![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಬಾಗಲಕೋಟೆ: ಜಗಜೀವನರಾಂ ಮನುಕುಲಕ್ಕೆ ಮಾದರಿ: ಜಾನಕಿ
Team Udayavani, Apr 6, 2024, 6:08 PM IST
![ಬಾಗಲಕೋಟೆ: ಜಗಜೀವನರಾಂ ಮನುಕುಲಕ್ಕೆ ಮಾದರಿ: ಜಾನಕಿ](https://www.udayavani.com/wp-content/uploads/2024/04/Bagalkot-620x335.jpg)
ಉದಯವಾಣಿ ಸಮಾಚಾರ
ಬಾಗಲಕೋಟೆ: ಸಮಾಜದ ಕೆಳಸ್ತರದಲ್ಲಿ ಹುಟ್ಟಿ ಬದುಕನ್ನೇ ಸವಾಲಾಗಿ ಸ್ವೀಕರಿಸಿ, ಮನುಕುಲಕ್ಕೆ ಮಾದರಿ ಎನ್ನುವಂತಹ ಕೊಡುಗೆ ನೀಡಿದ ಮಹಾನ್ ಚೇತನ ಡಾ|ಬಾಬು ಜಗಜೀವನರಾಮ್ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ಜಿಪಂ ನೂತನ ಸಭಾಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಡಾ|ಬಾಬು ಜಗಜೀವನರಾಮ್117ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಡ ಕುಟುಂಬದಲ್ಲಿ ಹುಟ್ಟಿದ ಜಗಜೀವನರಾಂ ಉಪ ಪ್ರಧಾನಮಂತ್ರಿಯವರೆಗೆ ಸಾಗಿ ಬಂದ ದಾರಿ, ಜೀವನ ಮೌಲ್ಯ ಇಂದಿನ ಯುವಜನತೆಗೆ ಅನುಸರಿಸಬೇಗಿದೆ ಎಂದರು. ಮುಖ್ಯವಾಗಿ ನಮ್ಮ ಮಕ್ಕಳಲ್ಲಿ ಜಗಜೀವನರಾಮ್ ಅವರ ಜೀವನ ಪಾಠವನ್ನು ಹೇಳಿಕೊಟ್ಟಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಎಲ್ಲ ಇದ್ದು ಸಾಧನೆ ಮಾಡುವುದು ದೊಡ್ಡದಲ್ಲಿ ನೀರಾವರಿ ಜಮೀನು ಇದ್ದು ಬತ್ತ ಬೆಳೆಯುವುದು ಕಷ್ಟವಲ್ಲ.
ಆದರೆ ಕಷ್ಟ, ತೊಂದರೆ, ಅನುಮಾನಗಳನ್ನು ಅನುಭವಿಸಿ ಮೆಟ್ಟಿ ನಿಂತು ಬೆಳೆದು ತೋರಿಸುವುದು ನಿಜವಾದ ಸಾಧನೆ. ನೀರು ಕುಡಿಯುವಲ್ಲಿ ಜಗಜೀವನರಾಂ ಅವರಿಗೆ ಸಮಾನತೆ ಇರಲಿಲ್ಲ. ತಮಗೆ ಆಗುತ್ತಿರುವ ದೌರ್ಜನ್ಯ, ಕಷ್ಟಗಳು ಮುಂದಿನ ಜನಾಂಗಕ್ಕೆ
ಆಗಬಾರದೆಂಬ ದೃಢ ನಿರ್ಧಾರ ಇಟ್ಟಿಕೊಂಡು ಅವರ ನೈತಿಕ ಜೀವನವನ್ನು ತ್ಯಾಗ ಮಾಡಿದ್ದಾರೆ. ಅವರು ಸಾಗಿ ಬಂದ ದಾರಿ ಇಂದಿನ ಯುವಜನತೆಗೆ ಆದರ್ಶವಾದಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು. ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರರಾದ ಡಾ|ಬಾಬು ಜಗಜೀವನರಾಮ್ ಅವರ ಕಂಡಂತಹ ಕಷ್ಟಗಳು, ಹೋರಾಟದ ಬದುಕು ಬೆಳೆದು ಬಂದ ದಾರಿ ಇಂದಿನ ಯುವ ಜನರಿಗೆ ದಾರಿದೀಪವಾಗಿದೆ. ಸ್ವಾಭಿಮಾನ ಭಾರತಕ್ಕಾಗಿ ಆಹಾರ
ಸಮತೋಲ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಸಿರು ಕ್ರಾಂತಿ ಹುಟ್ಟುಹಾಕಿದ್ದರು. ಶೋಷಿತ ಮತ್ತು ದುರ್ಬಲರ ವರ್ಗದವರಿಗೂ ತಮ್ಮ ಜೀವನವನ್ನೇ ಮೀಸಲಾಗಿಟ್ಟಿದ್ದರು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಮಾತನಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಮರಟ್ಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮುದಾಯದ ಬಾಂಧವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.