ಬಾಗಲಕೋಟೆ: ಮನೆಯ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವು, ತಾಯಿಗೆ ಗಂಭೀರ ಗಾಯ
Team Udayavani, Oct 31, 2019, 11:48 AM IST
ಬಾಗಲಕೋಟೆ : ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
ಮಗು ಅಚಲ ಭುಜಬುಲಿ ತಿಮ್ಮಣ್ಣವರ ಎಂಬ 11 ತಿಂಗಳ ಮಗು ಮೇಲ್ಛಾವಣಿ ಕುಸಿತಕ್ಕೆ ಸ್ಥಳದಲ್ಲಿ ಸಾವನ್ನಪ್ಪಿದೆ.ತಾಯಿ ಅರ್ಚನ ಭುಜಬುಲಿ ತಿಮ್ಮಣ್ಣವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
10 ಲಕ್ಷ ಪರಿಹಾರ:
ಸ್ಥಳಕ್ಕೆ ತೇರದಾಳ ಶಾಸಕ ಸಿದ್ದು ಸವದಿ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತಪಟ್ಟ ಮಗುವಿನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಹಾಗೂ ಮನೆ ಕುಸಿದಿದ್ದಕ್ಕೆ 5 ಲಕ್ಷ ಪರಿಹಾರ ಘೋಷಿಸಿದರು. ಇತ್ತೀಚಿಗೆ ಬಂದ ಪ್ರವಾಹದ ವೇಳೆ ತಮದಡ್ಡಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿತ್ತು.