ಬಾಗಲಕೋಟೆ-ಕುಡಚಿ ರೈಲು ಮಾರ್ಗ…ಶತಕದ ಬೇಡಿಕೆ; ದಶಕವಾದರೂ ಮುಗಿದಿಲ್ಲ!

ಒಟ್ಟಾರೆ, ಜಿಲ್ಲೆಯಲ್ಲಿ ಇರುವ ರೈಲ್ವೆ ಮಾರ್ಗಗಳು, ಸ್ವಾತಂತ್ರ್ಯ ಪೂರ್ವವೇ ನಿರ್ಮಾಣಗೊಂಡಿವೆ.

Team Udayavani, Oct 8, 2022, 5:40 PM IST

ಬಾಗಲಕೋಟೆ-ಕುಡಚಿ ರೈಲು ಮಾರ್ಗ…ಶತಕದ ಬೇಡಿಕೆ; ದಶಕವಾದರೂ ಮುಗಿದಿಲ್ಲ!

ಬಾಗಲಕೋಟೆ: ಉತ್ತರ ಕರ್ನಾಟಕದಿಂದ ಮುಂಬೈ ಭಾಗಕ್ಕೆ ಸಂಪರ್ಕ ಸನಿಹಗೊಳಿಸುವ ಹಾಗೂ ಜಿಲ್ಲೆಯ ವಾಣಿಜ್ಯೋದ್ಯಮಕ್ಕೆ ಪೂರಕವಾಗಲಿರುವ ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣದ ಬೇಡಿಕೆ ಬರೋಬ್ಬರಿ ಒಂದು ಶತಕದ ಹಿಂದಿನದ್ದು. ಅಳೆದು-ತೂಗಿ ಈ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾದರೂ ಅದು ಕುಂಟುತ್ತಲೇ ಸಾಗಿದೆ.

ಹೌದು, ಸ್ವಾತಂತ್ರ್ಯಪೂರ್ವದಲ್ಲೇ ಎರಡು ಬಾರಿ ಸರ್ವೆ ಆಗಿದ್ದ ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣದ ಬೇಡಿಕೆ ಆರಂಭಗೊಂಡಿದ್ದು 1912ರಿಂದ. ಅಲ್ಲಿಂದ 2010ರವರೆಗೂ ಹಲವು ಹೋರಾಟ, ಮನವಿ ಹಾಗೂ ಜನಪ್ರತಿನಿಧಿಗಳ ಒತ್ತಾಯದ ಬಳಿಕ, ಮಮತಾ ಬ್ಯಾನರ್ಜಿ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದ ವೇಳೆ, ಘೋಷಣೆ ಮಾಡಲಾಗಿತ್ತು. ಒಟ್ಟು 141 ಕಿ.ಮೀ ಉದ್ದ, 816 ಕೋಟಿ ಮೊತ್ತದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಇದಕ್ಕಾಗಿ ಐದು ವರ್ಷಗಳ ಸಮಯ ಕೂಡ ನಿಗದಿ ಮಾಡಲಾಗಿತ್ತು.

ಆದರೆ, ಮಾರ್ಗ ನಿರ್ಮಾಣದ ಹೊಣೆ ಕೇಂದ್ರ ಹಾಗೂ ಭೂ ಸ್ವಾಧೀನದ ಹೊಣೆ ರಾಜ್ಯ ಸರ್ಕಾರ ಪಡೆದ ಬಳಿಕ, ಎರಡೂ ಸರ್ಕಾರಗಳ ಸಮನ್ವಯತೆ ಕೊರತೆ, ಅಗತ್ಯ ಅನುದಾನ ದೊರೆಯದ ಹಿನ್ನೆಲೆಯಲ್ಲಿ ಕಳೆದ 2012ರಿಂದ ಆರಂಭಗೊಂಡ ಕಾಮಗಾರಿ ಈ ವರೆಗೂ ಪೂರ್ಣಗೊಂಡಿಲ್ಲ. ಕಳೆದ ಎರಡು ದಶಕಗಳಲ್ಲಿ ಜಿಲ್ಲೆಗೆ ಘೋಷಣೆಯಾದ ಹೊಸ ರೈಲ್ವೆ ಮಾರ್ಗದ ಯೋಜನೆ ಎಂದರೆ ಬಾಗಲಕೋಟೆ-ಕುಡಚಿ ಇದೊಂದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗೆ ಬಾಗಲಕೋಟೆ-ಕುಡಚಿ ಮಾರ್ಗದಲ್ಲಿ ರೈಲು ಓಡಾಟ ಮಾಡಬೇಕಿತ್ತು. ಆದರೆ, ಬಾಗಲಕೋಟೆಯಿಂದ ಖಜ್ಜಿಡೋಣಿ ವರೆಗೆ ಒಟ್ಟು 33 ಕಿ.ಮೀ ಮಾತ್ರ ಮಾರ್ಗ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾರೆ ಸುಮಾರು 700 ಕೋಟಿಯಷ್ಟು ಖರ್ಚು ಮಾಡಿವೆ. ಕಾಮಗಾರಿ ವಿಳಂಬವಾದಂತೆ ಯೋಜನಾ ಮೊತ್ತವೂ ದುಪ್ಪಟ್ಟು ಪಾಲು ಹೆಚ್ಚಳವಾಗುತ್ತಿದೆ.

