ಬಾಗಲಕೋಟೆ: ಬಾಲಕಿಯನ್ನು ಅತ್ಯಾಚಾರಗೈದು ಸುಟ್ಟು ಕೊಂದ ಕಾಮುಕ
Team Udayavani, Jan 12, 2017, 11:14 AM IST
ಬಾಗಲಕೋಟೆ: ಇಲ್ಲಿನ ಮುಧೋಳದ ಲಮಾಣಿ ತಾಂಡವೊಂದರಲ್ಲಿ ಕಾಮುಕನೊಬ್ಬ 16 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು ಬಳಿಕ ಸಿಮೇ ಎಣ್ಣೆ ಸುರಿದು ಸುಟ್ಟು ಬರ್ಬರವಾಗಿ ಹತ್ಯೆಗೈದ ಅಮಾನುಷ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಕೃತ್ಯ ಎಸಗಿದ ಲೋಕೇಶ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕೇಶ್ ತಾಂಡದಲ್ಲಿರುವ ತನ್ನದೇ ಸಮುದಾಯದ ಬಾಲಕಿಯ ಮನೆಗೆ ನುಗ್ಗಿ ಹೇಯ ಕೃತ್ಯ ನಡೆಸಿ ಅಮಾನವೀಯವಾಗಿ ಸುಟ್ಟು ಕೊಲೆಗೈದಿದ್ದಾನೆ.
ಘಟನೆ ನಡೆಯುವ ವೇಳೆ ಮನೆಯಲ್ಲಿ ಬಾಲಕಿ ಮತ್ತು ಆಕೆಯ ತಂಗಿ ಇಬ್ಬರೆ ಇದ್ದರು ಎಂದು ಹೇಳಲಾಗಿದ್ದು, ಹೊಂಚು ಹಾಕಿ ಲೋಕೇಶ್ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.
ತಾಂಡಾದ ಜನರು ಘಟನೆಯಿಂದ ದಿಗ್ಭ್ರಾಂತರಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಲು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜನರ ರೋದನ ಮುಗಿಲು ಮುಟ್ಟಿದೆ.
ಲೋಕಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