ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!


Team Udayavani, Mar 28, 2024, 5:42 PM IST

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಉದಯವಾಣಿ ಸಮಾಚಾರ
ಬಾಗಲಕೋಟೆ: ನಗರದ ನರೇಂದ್ರ ಯುವಕ ಮಂಡಳದ ಯುವಕರು, ಮಕ್ಕಳು ಕೂಡಿ ಹಿರಿಯರಿಗೇ ಮಾದರಿಯಾಗುವ ಕಾರ್ಯ
ಮಾಡುತ್ತಿದ್ದಾರೆ. ಅದೂ ಇದೇ ಪ್ರಥಮ ಬಾರಿ ಏನಲ್ಲ. ಪ್ರತಿವರ್ಷ ಬೇಸಿಗೆ ಬಂತೆಂದರೆ, ಬಿಡಾಡಿ ದನಗಳು, ಪಕ್ಷಿಗಳಿಗೆ ನೀರು-ಆಹಾರದ ವ್ಯವಸ್ಥೆ ಮಾಡುವ ಜತೆಗೆ ಗಿಡ-ಮರಗಳಿಗೆ ಟ್ಯಾಂಕರ್‌ ಮೂಲಕ ನೀರು ಹಾಕುತ್ತಾರೆ. ಈ ಕಾರ್ಯ ಹಲವು ವರ್ಷಗಳಿಂದ ಮುಂದುವರಿಸಿದ್ದಾರೆ.

ಸಸ್ಯ-ಪಕ್ಷಿ ಸಂಕುಲ ಉಳಿವಿಗೆ ಶ್ರಮ: ಬೇಸಿಗೆ ಬಂದರೆ, ಸಾಕು ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವ
ವ್ಯಕ್ತಿ-ಸಂಘ-ಸಂಸ್ಥೆಗಳೂ ಬಾಗಲಕೋಟೆಯಲ್ಲಿ ಸಾಕಷ್ಟಿವೆ. ಆದರೆ, ಮೂಕ ಪ್ರಾಣಿಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡುವ ಕೆಲವೇ ಕೆಲವರಿದ್ದಾರೆ. ಅಂತಹವರಲ್ಲಿ ಸಾಮಾಜಿಕ ಕಾರ್ಯಕರ್ತ ಘನಶಾಂ ಭಾಂಡಗೆ ಅವರು ಕಳೆದ 22ಕ್ಕೂ ಹೆಚ್ಚು ವರ್ಷಗಳಿಂದ ನಗರ, ನವನಗರ ಹಾಗೂ ವಿದ್ಯಾಗಿರಿಯಲ್ಲಿ ಬಿಡಾಡಿ ದನಗಳು, ಬೀದಿ ನಾಯಿಗಳಿಗೆ ಆಹಾರ, ನೀರು ಕೊಡುವ
ಕಾರ್ಯ ಮಾಡುತ್ತಿದ್ದಾರೆ. ಅಂತಹ ಸಾಲಿಗೆ ಇದೀಗ ಬಾಗಲಕೋಟೆಯ ನರೇಂದ್ರ ಯುವಕ ಮಂಡಳಿ ಕಾರ್ಯಕರ್ತರೂ ವಿಶೇಷ ಸೇವೆಯ ಮೂಲಕ ಗಮನ ಸೆಳೆಯುತ್ತಿದ್ದಾರೆ.ಆದರೆ, ಎಲ್ಲೂ ಪ್ರಚಾರ ಬಯಸಿಲ್ಲ. ಪ್ರಚಾರಕ್ಕಾಗಿ ಅಲ್ಲ, ಇದು ಪ್ರೇರಣೆಗಾಗಿ ಎಂದೇ ಅವರು, ತಮ್ಮ ಸೇವೆ ಆರಂಭಿಸುತ್ತಾರೆ. ಇದು, ಇತರ ಹಲವರಿಗೆ ಮಾದರಿಯಾಗಿದೆ ಎಂದರೂ ತಪ್ಪಲ್ಲ.