ಈ ಮಾರ್ಗದಡಿ ಬಾಗಲಕೋಟೆ ಉಪ ವಿಭಾಗದಡಿ 33 ಕಿ.ಮೀ ಮಾರ್ಗಕ್ಕೆ 580 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಜಮಖಂಡಿ ಉಪ ವಿಭಾಗದಡಿ 1800 ಎಕರೆ ಬರುತ್ತಿದ್ದು, ಇನ್ನೂ ಪೂರ್ಣ ಪ್ರಮಾಣದಲ್ಲಿ ಭೂ ಸ್ವಾಧೀನಗೊಂಡಿಲ್ಲ. ಹೀಗಾಗಿ ಕಾಮಗಾರಿ ವಿಳಂಬವಾಗಿದೆ. ಅಲ್ಲದೇ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಡಿ 380 ಎಕರೆ ಭೂಮಿ ಸ್ವಾಧೀನಗೊಳ್ಳಬೇಕಿದೆ.

ಮಾರ್ಗದಿಂದ ಲಾಭವೇನು : ಬಾಗಲಕೋಟೆಯಿಂದ ಆರಂಭಗೊಂಡು, ಕುಡಚಿಗೆ ಪೂರ್ಣಗೊಳ್ಳಬೇಕಿರುವ ಈ ಮಾರ್ಗ ನಿರ್ಮಾಣದಿಂದ ಲೋಕಾಪುರ, ಮುಧೋಳ, ಜಮಖಂಡಿ, ಕಲಾದಗಿ ಭಾಗದಲ್ಲಿ ಹೇರಳವಾಗಿ ಬೆಳೆಯುವ ದ್ರಾಕ್ಷಿ, ಚಿಕ್ಕು ಸಹಿತ ವಿವಿಧ ತೋಟಗಾರಿಕೆ ಬೆಳೆಗಳನ್ನು ಮುಂಬೈ ಮಾರುಕಟ್ಟೆಗೆ ಕಳುಹಿಸಲು ಸಹಕಾರಿ ಆಗಲಿದೆ.

ಅಲ್ಲದೇ ಮುಖ್ಯವಾಗಿ ಜಮಖಂಡಿ ಉಪ ವಿಭಾಗ ವ್ಯಾಪ್ತಿಯಲ್ಲೇ ಅತಿಹೆಚ್ಚು ಸಕ್ಕರೆ ಕಾರ್ಖಾನೆ, ಸಿಮೆಂಟ್‌ ಕಾರ್ಖಾನೆ ಹಾಗೂ ಸುಣ್ಣ ತಯಾರಿಕೆ ಘಟಕಗಳಿವೆ. ಈ ರೈಲ್ವೆ ಮಾರ್ಗ ನಿರ್ಮಾಣದಿಂದ ಇಲ್ಲಿನ ಸಕ್ಕರೆ, ಸಿಮೆಂಟ್‌, ಸುಣ್ಣ ಸಾಗಾಣಿಕೆಗೂ ಪ್ರಮುಖ ಸಹಾಯವಾಗಲಿದೆ. ಇದರಿಂದ ಜಿಲ್ಲೆಯ ವಾಣಿಜ್ಯೋದ್ಯಮದ ಸಂಪರ್ಕ ನೇರವಾಗಿ ಮುಂಬೈ ಮಾರುಕಟ್ಟೆಗೆ ದೊರೆಯಲಿದೆ ಎಂಬುದು ವಾಣಿಜ್ಯೋದ್ಯಮಿಗಳ ಆಶಯ.

