
ಡೆತ್ ನೋಟ್ ಬರೆದಿಟ್ಟು ನದಿಗೆ ಹಾರಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
Team Udayavani, Jan 17, 2023, 10:28 PM IST

ಬಾಗಲಕೋಟೆ : ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ.
ತಾಯಿ ಉಮಾ ಸುರೇಶ ಮಾಸರೆಡ್ಡಿ(42) ಹಾಗೂ ಇಬ್ಬರು ಮಕ್ಕಳಾದ ಐಶ್ವರ್ಯ(23) ಹಾಗೂ ಸೌಂದರ್ಯ(19) ಮೃತ ದುರ್ದೈವಿಗಳು.
ಮೃತರು ಹುನಗುಂದ ತಾಲೂಕಿನ ಸೂಳೇಬಾವಿ ಗ್ರಾಮದವರು ಎನ್ನುವ ಮಾಹಿತಿ ಲಭ್ಯವಾಗಿದ್ದು, ಐಶ್ವರ್ಯ ಬೆಂಗಳೂರಲ್ಲಿ ಬಿಇ ಸಿವಿಲ್ ಓದುತ್ತಿದ್ದರೆ, ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ಸಿ ಓದುತ್ತಿದ್ದಳು ಎನ್ನಲಾಗಿದೆ.
ಕಮತಗಿ ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ.
ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದ್ದು ಡೆತ್ ನೋಟ್ ಒಂದು ಪತ್ತೆಯಾಗಿದೆ ಆದರೆ ಅದರಲ್ಲಿ ಏನಿದೆ ಎಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.
ಅಮೀನಗಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ನೇಹಿತರ ದುರಂತ ಅಂತ್ಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ ‘ಶಕ್ತಿ’ಗೆ ಚಾಲನೆ

ಶಾಸಕ ಪ್ರದೀಪ್ ಈಶ್ವರ್ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್

Drinking water ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ರಾಮನಗರ: ಟೋಲ್ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
