ಕಂದಾಯ ಗ್ರಾಮಗಳಾಗಿ ಲಂಬಾಣಿ ತಾಂಡಾ

ರಾಜ್ಯ ಸರ್ಕಾರದಿಂದ ಶೀಘ್ರ ಮಹತ್ವದ ನಿರ್ಧಾರ ಸೇವಾಲಾಲ್‌ರ ಆದರ್ಶ ಎಲ್ಲರಿಗೂ ಮಾದರಿ

Team Udayavani, Feb 16, 2020, 5:21 PM IST

16-February-34

ಬಾಗಲಕೋಟೆ: ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನು ಶೀಘ್ರದಲ್ಲಿಯೇ ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಸರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ನವನಗರದ ಕಲಾ ಭವನದಲ್ಲಿ ಶನಿವಾರ ಜಿಲ್ಲಾಡಳಿತದಿಂದ ನಡೆದ ಸಂತ ಸೇವಾಲಾಲ್‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರ ಸಮುದಾಯವರು ವಲಸೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರಕಾರ ಈ ಕ್ರಮ ಕೈಗೊಂಡಿದೆ. ಬಂಜಾರ ಸಮುದಾಯ ಕಾಯಕ ಜೀವಿಗಳಾಗಿದ್ದು, ಶಿವನ ಆಶೀರ್ವಾದಿಂದ ಹುಟ್ಟಿಬಂದ ಸೇವಾಲಾಲ್‌ ತಪಸ್ಸಿನಿಂದ ಶಕ್ತಿಯನ್ನು ಪಡೆದು ಪವಾಡ ಪುರುಷರಾದವರು. ಸಮಾಜ ಸುಧಾರಣೆಗೆ ಹತ್ತು ಹಲವಾರು ಪವಾಡ ಮಾಡಿದ್ದಾರೆ.

ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು. ಸರಕಾರ, ರಾಜಕೀಯ ಹಾಗೂ ಇತರೆ ಕ್ಷೇತ್ರದಲ್ಲಿ ಛಾಪನ್ನು ಮೂಡಿಸಿದ ಬಂಜಾರ ಸಮಾಜ, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಬೇಕು ಎಂದು ತಿಳಿಸಿದರು.

ಬೀಳಗಿ ಶಾಸಕ ಮುರುಗೇಶ ನಿರಾಣಿ ಮಾತನಾಡಿ, ಬೀಳಗಿ ಮತಕ್ಷೇತ್ರದಲ್ಲಿ ಒಟ್ಟು 22 ತಾಂಡಾಗಳು ಬರುತ್ತಿದ್ದು, ಪ್ರತಿ ತಾಂಡಾದಲ್ಲಿ ಸಮುದಾಯ ಭವನ ನಿರ್ಮಿಸಲು ತಲಾ 25 ಲಕ್ಷ ರೂ. ಅನುದಾನ ನೀಡಲಾಗುವುದು ಎಂದರು. ಅಲ್ಲದೇ ಪ್ರತಿಯೊಂದು ತಾಂಡಾಗಳಿಗೆ ವಿಶೇಷ ಅನುದಾನಡಿ ತಾಂಡಾ ಕಾಲೋನಿಗಳಲ್ಲಿ ಸಿಸಿ ರಸ್ತೆ, ಬೋರವೆಲ್‌ಗ‌ಳನ್ನು ಹಾಕಿಸಲಾಗಿದೆ. ಒಟ್ಟು 20 ತಾಂಡಾಗಳಲ್ಲಿ ಎರಡು ತಾಂಡಾಗಳಿಗೆ ಒಂದರಂತೆ ಒಟ್ಟು 20 ಕಾರುಗಳನ್ನು ಒದಗಿಸಲಾಗುತ್ತಿದೆ ಎಂದರು. ನಿರಾಣಿ ಪೌಂಡೇಶನ್‌ ವತಿಯಿಂದ 1 ಲಕ್ಷ ಜನರಿಗೆ ವಿಮೆ ಸೌಲಭ್ಯ ಒದಗಿಸಲು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ವೈದ್ಯಕೀಯ ವೆಚ್ಚದಲ್ಲಿ 20ರಿಂದ 50 ಲಕ್ಷ ರೂ.ಗಳವರೆಗೆ ಹಣ ಪಾವತಿಸಲಾಗುವುದು ಎಂದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ ಹಾಗೂ ಸ್ವತಂತ್ರ ಸಿಂಧೆ ಮಾತನಾಡಿದರು. ಜಿಪಂ
ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ತಾಪಂ ಅಧ್ಯಕ್ಷ ಚನ್ನಗೌಡ ಪರನಗೌಡರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ, ಜಿಪಂ ಸದಸ್ಯರಾದ ಹೂವಪ್ಪ ರಾಠೊಡ, ರಂಗನಗೌಡ ಗೌಡರ, ಸಮಾಜದ ಪ್ರಮುಖರಾದ ಡಾ|ಬಾಬುರಾಜೇಂದ್ರ ನಾಯಕ, ಬಲರಾಮ ನಾಯಕ, ಗಣಪತಿ ಪೂಜಾರಿ, ವಿಷ್ಣು ಪೂಜಾರಿ, ನಾಗೇಶ ಪೂಜಾರಿ, ಗೋಪಾಲ ನಾಯಕ, ಸತೀಶ ನಾಯಕ, ರಾಜು ಲಮಾಣಿ, ಸುಭಾಸ ಲಮಾಣಿ ನಿಂಗಪ್ಪ ಚವ್ಹಾಣ, ಮಾಧವಿ ರಾಠೊಡ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುಂಚೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಸಂಸದರು ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳ ಜೊತೆ ಅಲಂಕೃತಗೊಂಡ ಕುದುರೆ, ಲಂಬಾಣಿ ಕುಣಿತ ತಂಡಗಳು ಭಾಗವಹಿಸಿದ್ದವು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.