![court](https://www.udayavani.com/wp-content/uploads/2024/07/court-7-415x231.jpg)
Bagalakote; ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ
Team Udayavani, Mar 1, 2024, 1:03 PM IST
![Bagalakote; ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ](https://www.udayavani.com/wp-content/uploads/2024/03/rama-620x342.jpg)
ಬಾಗಲಕೋಟೆ: ನಾಡಿನ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಬಾಗಲಕೋಟೆ ಆವೃತ್ತಿಯ ಸ್ಥಾನಿಕ ಸಂಪಾದಕ ರಾಮ ಮನಗೂಳಿ (64) ಶುಕ್ರವಾರ ಅನಾರೋಗ್ಯದಿಂದ ನಿಧನರಾದರು.
ಕಳೆದ ನಾಲ್ಕೂವರೆ ದಶಕದಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು, ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರಾಗಿ, ನಾಡನುಡಿ ಜಿಲ್ಲಾ ಮಟ್ಟದ ದಿನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗೆ ಇವರು ಭಾಜನರಾಗಿದ್ದರು.
2002 ರಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಬಾಗಲಕೋಟೆಯಲ್ಲಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿ ನಡೆಸಿದ್ದರು.
ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೆಸ್ ಕ್ಲಬ್ ವತಿಯಿಂದ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗಮಟ್ಟದ ಪತ್ರಕರ್ತರ ಕಾರ್ಯಾಗಾರ ನಡೆಸಿದ್ದು ವಿಶೇಷವಾಗಿತ್ತು.
ನಾಡಿನ ಹಿರಿಯ ಪತ್ರಕರ್ತರಾಗಿದ್ದ ರಾಮ ಮನಗೂಳಿ ಅವರು ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುವ ಜತೆಗೆ , ಕಾರ್ಯನಿರತ ಪತ್ರಕರ್ತರ ಸಂಘಟನೆಗೂ ಹೆಚ್ಚು ಒತ್ತು ನೀಡುತ್ತಿದ್ದರು. ಸಂಘಟನೆಗೆ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಯಾವುದೇ ಚುನಾವಣೆ ನಡೆಸದಂತೆ ಎಲ್ಲರೊಂದಿಗೆ ಮಾತನಾಡಿ ಅವಿರೋಧ ಆಯ್ಕೆ ಆಗುವಂತೆ ನೋಡಿಕೊಳ್ಳುತ್ತಿದ ಅವರ ಕೆಲಸ ಎಲ್ಲರಿಗೂ ಮೆಚ್ಚುಗೆಯಾಗಿತ್ತು.
ಇನ್ನೂ ಪತ್ರಕರ್ತರಿಗೆ ಯಾರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸುವ ಜತೆಗೆ ಸಹಾಯ ಮಾಡುವ ಮನೋಭಾವ ಹೊಂದಿದ್ದರು. ಎಲ್ಲ ರಾಜಕೀಯ ಪಕ್ಷಗಳ ನಾಯಕರ ಜೊತೆಗೆ ಆತ್ಮೀಯತೆ ಹೊಂದಿದ್ದರು. ಅಭಿವೃದ್ದಿ ವಿಚಾರದಲ್ಲಿ, ಮನಗೂಳಿ ಅವರ ಸಲಹೆ, ಮಾರ್ಗದರ್ಶನ ಪಡೆಯುತ್ತಿದ್ದರು.
ರಾಮ ಮನಗೂಳಿ ಅವರು ನೇರವಾಗಿ ತಮ್ಮ ಲೇಖನಿ ಮೂಲಕ ಬರೆಯುತ್ತಿದ್ದರು. ಯಾವುದೇ ರಾಜಿ ಇಲ್ಲದೇ ಇದ್ದಿದ್ದನ್ನು ಇದ್ದಂಗೆ ಬರವಣಿಗೆ ಮೂಲಕ ಬೆಳಕು ಚೆಲ್ಲುತ್ತಿದ್ದರು.
ಹಿರಿಯ ಪತ್ರಕರ್ತರಾದ ರಾಮ ಮನಗೂಳಿ ಅವರ ನಿಧನಕ್ಕೆ ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.