ಚೊಂಬು ಹಿಡಿದು ಗ್ರಾಮಸ್ಥರ ಪ್ರತಿಭಟನೆ


Team Udayavani, Dec 6, 2018, 5:17 PM IST

6-december-21.gif

ಬಾಗಲಕೋಟೆ: ಶೌಚಾಲಯ ನಿರ್ಮಾಣದ ಸಹಾಯಧನ ನೀಡುವಂತೆ ಆಗ್ರಹಿಸಿ ಮಹಿಳೆಯರು ಕೈಯಲ್ಲಿ ಚೊಂಬು ಹಿಡಿದು ಡಿಸಿ ಕಚೇರಿ ಎದುರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಮುಧೋಳ ತಾಲೂಕಿನ ಬುದ್ನಿ (ಪಿಡಿ) ಗ್ರಾಮದ ಮಹಿಳೆಯರು, ಪುರುಷರು ಜಿಲ್ಲಾಡಳಿತ ಭವನಕ್ಕೆ ಆಗಮಿಸಿ, ತಾವು ನಿರ್ಮಿಸಿದ ವೈಯಕ್ತಿಕ ಶೌಚಾಲಯದ ಸಹಾಯಧನ ಈ ವರೆಗೆ ನೀಡಿಲ್ಲ. ಕೂಡಲೇ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಮನೆಯಿಂದಲೇ ಬುತ್ತಿ ಮಾಡಿಕೊಂಡು ಬಂದಿದ್ದ ಜನರು, ಜಿಲ್ಲಾಡಳಿತ ಭವನದ ಎದುರೇ ಬುತ್ತಿ ಬಿಚ್ಚಿಕೊಂಡು ಊಟ ಮಾಡಿದರು.

ಗ್ರಾಮದ ಸರ್ವೇ ನಂಬರ್‌ಗಳ ಅತಂತ್ರದಿಂದ ಸರ್ಕಾರದ ಶೌಚಗೃಹ ನಿರ್ಮಾಣದ ಸಹಾಯ ಧನ ಸರಿಯಾಗಿ ಸಿಗುತ್ತಿಲ್ಲ. ತೋಟಗಾರಿಕೆ, ರೇಷ್ಮೆ, ಕೃಷಿ ಮುಂತಾದ ಇಲಾಖೆ ಯೋಜನೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಜಿಲ್ಲಾಡಳಿತ ಬುದ್ನಿ ಪಿ.ಡಿ. ಗ್ರಾಮದ ಸರ್ವೇ ನಂಬರ್‌ಗಳನ್ನು ಕೆಸರಕೊಪ್ಪ ಗ್ರಾಪಂ ವ್ಯಾಪ್ತಿಗೆ ಸೇರಿಸಬೇಕು. ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಗ್ರಾಮಸ್ಥರು, ಮುಧೋಳ ತಾಲೂಕಿನ ಮಹಾಲಿಂಗಪುರ ಸಮೀಪದ ಬುದ್ನಿ ಪಿ.ಡಿ ಗ್ರಾಮವು ಹಲವು ಮೂಲಭೂತ ಸಮಸ್ಯೆ ಎದುರಿಸುತ್ತಿದೆ. ಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಬುದ್ನಿ ಪಿ.ಡಿ ಗ್ರಾಮದ ಎರಡು ಸರ್ವೇ ನಂಬರ್‌ ಗಳು ಮಹಾಲಿಂಗಪುರ ಪಟ್ಟಣದ ವ್ಯಾಪ್ತಿಗೆ ಬರುತ್ತವೆ. ಉಳಿದ 127 ಸರ್ವೇ ನಂಬರ್‌ಗಳು ಪಟ್ಟಣದ ವ್ಯಾಪ್ತಿಗೆ ಬರುವುದಿಲ್ಲ. ಈ ನಂಬರ್‌ಗಳು ಕೆಸರಕೊಪ್ಪ ಗ್ರಾಮದ ವ್ಯಾಪ್ತಿಗೂ ಬರುವುದಿಲ್ಲ. ಗ್ರಾಮವು ಅತಂತ್ರ ಸ್ಥಿತಿಯಲ್ಲಿದೆ. ಗ್ರಾಮದ ಗೋಳು ಕೇಳ್ಳೋರ್ಯಾರು ಎಂದು ದೂರಿದರು.

ಗ್ರಾಮಸ್ಥರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದು ಗ್ರಾಮದ 127 ಸರ್ವೇ ನಂಬರ್‌ಗಳು ಕೆಸರಕೊಪ್ಪ ಗ್ರಾಪಂ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ಮನವಿ ಮಾಡಲಾಗಿತ್ತು. ನಿರ್ದೇಶಕರು ಜಿಲ್ಲಾಡಳಿತಕ್ಕೆ ಆದೇಶಿಸಿ 11 ತಿಂಗಳು ಕಳೆದರೂ ಜಿಲ್ಲಾಡಳಿತ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಎಸ್‌.ವಿ. ಮೇಟಿ, ವಿಷ್ಣು ಮಾನಕರ, ಕರೆಪ್ಪ ಪೂಜೇರಿ, ಚನ್ನಪ್ಪ ಕಡಾರಿ, ಆರ್‌.ಬಿ. ಪಾಟೀಲ, ರೇಣುಕಾ ಯರಗುದ್ರಿ, ನೀಲವ್ವ ಮುಧೋಳ, ಯಲ್ಲವ್ವ ಶೇಗುಣಸಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.