ಬಾಗಲಕೋಟೆ ಎಸ್ಪಿ ನಿವಾಸದ ಎದುರೇ ಪೇದೆ ಆತ್ಮಹತ್ಯೆ


Team Udayavani, Dec 2, 2018, 6:10 AM IST

aaa01010.jpg

ಬಾಗಲಕೋಟೆ: ನವನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ನಿವಾಸದ ಎದುರೇ ಪೊಲೀಸ್‌ ಪೇದೆಯೊಬ್ಬ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್‌ ಪೇದೆಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ಮಂಜುನಾಥ ಹರಿಜನ (28) ಎಂದು ಗುರುತಿಸಲಾಗಿದೆ.

2012ನೇ ಬ್ಯಾಚ್‌ನ ಡಿಎಆರ್‌ ಪೊಲೀಸ್‌ ಪೇದೆ ಆಗಿರುವ ಮಂಜುನಾಥ, ಮೊದಲು ದಾವಣಗೆರೆಯಲ್ಲಿ ಸೇವೆ ಸಲ್ಲಿಸಿ, ಒಂದೂವರೆ ವರ್ಷದ ಹಿಂದೆ ಬಾಗಲಕೋಟೆಗೆ ವರ್ಗವಾಗಿ ಬಂದಿದ್ದರು. ಎಸ್‌ಪಿ ಸಿ.ಬಿ.ರಿಷ್ಯಂತ ಅವರ ಸರ್ಕಾರಿ ನಿವಾಸಕ್ಕೆ ಗಾರ್ಡ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ರಾತ್ರಿ ಎಂದಿನಂತೆ ಸೇವೆಗೆ ಬಂದಿದ್ದು, ಶನಿವಾರ ಬೆಳಗ್ಗೆ ಸುಮಾರು 3 ಗಂಟೆಯ ಹೊತ್ತಿಗೆ ತನಗೆ ಇಲಾಖೆ ನೀಡಿದ್ದ 303 ರೈಫಲ್‌ನಿಂದಲೇ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ಒಂದು ಗುಂಡು ಗಾಳಿಯಲ್ಲಿ ಹಾರಿಸಿದ್ದು, 2 ಮತ್ತು 3ನೇ ಗುಂಡು ಮಿಸ್‌ ಆಗಿವೆ ಎನ್ನಲಾಗಿದೆ. 4ನೇ ಗುಂಡು ಕುತ್ತಿಗೆಗೆ ಹಾರಿಸಿಕೊಂಡು ಹೋಗಿದೆ. ಗುಂಡು ಸಿಡಿದ ರಭಸಕ್ಕೆ ಕುತ್ತಿಗೆಯಿಂದ ತಲೆಯ ಹಿಂಭಾಗದವರೆಗೆ ಸೀಳಿಕೊಂಡು ಹೊರ ನುಗ್ಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಬೆಲಾಸ್ಟಿಕ್‌ ನುರಿತ ತಜ್ಞ ಕಿರಣ ನೇತೃತ್ವದ ತಂಡ, ಬೆಳಗಾವಿಯ ವಿಧಿ ವಿಜ್ಞಾನಿಗಳ ವಿಶೇಷ ತಂಡ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ಕುರಿತು ತನಿಖೆ ಮುಂದುವರಿದಿದೆ.

ಸಾವಿಗೆ ಚಿಕ್ಕಪ್ಪಂದಿರೇ ಕಾರಣ:
ಈ ಮಧ್ಯೆ, ಶವ ಪರೀಕ್ಷೆ ವೇಳೆ ಪೇದೆಯ ಜೇಬಿನಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಬರೆದ ಡೆತ್‌ನೋಟ್‌ ಪತ್ತೆಯಾಗಿದ್ದು, ಚಿಕ್ಕಪ್ಪಂದಿರು ಜೀವ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಅದರಲ್ಲಿ ತಿಳಿಸಿದ್ದಾರೆ. ಪೊಲೀಸ್‌ ಇಲಾಖೆ, ಸಿಬ್ಬಂದಿ ವರ್ಗ ಎಲ್ಲ ರೀತಿಯಿಂದಲೂ ನನಗೆ ಸಹಕಾರ ನೀಡಿದ್ದಾರೆ. ನನ್ನ ಕುಟುಂಬ, ನನ್ನನ್ನು ಚೆನ್ನಾಗಿ ಬೆಳೆಸಿದ್ದರು. ಸಾಕಿ ಸಲುಹಿದ ತಾಯಿ ಮತ್ತು ಅಜ್ಜಿಗೆ ಕ್ಷಮೆ ಕೋರುತ್ತೇನೆ. ಮುಖ್ಯವಾಗಿ ನನ್ನನ್ನು ಶನಿಯಾಗಿ ಕಾಡಿದ್ದು ಚಿಕ್ಕಪ್ಪಂದಿರಾದ ಹನಮಪ್ಪ ಮತ್ತು ಮರಿಯಪ್ಪ ಮಾದರ. ನನ್ನ ತಂದೆಯ ಆಸ್ತಿಯನ್ನು ತಾವೇ ವ್ಯಾಮೋಹಿಸುವ ಉದ್ದೇಶದಿಂದ ನನಗೆ ಜೀವ ಬೆದರಿಕೆ ಹಾಕಿದ್ದರು. ಆದ್ದರಿಂದ ನಾನು ಆತ್ಮಹತ್ಯೆಗೆ ಶರಣಾಗಿದ್ದೇನೆ. ನನಗೆ ಶನಿಯಾಗಿ ಕಾಡಿದ್ದು ಇವರೇ. ನನ್ನ ಸಾವಿಗೆ ಇವರಿಬ್ಬರೇ ಕಾರಣ ಎಂದು ಬರೆದಿದ್ದಾರೆ.

ಪ್ರಕರಣದ ತನಿಖೆಗೆ ಅತ್ಯುತ್ತಮ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ. ಬೆಳಗಾವಿಯ ಫಾರೆನ್ಸಿಕ್‌ ತಂತ್ರಜ್ಞರ ತಂಡ, ಶ್ವಾನ ದಳ, ಬಾಂಬ್‌ ಪತ್ತೆ ತಂಡ ಕೂಡ ಬಂದಿವೆ.
– ಸಿ.ಬಿ. ರಿಷ್ಯಂತ, ಎಸ್‌ಪಿ, ಬಾಗಲಕೋಟೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.