Bagalkote: ಧರ್ಮ ಪ್ರತಿಯೊಬ್ಬರ ಆಸ್ತಿಯಾಗಲಿ: ಸಚಿವ ತಿಮ್ಮಾಪುರ


Team Udayavani, Dec 29, 2023, 4:40 PM IST

Bagalkote: ಧರ್ಮ ಪ್ರತಿಯೊಬ್ಬರ ಆಸ್ತಿಯಾಗಲಿ: ಸಚಿವ ತಿಮ್ಮಾಪುರ

ಗುಳೇದಗುಡ್ಡ: ಎಲ್ಲ ಮಠಗಳು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವ ಪರಿಸರ ನಿರ್ಮಾಣ ಮಾಡಬೇಕು. ಆ ಹೆಜ್ಜೆಯನ್ನು ಶ್ರೀಮಠ ಮಾಡುತ್ತಿದೆ. ಜಾತಿ ಧರ್ಮ ಮೀರಿ ಶರಣ ಧರ್ಮ ಪ್ರಸಾರ ಮಾಡುವಲ್ಲಿ ಶ್ರೀ ಗುರುಸಿದ್ದೇಶ್ವರ ಬೃಹನ್ಮಠ ಮಹೋನ್ನತ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಹೇಳಿದರು.

ಪಟ್ಟಣದ ಶ್ರೀಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದಲ್ಲಿ ಶ್ರೀಜಗದ್ಗುರು ಗುರುಸಿದ್ದ ಪಟ್ಟದಾರ್ಯ ಸ್ವಾಮೀಜಿ 38ನೇ ವಾರ್ಷಿಕ
ಪುಣ್ಯಾರಾಧನೆಯ ಶರಣ ಸಂಗಮ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶ್ರೇಣಿಕೃತ ವ್ಯವಸ್ಥೆಯ ಇಂದಿನ ದಿನಗಳಲ್ಲಿ ಮೇಲ್ಜಾತಿಯವರು ಜಾತಿ, ಧರ್ಮದಲ್ಲಿ ಮೇಲು ಕೀಳುಗಳೆನ್ನುತ್ತಿದ್ದಾರೆ. ಧರ್ಮ ಎಲ್ಲರ ಆಸ್ತಿಯಾಗಬೇಕು. ಅದು ಯಾ ವುದೊಂದು ಪಕ್ಷದ ಆಸ್ತಿಯಾಗಬಾರದು. ಇಂದು ಜಾತಿ ಧರ್ಮದ ಸಂಘರ್ಷ ಹೆಚ್ಚಾಗಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಶ್ರೀ ಗುರುಸಿದ್ದೇಶ್ವರ ಬೃಹನ್ಮಠ ಸರ್ವ ಜನಾಂಗದವರ ಶಾಂತಿಯ ತೋಟವಾಗಿದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ ಉಪನ್ಯಾಸ ನೀಡಿ, ಜಾತಿ, ಧರ್ಮ ಮೀರಿ ಎಲ್ಲ ಜಾತಿ ಜನಾಂಗದವರನ್ನು ಒಪ್ಪಿ ಅಪ್ಪಿಕೊಂಡು ಸುಂದರ, ಸೌಹಾರ್ದಯುತ ಸಮಾಜ ಕಟ್ಟುವ ಕಾಯಕದಲ್ಲಿ ನಿರತವಾದ ಶ್ರೀಮಠದ ಸಮಾಜಮುಖೀ, ಜಾತಿ ರಹಿತ ಕೆಲಸ ಮೆಚ್ಚುವಂತದ್ದು ಎಂದರು.

ಶಿವಶರಣ ಮಾದರ ಚೆನ್ನಯ್ಯನ ಜಯಂತಿ ಮಹೋತ್ಸವ ಆಚರಿಸಲಾಯಿತು. ಶ್ರೀ ಚಿಕ್ಕರೇವಣಸಿದ್ದ ಶಿವಶರಣ ಸ್ವಾಮೀಜಿಯವರ ಸ್ಮಾರಕ ಮಂಟಪವನ್ನು ಆಳಂದದ ಸದ್ಗುರು ರೇವಣಸಿದ್ದ ಶ್ರೀಮಠದ ಚನ್ನಬಸವ ಪಟ್ಟದೇವರು ಉದ್ಘಾಟಿಸಿದರು.

ಚಿತ್ರದುರ್ಗದ ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು ರಾಜಕೀಯ ನಾಯಕರಿಂದ, ಹಣ, ವಸ್ತ್ರ, ಮುಂತಾದವುಗಳನ್ನು ಪಡೆದು ಅವರನ್ನು ಅಭಿವೃದ್ಧಿ ಪರ ಪ್ರಶ್ನಿಸಲಾರದ ಸ್ಥಿತಿಗೆ ಬಂದಿದ್ದೇವೆ. ಇದರಿಂದ ನಮ್ಮ ಗ್ರಾಮಗಳು ಹಿಂದುಳಿಯಲು ಕಾರಣವಾಗಿವೆ. ಎಲ್ಲರೂ ನೈತಿಕ  ಸದೃಢತೆ ಹೊಂದಬೇಕೆಂದರು. ಪ್ರಾಧ್ಯಾಪಕ ಡಾ| ಚಂದ್ರಶೇಖರ ಹೆಗಡೆ ಸಂಪಾದಿಸಿರುವ ಶ್ರವಣೋತ್ಸವ ಪುಸ್ತಕ ಲೋಕಾರ್ಪಣೆಗೊಂಡಿತು. ಮತ್ತು ಅಖಂಡ 15ದಿನಗಳವರೆಗೆ ಪ್ರವಚನ ನೀಡಿದ ಶ್ರೀ ಅಭಿನವ ಒಪ್ಪತ್ತೇಶ್ವರ ಶ್ರೀಗಳನ್ನು ಸನ್ಮಾನಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀ ಗುರುಬಸವ ದೇವರು, ಸ್ವಾಗತ ಸಮಿತಿ ಅಧ್ಯಕ್ಷ ಸಂಗನಬಸಪ್ಪ ಚಿಂದಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ ಬರಗುಂಡಿ, ನಾಗೇಶಪ್ಪ ಪಾಗಿ, ಗೌರಮ್ಮ ಕಲಬುರ್ಗಿ, ಪಿಎಸ್‌ಐ ಲಕ್ಷ್ಮಪ್ಪ ಆರಿ ಮುಂತಾದವರಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.