ಜಾತಿ ವ್ಯವಸ್ಥೆಯಿಂದ ಗುಲಾಮಗಿರಿ


Team Udayavani, Jan 28, 2019, 11:08 AM IST

28-january-23.jpg

ಬಾಗಲಕೋಟೆ: ಸಮುದಾಯದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯಿಂದ ಇಂದು ಸಾಮಾಜಿಕ ಗುಲಾಮಗಿರಿ ಹೆಚ್ಚಿದೆ. ಸಾಮಾಜಿಕ ಗುಲಾಮಗಿರಿ ಹೋದಾಗ ಮಾತ್ರ, ರಾಜಕೀಯ ಗುಲಾಮಗಿರಿ ಹೋಗುತ್ತದೆ ಎಂದು ಸತ್ಯ ಶೋಧಕ ಸಂಸ್ಥೆ ಅಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು.

ನವನಗರದಲ್ಲಿ ರವಿವಾರ ಸಾವಿತ್ರಿಬಾಯಿ ಫುಲೆ 188ನೇ ಜಯಂತಿ ನಿಮಿತ್ತ ಸತ್ಯಶೋಧಕ ಸಂಘ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಳ ಜಾತಿ ಜನರಿಗೆ ಪ್ರತಿಯೊಂದು ವಸ್ತು-ಆಹಾರ ಉತ್ಪಾದನೆ ಮಾಡುವ ಶಕ್ತಿ ಇದ್ದರೂ ಬ್ರಾಹ್ಮಣತ್ವದ ಜಾತಿ ವ್ಯವಸ್ಥೆಯಿಂದ ಅವರಿಗೆ ಅವಕಾಶ ಸಿಗುತ್ತಿರಲಿಲ್ಲ. ಕೆಳ ಜಾತಿಯವರು ಉತ್ತಮ ಬಟ್ಟೆ ಹಾಕಲು, ಬದುಕು ಕೊಟ್ಟಿಕೊಳ್ಳುವ ಸಾಮರ್ಥ್ಯವಿದ್ದರೂ ಜಾತಿ ವ್ಯವಸ್ಥೆ ಅವರನ್ನು ಬಿಡುತ್ತಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಸಾಮಾಜಿಕ ಗುಲಾಮಗಿರಿ ಹೋದಾಗ ಮಾತ್ರ ರಾಜಕೀಯ ಗುಲಾಮಗಿರಿ ಕಳೆದು ಹೋಗಲು ಸಾಧ್ಯ. ಸಂವಿಧಾನ ಉದ್ದೇಶಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಾಗ ಮಾತ್ರ ವರ್ಗರಹಿತ ಸಮಾಜ ನಿರ್ಮಾಣ ಸಾಧ್ಯ ಎಂದರು.

ನೂರಾರು ವರ್ಷಗಳ ಹಿಂದೆ ಈ ದೇಶದಲ್ಲಿ ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆ ಮಾಡಿದ ಸಾಮಾಜಿಕ ಕ್ರಾಂತಿಯಿಂದ ಇಂದು ಹಿಂದುಳಿದವರು, ಮಹಿಳೆಯರು ಪ್ರಗತಿ ಕಾಣಲು ಸಾಧ್ಯವಾಗಿದೆ. ದೇಶದಲ್ಲಿ ಒಟ್ಟು 3743 ಜಾತಿಗಳಿವೆ. ಕರ್ನಾಟಕದಲ್ಲಿ 103 ಅತಿ ಶೂದ್ರ ಜಾತಿಗಳಿವೆ. ಎಸ್‌ಟಿ ವರ್ಗದಲ್ಲಿ ದೇಶದಲ್ಲಿ 1 ಸಾವಿರ ಜಾತಿಗಳಿವೆ. ರಾಜ್ಯದಲ್ಲಿ 54 ಜಾತಿಗಳನ್ನು ಎಸ್‌ಟಿಗೆ ಸೇರಿಸಲಾಗಿದೆ. ಈ ಎಲ್ಲ ಜಾತಿಯವರು ಇಂದು ಸ್ವಾಭಿಮಾನದಿಂದ ಬದುಕಲು, ಒಳ್ಳೆಯ ಬಟ್ಟೆ ಹಾಕಲು ಸಾಧ್ಯವಾಗಲು ಈ ದೇಶದ ಸಂವಿಧಾನ, ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಅವರೇ ಕಾರಣ ಎಂದು ಹೇಳಿದರು.