ಹೊಸ ಮಾರ್ಗಕ್ಕಾಗಿ ಸರ್ವೇ: ಸಧ್ಯ ನಿರ್ಮಾಣ ಹಂತದಲ್ಲಿರುವ ಕುಡಚಿ-ಬಾಗಲಕೋಟೆ ಮಾರ್ಗವನ್ನು ರಾಯಚೂರು ವರೆಗೆ ವಿಸ್ತರಿಸುವುದು, ಆಲಮಟ್ಟಿ-ಯಾದಗಿರಿಯ 140 ಕಿ.ಮೀ, ಆಲಮಟ್ಟಿ-ಕೊಪ್ಪಳದ 160 ಕಿ.ಮೀ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೇ ಮಾಡಲಾಗಿದೆ. ಅಲ್ಲದೇ ಗಂಗಾವತಿ- ಕುಷ್ಟಗಿ-ಇಳಕಲ್ಲ-ಹುನಗುಂದ-ಬಾಗಲ ಕೋಟೆ ಮಾರ್ಗದಲ್ಲಿ ಹೊಸ ಮಾರ್ಗ ನಿರ್ಮಾಣದ ಸರ್ವೆ ನಡೆಸಲು ಬೇಡಿಕೆ ಇಡಲಾಗಿದೆ.

ಇನ್ನು ರೈಲ್ವೆ ಯೋಜನೆಗಳಲ್ಲಿ ಕಳೆದ 2013ರಲ್ಲಿ ಬಾಗಲಕೋಟೆ ರೈಲ್ವೆ ನಿಲ್ದಾಣವನ್ನು ಆದರ್ಶ ರೈಲು ನಿಲ್ದಾಣವನ್ನಾಗಿ ನಿರ್ಮಿಸುವ ಘೋಷಣೆಯಾಗಿತ್ತು. ಇದು 2022ರಲ್ಲಿ ಕಾಮಗಾರಿ ಆರಂಭಗೊಂಡಿದೆ. ಸೊಲ್ಲಾಪುರ-ಗದಗ ಮಧ್ಯೆ ಇದ್ದ ಮೀಟರ್‌ ಗೇಜ್‌ ಮಾರ್ಗವನ್ನು ಬ್ರಾಡ್‌ಗೇಜ್‌ ಅನ್ನಾಗಿ ಮೇಲ್ದರ್ಜೆಗೇರಿಸಿದ್ದು, ಎರಡು ದಶಕಗಳಲ್ಲಿ ಆದ ಬದಲಾವಣೆ. ಇದೇ ಮಾರ್ಗದಲ್ಲಿ ರೈಲ್ವೆ ಬಡ್ಲಿಂಗ್‌ ಮತ್ತು ವಿದ್ಯುತ್ತೀಕರಣ ಆಗಬೇಕೆಂಬ ಬೇಡಿಕೆ ಕೂಡ ಈಡೇರುತ್ತಿದ್ದು, ಆ ಕಾಮಗಾರಿಯೂ
ನಡೆಯುತ್ತಿದೆ.

ಒಟ್ಟಾರೆ, ಜಿಲ್ಲೆಯಲ್ಲಿ ಇರುವ ರೈಲ್ವೆ ಮಾರ್ಗಗಳು, ಸ್ವಾತಂತ್ರ್ಯ ಪೂರ್ವವೇ ನಿರ್ಮಾಣಗೊಂಡಿವೆ. ಹೊಸದಾಗ ಘೋಷಣೆಯಾಗಿ, ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಲ್ಲಿ ಬಾಗಲಕೋಟೆ-ಕುಡಚಿ ಮಾರ್ಗ ಮಾತ್ರವಿದೆ. ಅದೂ ನಿರೀಕ್ಷಿತ ಮಟ್ಟದಲ್ಲಿ ವೇಗವಾಗಿ ಕಾಮಗಾರಿ ಮುಗಿಯುತ್ತಿಲ್ಲ ಎಂಬ ಬೇಸರ ಜಿಲ್ಲೆಯ ಜನರಲ್ಲಿದೆ.

ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರದ ಬಳಿ ಹಣದ ಕೊರತೆ ಇಲ್ಲ. ಭೂಸ್ವಾಧೀನ ಕಾರ್ಯ ವಿಳಂಭವಾದರಿದ್ದ ಅದು ಪೂರ್ಣಗೊಂಡಿಲ್ಲ. ಹಿಂದೆ 2014ಕ್ಕೂ ಮುಂಚೆ ಎರಡು ಬಾರಿ ಲೋಕಾಪುರ ಬಳಿ ಮಾರ್ಗ ನಿರ್ಮಾಣದ ನಕ್ಷೆ ಬದಲಾಯಿಸಲಾಗಿತ್ತು. ರಾಜ್ಯ ಸರ್ಕಾರದಿಂದ ಭೂಸ್ವಾಧೀನ ಕಾರ್ಯ ನಡೆಯುತ್ತಿದ್ದು, ಭೂಮಿ ನೀಡಿದ, ತಕ್ಷಣ ಕಾಮಗಾರಿ ಆರಂಭಗೊಳ್ಳಲಿದೆ.
ಪಿ.ಸಿ. ಗದ್ದಿಗೌಡರ, ಸಂಸದ

*ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.