100ಕ್ಕೂ ಹೆಚ್ಚು ಸ್ಥಳ: ಹಳೆಯ ಬಾಗಲಕೋಟೆ ಸೇರಿದಂತೆ ನಗರದ ವಿವಿಧೆಡೆ ಸುಮಾರು 100ಕ್ಕೂ ಹೆಚ್ಚು ಸ್ಥಳ ಗುರುತಿಸಿರುವ ನರೇಂದ್ರ ಯುವಕ ಮಂಡಳಿ ಸದಸ್ಯರು, ಮನೆಯ ಮೇಲ್ಛಾವಣಿ, ಗಿಡ-ಮರಗಳಲ್ಲಿ ಮಣ್ಣಿನ ಚಿಕ್ಕ ಚಿಕ್ಕ ಬುಟ್ಟಿ ಅಳವಡಿಸಿದ್ದಾರೆ. ಒಂದು ಸ್ಥಳದಲ್ಲಿ ನಾಲ್ಕಾರು ಬುಟ್ಟಿ ಇಟ್ಟು, ಅದರಲ್ಲಿ ನೀರು ಹಾಗೂ ವಿವಿಧ ಧಾನ್ಯಗಳನ್ನು ಹಾಕಿ, ಪಕ್ಷಿಗಳಿಗೆ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ನವನಗರ ಯೂನಿಟ್‌-2ರಲ್ಲಿ ಸಾವಿರಾರು ಸಸಿ ನೆಟ್ಟಿದ್ದು, ಬೇಸಿಗೆಯ ಬಿರು ಬಿಸಲಿಗೆ ಒಣಗುತ್ತಿವೆ.
ಅವುಗಳನ್ನು ಕಂಡ ಈ ಯುವಕರು, ಟ್ಯಾಂಕರ್‌ ಮೂಲಕ ನೀರು ಒದಗಿಸುವ ಕಾರ್ಯವೂ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಬಾಯಾರಿದ ಮೂಕ ಪ್ರಾಣಿಗಳ ಸೇವೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಬೇಸಿಗೆ ಬಂತೆಂದರೆ ಪ್ರಾಣಿ, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ಸಮಸ್ಯೆ ಹೆಚ್ಚಾಗುತ್ತದೆ. ಪ್ರಾಣಿ ಪಕ್ಷಿಗಳಿಗೆ ಸಾಧ್ಯವಾದಷ್ಟು ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡುವ ದೃಷ್ಟಿಯಿಂದ ಕಳೆದ ಏಳೆಂಟು ವರ್ಷಗಳಿಂದ ನರೇಂದ್ರ ಯುವಕ ಮಂಡಳದಿಂದ 100ಕ್ಕೂ ಹೆಚ್ಚು ಜಾಗಗಳಲ್ಲಿ ನೀರು ಮತ್ತು ಆಹಾರದ ವ್ಯವಸ್ಥೆ ಮಾಡಿ, ಚಿಕ್ಕ ಅಳಿಲು ಸೇವೆ ಮಾಡುತ್ತಿದ್ದೇವೆ. ಸಾಧ್ಯವಾದಷ್ಟು ನಮ್ಮ ಮನೆಯ ಟೆರಸ್‌ ಮೇಲೆ, ಕಿಟಕಿಯ ಪಕ್ಕದಲ್ಲಿ, ಮನೆಯ ನೆರಳಿನ ಜಾಗಗಳಲ್ಲಿ ನೀರು ಮತ್ತು ಆಹಾರದ ವ್ಯವಸ್ಥೆ ಮಾಡಬೇಕು ಎಂಬುದು ನಮ್ಮ ಮನವಿ.
*ಸುರೇಶ ಮಾಗಿ, ನರೇಂದ್ರ
ಯುವಕ ಮಂಡಳ, ಬಾಗಲಕೋಟೆ

*ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.