ದ್ವೇಷಮುಕ್ತ ಭಾರತ ನಿರ್ಮಾಣ ಅಗತ್ಯ


Team Udayavani, Jan 14, 2019, 9:25 AM IST

14-january-16.jpg

ಮಹಾಲಿಂಗಪುರ: ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮತ್ತು ಗೌರವಿಸುವ ಪ್ರಯತ್ನ ನಡೆಯುತ್ತದೆಯೋ ಅಲ್ಲಿ ಪರಮಾತ್ಮನ ಅನುಗ್ರಹವಾಗುತ್ತದೆ ಎಂದು ವಿಜಯಪುರ ಕರ್ನಾಟಕ ಅಹ್ಲೆ ಸುನ್ನತ ವಲ್‌ ಜಮಾತ್‌ ಕರ್ನಾಟಕ ರಾಜ್ಯಾಧ್ಯಕ್ಷ ಗುರು ಸೈಯದ್‌ ಮಹಮ್ಮದ ತನ್ವೀರ್‌ ಹಾಶ್ಮೀ ಹೇಳಿದರು.

ಪಟ್ಟಣದ ಡಬಲ್‌ ರಸ್ತೆಯಲ್ಲಿ ಮೊಹಮ್ಮದಿಯಾ ಅಂಜುಮನ್‌ ಇಸ್ಲಾಂ ಕಮಿಟಿ ಹಾಗೂ ಮರ್ಕಜೆ ತಂಜಿಮ್‌ ಅಹಲೆ ಸುನ್ನತ ವಲ್‌ ಜಮಾತ್‌ರವರು ಶ್ರೇಷ್ಠ ಸಂತ ಹಜರತ ಮೆಹಬೂಬ ಸುಬಹಾನಿ ಅವರ 879ನೇ ಉರುಸಿನ ನಿಮಿತ್ತ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಮಾನವ ಕುಲಕ್ಕೆ ಸೂಫಿ ಸಂತರ ಹಾಗೂ ಶರಣರ ಕೊಡುಗೆ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮದು ಕರ್ನಾಟಕ. ನಾನು ಕನ್ನಡಿಗ. ಕನ್ನಡವೆಂದರೆ ನನಗೆ ಪ್ರೀತಿ. ನಾವು ಕನ್ನಡ ಮಾತನಾಡುತ್ತೇವೆ ಹಾಗೂ ಕೇಳುತ್ತೇವೆ. ಇಂಥ ಭಾವೈಕ್ಯ ಕಾರ್ಯಕ್ರಮ ಮಹಾಲಿಂಗಪುರಕ್ಕೆ ಸೀಮಿತವಾಗಬಾರದು ಎಂದರು.

ಮಹಾಲಿಂಗಪುರದಲ್ಲಿ ಮಹಾಲಿಂಗೇಶ್ವರ ವಾರವೆಂದು ಗೌರವಿಸಿ ಸೋಮವಾರ ಯಾವ ಧರ್ಮದವರೂ ಕೂಡಾ ಮಾಂಸಾಹಾರ ಸೇವಿಸುವುದಿಲ್ಲ. ಇಂತಹ ಭಾವ್ಯಕ್ಯತೆ ಇರುವ ಈ ನಗರದ ನೀರನ್ನು ದಿಲ್ಲಿಯಲ್ಲೊಮ್ಮೆ ಚಿಮ್ಮಿಸಿರಿ. ಚೊಳಚಗುಡ್ಡದಲ್ಲಿ ಮಂದಿರ ಹಾಗೂ ಮಸೀದಿ ಕೂಡಿಯೇ ಇವೆ. ಸುಮಾರು 100 ವರ್ಷಗಳಿಂದ ಅಲ್ಲಿ ಪೂಜೆ ಸಮಯದಲ್ಲಿ ಪೂಜೆ ಹಾಗೂ ನಮಾಜ ವೇಳೆಯಲ್ಲಿ ನಮಾಜ ನಡೆಯುತ್ತಿದೆ ಎಂದರು.

ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ ಮಾತನಾಡಿ, ತೋಟದಲ್ಲಿ ಹಲವು ಬಣ್ಣದ ಹೂಗಳು ಅದರಂತೆ ನಮ್ಮ ದೇಶದಲ್ಲಿ ಹಲವು ಮತಗಳು, ಆ ಹೂಗಳಂತೆ ಮತಗಳು ಸಹ ಮಕರಂದ ಬೀರಲಿ. ನಮ್ಮಲ್ಲಿನ ಬೇಧ-ಭಾವ ದೂರವಾಗಲಿ. ನಮ್ಮೆಲ್ಲರ ಭಾವನೆಗಳ ಐಕ್ಯತೆಯೆ ಭಾವೈಕ್ಯತೆಯಾಗಿದೆ ಎಂದರು.

ರಬಕವಿಯ ಗುರುಸಿದ್ದೇಶ್ವರ ಮಹಾಸ್ವಾಮಿಗಳು, ಕೋಲಾರ ಗಫ್ಘಾರಿಯಾ ಗುರುಕುಲದ ಪೀಠಾಧಿಪತಿ ಗುರು ಅಲ್‌ಹಾಜ ಡಾ| ಶಾಹ್‌ಭಖ್ತೀಯಾರಖಾನ ಕಾದ್ರಿ, ವಿಜಯಪುರ ಜಿಲ್ಲಾ ವಕ್ಫ್ ಬೋರ್ಡ್‌ ಅಧ್ಯಕ್ಷ ಉಸ್ಮಾನ ಪಟೇಲ ಖಾನವಾಲೆ, ಬಾಗಲಕೋಟೆ ಜಿಲ್ಲಾ ವಕ್ಫ್ ಬೋರ್ಡ್‌ ಅಧ್ಯಕ್ಷ ಮೈನುದ್ದೀನ ನಬಿಲಾಲೆ ಮಾತನಾಡಿದರು.

ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಅಂಜುಮನ್‌ ಇಸ್ಲಾಂ ಕಮಿಟಿ ಅಧ್ಯಕ್ಷ ಸಜನಸಾಬ ಪೆಂಡಾರಿ ಅಧ್ಯಕ್ಷತೆ ವಹಿಸಿದ್ದರು. ಚಿಮ್ಮಡದ ಜನಾರ್ಧನ ಮಹಾರಾಜರು, ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ, ಜನಾಬ ಮೊಹಮ್ಮದ ಫಾರುಕ ಸುತಾರಿ, ಡಾ| ಶ್ರೀಕಾಂತ ಅರಿಶಿನಗೋಡಿ, ಕಲಾವಿದ ಆರ್‌.ಡಿ. ಬಾಬು, ನಬಿ ಯಕ್ಸಂಬಿ ಇದ್ದರು.

ಈ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ವಿವಿಧ‌ ಗಣ್ಯರನ್ನು ಸನ್ಮಾನಿಸಲಾಯಿತು. ಅಯೂಬ ಪಠಾಣ ನಿರೂಪಿಸಿ-ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.