ದೇಶದಲ್ಲಿ ಕೆಳ ವರ್ಗದ ಜನರಿಗೆ ಸ್ವಾತಂತ್ರ್ಯ, ಸಮಾನತೆ ಕೊಡಿಸಲು ಸತ್ಯ ಶೋಧಕ ಸಾಮಾಜಿಕ ಚಳವಳಿ ಆರಂಭಿಸಿದ್ದರು. ಮುಂಬೈ ಪ್ರಾಂತದಲ್ಲಿ ಈ ಸಾಮಾಜಿಕ ಕ್ರಾಂತಿ ನಡೆದಿದ್ದು, ಜ್ಯೋತಿಬಾ ಮತ್ತು ಸಾವಿತ್ರಬಾಯಿ ಫುಲೆ ಮಾಡಿದ ಕಾರ್ಯದಿಂದ ಎಂದರು.

ವಿಜಯಪುರದ ಪ್ರಾಧ್ಯಾಪಕಿ ಸುಜಾತಾ ಚಲವಾದಿ ಮಾತನಾಡಿ, ಮಹಿಳೆಯರಿಗೆ ಶಿಕ್ಷಣ, ಸಂಘಟನೆ ಮಹತ್ವ ತಿಳಿಸಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಅವರಿಗೆ ಸಲ್ಲುತ್ತದೆ. ಸಾಮಾಜಿಕ ಪಿಡುಗುಗಳ ವಿರುದ್ಧ ಅವರ ಹೋರಾಟ, ಇಂದಿಗೂ ಮಾದರಿಯಾಗಿದೆ ಎಂದು ಹೇಳಿದರು.

ಈ ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಕೀಳುಮಟ್ಟದಲ್ಲಿ ಕಾಣುವ ಕಾಲದಲ್ಲಿ ಅವರಿಗಾಗಿ ಸಾವಿತ್ರಿಬಾಯಿ ಫುಲೆ ಶಾಲೆ ಆರಂಭಿಸಿದ್ದರು. ಹೆಣ್ಣು ಮಕ್ಕಳ ಶಿಕ್ಷಣ, ಸಂಘಟನೆಗೆ ಒತ್ತು ನೀಡಿದ್ದರು. ಸಾಮಾಜಿಕವಾಗಿ ಮಹಿಳೆಯರು ಗಟ್ಟಿಯಾಗಿ ನಿಲ್ಲುವಂತೆ ಮಾಡಿದ್ದರು. ವಿಧವೆಯರಿಗೆ ಆಶ್ರಮ ಸ್ಥಾಪಿಸಿ ಪಾಲನೆ-ಪೋಷಣೆ ಮಾಡುತ್ತಿದ್ದರು. ಅವರ ಇಂತಹ ಸಾಮಾಜಿಕ ಕಾರ್ಯ ನಾವೆಲ್ಲ ಅರಿತುಕೊಳ್ಳಬೇಕಿದೆ ಎಂದರು.

ಎಸ್ಸಿ, ಎಸ್ಟಿ ಎಲ್‌ಐಸಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಕ್ಯಾತನ್‌, ಪ್ರಮುಖರಾದ ಸದಾಶಿವ ಕೊಡಬಾಗಿ, ವಿವೇಕಾನಂದ ಚಂದರಗಿ ಮುಂತಾದವರು ಉಪಸ್ಥಿತರಿದ್ದರು.

ದೇಶದ ಮಹಿಳಾ ಕುಲದ ಶಿಕ್ಷಣ- ಅವರ ಅಭ್ಯುದಯಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ. ಸಂವಿಧಾನದ ಉದ್ದೇಶ ಸಾಕಾರಗೊಳಿಸಲು ಚಳವಳಿ ರೂಪದಲ್ಲಿ ಸತ್ಯ ಶೋಧಕ ಸಂಘ ಕೆಲಸ ಮಾಡಲಿದೆ. ಪ್ರಜಾ ಪರಿವರ್ತನಾ ವೇದಿಕೆ ಒಂದು ಭಾಗವಾಗಿ ಈ ಸಂಘ ಸಾಮಾಜಿಕ ಸೇವೆ ಮಾಡಲಿದೆ.
ಪರಶುರಾಮ ಮಹಾರಾಜನವರ,
 ಸತ್ಯಶೋಧಕ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.