ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ
Team Udayavani, Jan 12, 2023, 12:14 AM IST
ಬಾಗಲಕೋಟೆ: ತಾಯಿಯೊಬ್ಬಳು ತನ್ನ ಮೂವರು ಹೆಣ್ಣು ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರದಲ್ಲಿ ಬುಧವಾರ ಸಂಜೆ ನಡೆದಿದೆ.
ರೇಖಾ ಅರ್ಜುನ ಬಗಲಿ (30), ಪುತ್ರಿಯರಾದ ಸನ್ನಿಧಿ (8), ಸಮೃದ್ಧಿ (5) ಹಾಗೂ ಶ್ರೀನಿಧಿ (3) ಮೃತಪಟ್ಟವರು.
ತಿಮ್ಮಾಪುರದ ರೇಖಾ ಬಂಗಾರಿ ಅವರನ್ನು ಬೀಳಗಿ ತಾಲೂಕಿನ ಸುನಗ ಗ್ರಾಮದ ಅರ್ಜುನ ಬಗಲಿ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ರೇಖಾ ತನ್ನ ಮೂವರು ಮಕ್ಕಳು ಹಾಗೂ ಪತಿಯೊಂದಿಗೆ ತವರು ಮನೆಯಲ್ಲೇ ವಾಸವಾಗಿದ್ದಳು. ಸಹೋದರ ಸದ್ಯ ಮುಧೋಳದಲ್ಲಿದ್ದು, ತಾಯಿ ಸಂಗಾಪುರದಲ್ಲಿದ್ದಾರೆ. ತನಗೆ ಮೂವರೂ ಹೆಣ್ಣು ಮಕ್ಕಳಾಗಿದ್ದು, ಅವರ ಶಿಕ್ಷಣ, ಮುಂದಿನ ಭವಿಷ್ಯದ ಬಗ್ಗೆ ರೇಖಾ ಸದಾ ಚಿಂತೆ ಮಾಡುತ್ತಿದ್ದಳು ಎನ್ನಲಾಗಿದೆ.
ಒಮ್ಮೊಮ್ಮೆ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಳು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಲ್ಲದೇ ಪತಿ ಕಬ್ಬು ಕಡಿಯುವ ಗ್ಯಾಂಗ್ನಲ್ಲಿ ಕೆಲಸ ಮಾಡುತ್ತಿದ್ದು, ಘಟನೆ ವೇಳೆ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಬುಧವಾರ ಮಧ್ಯಾಹ್ನ ಮ್ಯಾಂಗೋ ಜ್ಯೂಸ್ನಲ್ಲಿ ಬಳೆ ಚೂರಿನ ಪುಡಿ ಬೆರೆಸಿ ಮಕ್ಕಳಿಗೆ ಕೊಟ್ಟು, ಬಳಿಕ ತಾನೂ ಕುಡಿದಿದ್ದಾಳೆ. ಅಸ್ವಸ್ಥಗೊಂಡು ಬೊಬ್ಬೆ ಹಾಕುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.
ಮಾಜಿ ಸಚಿವ ಮೇಟಿ ಸಂಬಂಧಿ ರೇಖಾ ಅವರು ಮಾಜಿ ಸಚಿವ ಎಚ್.ವೈ. ಮೇಟಿ ಅವರ ಸಹೋದರಿಯ ಮೊಮ್ಮಗಳು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