮೇಲೆ ಹರಿದ ಲಾರಿ ಮೂರು ಸಾವು, ಮೂವರು ಗಂಭೀರ
Team Udayavani, Mar 17, 2020, 5:40 PM IST
ಕೆರೂರ(ಬಾಗಲಕೋಟೆ): ರಸ್ತೆ ಬದಿ ನಿಂತವರ ಮೇಲೆ ಸರಕು ಸಾಗಾಟ ಲಾರಿ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನು ಮೂವರು ಗಂಭೀರ ಗಾಯಗೊಂಡ ಘಟನೆ ಕೆರೂರ ಪಟ್ಟಣದ ಅಮೃತ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಂಗಳವಾರ ಸಂಭವಿಸಿದೆ.
ಮೃತರಲ್ಲಿ ಓರ್ವನ ಹೆಸರು ತಿಳಿದು ಬಂದಿದ್ದು, ಪಟ್ಟಣದ ಲಕ್ಷ್ಮಣ ಹಾದಿಮನಿ (28) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ನರಗುಂದ ನಿವಾಸಿಗಳೆಂದು ತಿಳಿದು ಬಂದಿದೆ.
ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಎಸ್.ಪಿ.ಆರ್ ಟ್ರಾನ್ಸ್ ಪೋರ್ಟ್ ನ ಸರಕು ಲಾರಿ ಚಾಲಕ ಕುಡಿದ ಮತ್ತಿನಲ್ಲಿ ಲಾರಿಯನ್ನು ವೇಗವಾಗಿ ಓಡಿಸಿದ್ದು, ಈ ಸಂದರ್ಭ ಕೃಷಿ ಸಾಮಗ್ರಿಗಳನ್ನು ಮಾರಾಟ ಮಾಡಿ ತಮ್ಮೂರಿಗೆ ತೆರಳಲು ರಸ್ತೆ ಬದಿ ನಿಂತಿದ್ದ ಜನರ ಮೇಲೆ ಲಾರಿ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹೊಡೆದ ರಭಸಕ್ಕೆ ದೇಹಗಳು ಸಂಪೂರ್ಣ ಛಿತ್ರಗೊಂಡಿವೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು