ಬಾಗಲಕೋಟೆ: ಗಮನ ಸೆಳೆದ ರಾಷ್ಟ್ರ ಸೇವಿಕೆಯರ ಪಥ ಸಂಚಲನ

ಶರೀರ ಹಾಗೂ ಮನಸ್ಸನ್ನು ಗಟ್ಟಿಯಾಗಿಟ್ಟುಕೊಳ್ಳಲು ಸಾಧ್ಯ

Team Udayavani, Jan 8, 2024, 11:10 AM IST

ಬಾಗಲಕೋಟೆ: ಗಮನ ಸೆಳೆದ ರಾಷ್ಟ್ರ ಸೇವಿಕೆಯರ ಪಥ ಸಂಚಲನ

ಉದಯವಾಣಿ ಸಮಾಚಾರ
ಬಾಗಲಕೋಟೆ: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಕೇವಲ ಹಾಡು, ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವುದಲ್ಲ. ದೇಶದ ಜನರಿಗೆ, ಸಮಾಜಕ್ಕೆ ಆತ್ಮಾಭಿಮಾನ ಮೂಡಿಸುವ ವಿಶೇಷ ಸಂಘಟನೆ.

ಇದನ್ನು ದೇಶದಲ್ಲಿ ಗಟ್ಟಿಯಾಗಿ ಕಟ್ಟಿದವರು ಡಾ| ಹೆಗಡೆವಾರವರು ಎಂದು ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಸಹ ಕಾರ್ಯವಾಹಿಕಾ ಅಲಕಾತಾಯಿ ಇನಾಮದಾರ ಹೇಳಿದರು. ನಗರದ ಬಸವೇಶ್ವರ ಕಾಲೇಜು ಆವರಣದಲ್ಲಿ ರಾಷ್ಟ್ರ ಸೇವಿಕಾ ಸಮಿತಿಯಿಂದ ರವಿವಾರ ಸಂಜೆ ಹಮ್ಮಿಕೊಂಡಿದ್ದ ಬೌದ್ಧಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುಮಾರು 100 ವರ್ಷಗಳ ಹಿಂದೆ ನಮ್ಮ ದೇಶ, ವಿಚಿತ್ರವಾದ ಸ್ಥಿತಿ, ಹಲವರ ಆಳ್ವಿಕೆಯಲ್ಲಿತ್ತು. ಹಿಂದೂ ಎಂದರೆ, ಸಮಾಜ ಕೀಳರಿಮೆಯಿಂದ ನೋಡುವ ಕಾಲವೂ ಇತ್ತು. ಆದರೆ, ಹಿಂದೂ ಎಂದರೆ ವಿಶಿಷ್ಟ ಪದ್ಧತಿ ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸಿದವರು ಸ್ವಾಮಿ ವಿವೇಕಾನಂದರು. ಅದೇ ಮಾರ್ಗದಲ್ಲಿ ಡಾ|ಕೇಶವ ಹೆಗಡೆವಾರ ಮುಂದುವರಿದರು ಎಂದರು.

ಸಮಾಜಕ್ಕೆ ಆತ್ಮಾಭಿಮಾನದ ಅರಿವು ಮೂಡಿಸಲು ವಿಶೇಷ ಕಾರ್ಯತಂತ್ರ ನೀಡಿದವರು. ಶಾಖೆ ಎಂದರೆ ಕೇವಲ ಆಟವಾಡುವುದು, ಹಾಡು ಹಾಡುವುದು ಹಾಗೂ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದಲ್ಲ.

ಅನ್ನ, ಪ್ರಾಣ, ವಿಜ್ಞಾನ, ಮನೋ ಹಾಗೂ ಆನಂದ ಎಲ್ಲವುಗಳ ಮೂಲಕ ಶರೀರವನ್ನು ಸ್ವಾಸ್ತ್ಯವಾಗಿ ಇಟ್ಟುಕೊಳ್ಳುವುದನ್ನು ಕಲಿಸುತ್ತದೆ. ಶಾಖೆಯಲ್ಲಿ ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಯೋಗದಿಂದ ಶರೀರ ಹಾಗೂ ಮನಸ್ಸನ್ನು ಗಟ್ಟಿಯಾಗಿಟ್ಟುಕೊಳ್ಳಲು ಸಾಧ್ಯ ಎಂದು ಹೇಳಿದರು.

ಇಂದಿನ ಶಾಲಾ ಪಠ್ಯಕ್ರಮದಲ್ಲಿ ಮಕ್ಕಳಿಗೆ ಬೇಕಿರುವ ವ್ಯವಹಾರಿಕೆ, ಧಾರ್ಮಿಕ ಜ್ಞಾನ ಇಲ್ಲ. ಬ್ರಿಟಿಷರು ನೀಡಿದ ಪಠ್ಯಕ್ರಮವನ್ನು ನಾವು ಅನುಸರಿಸುತ್ತಿದ್ದೇವೆ. ನಮಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಅವಶ್ಯಕತೆ ಇತ್ತು. ಆದರೆ, ರಾಜ್ಯದಲ್ಲಿ ಇದು ಜಾರಿಯಾಗಲಿಲ್ಲ ಎಂದು ವಿಷಾದಿಸಿದರು. ಜಮಖಂಡಿಯ ಸ್ತ್ರೀರೋಗ ತಜ್ಞೆ ಡಾ| ಲಕ್ಷ್ಮೀ ತುಂಗಳ ವೇದಿಕೆಯ ಮೇಲಿದ್ದರು.

ಗಮನ ಸೆಳೆದ ಪಥ ಸಂಚಲನ: ಸಂಕ್ರಾಂತಿ ಹಬ್ಬದ ಅಂಗವಾಗಿ ರಾಷ್ಟ್ರ ಸೇವಿಕಾ ಸಮಿತಿ ಬಾಗಲಕೋಟೆ ಘಟಕ ಹಮ್ಮಿಕೊಂಡಿದ್ದ ಮಹಿಳೆಯರ ಪಥ ಸಂಚಲನ ಸಡಗರದಿಂದ ಜರುಗಿತು. ಮಹಿಳಾ ಗಣವೇಷಧಾರಿಗಳ ಆಕರ್ಷಕ ಪಥ ಸಂಚಲನ ನೋಡಲು ಜನರ ದಂಡೇ ಸೇರಿತ್ತು.

ನಗರದ ಪ್ರಮುಖ ಬೀದಿಗಳಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದವು. ಗಲ್ಲಿ ಗಲ್ಲಿಗಳಲ್ಲಿ ರಸ್ತೆ, ಮನೆಗಳ ಮುಂದೆ ರಂಗೋಲಿಯ ಚಿತ್ತಾರ ಗಮನ ಸೆಳೆಯುತ್ತಿದ್ದವು. ಸಂಜೆ 4ಕ್ಕೆ ಬಸವೇಶ್ವರ ಲೇಜು ಮೈದಾನದಿಂದ ಎರಡು ಮಾರ್ಗಗಳಲ್ಲಿ ಮಹಿಳಾ ಗಣವೇಷಧಾರಿಗಳು ಪಥ ಸಂಚಲನ ಹೊರಟರು. ಸರಿಯಾಗಿ 5:20ಕ್ಕೆ ಪುನಃ ಬಸವೇಶ್ವರ ಮೈದಾನ ತಲುಪಿದರು. ಪಥಸಂಚಲನ ಹೊರಟಮಾರ್ಗದುದ್ದಕ್ಕೂ ಜಯಘೋಷಗಳು ಮೊಳಗಿದವು. ರಸ್ತೆಯ ಇಕ್ಕೆಲಗಳಲ್ಲಿ ಜನರು, ಗಣವೇಷಧಾರಿಗಳಿಗೆ ಹೂವಿನ ಮಳೆಗೈಯುತ್ತಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.