![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Bagalkote: ಸೇವಂತಿಗೆ ಹೂ ರೈತರ ಆರ್ಥಿಕ ಅಭಿವೃದ್ಧಿ ಬೆಳೆ
10 ಗುಂಟೆ ಕೃಷಿಭೂಮಿಯನ್ನು 5 ಎಕರೆಗಳಷ್ಟು ಬೆಳೆಸಿಕೊಳ್ಳಬಹುದಾಗಿದೆ
Team Udayavani, Nov 13, 2023, 4:46 PM IST
![Bagalkote: ಸೇವಂತಿಗೆ ಹೂ ರೈತರ ಆರ್ಥಿಕ ಅಭಿವೃದ್ಧಿ ಬೆಳೆ](https://www.udayavani.com/wp-content/uploads/2023/11/Bagal-2-620x249.jpg)
ಬಾಗಲಕೋಟೆ: ಬಿಳಿ ಮತ್ತು ಹಳದಿ ಬಣ್ಣಗಳಲ್ಲಿದ್ದ ಸೇವಂತಿಗೆ ಇಂದು ಆಧುನಿಕ ತಾಂತ್ರಿಕತೆಯ ಫಲವಾಗಿ ಬಣ್ಣಬಣ್ಣದ
ಹೂಗಳಲ್ಲಿ ಅರಳಿ ನೋಡುಗರ ಕಣ್ಮನ ಸೆಳೆಯುತ್ತಿವೆ ಎಂದು ಪ್ರಭಾರಿ ಕುಲಪತಿ ಹಾಗೂ ಶಿಕ್ಷಣ ನಿರ್ದೇಶಕ ಡಾ|ಎನ್.ಕೆ. ಹೆಗಡೆ ಹೇಳಿದರು.
ನಗರದ ಹೊರವಲಯದಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿನೂತನವಾದ ಸೇವಂತಿಗೆ ಬೆಳೆ ಕ್ಷೇತ್ರೋತ್ಸವ
ಕಾರ್ಯಕ್ರಮದಲ್ಲಿ ಮಾತನಾಡಿದರು.
ಒಂದು ಕಾಲದಲ್ಲಿ ಕೇವಲ ಸಂರಕ್ಷಿತ ಬೆಳೆಯಾಗಿದ್ದ ಸೇವಂತಿಗೆ ಇಂದು ಬಾಹ್ಯ ವಾತಾವರಣದಲ್ಲಿಯೂ ಕೂಡ
ಬೆಳೆಯಬಹುದಾಗಿದೆ. ನವೆಂಬರ್ದಿಂದ ಜನವರಿಯಲ್ಲಿ ಹೆಚ್ಚು ಹೂವು ಬಿಡುವ ಇದು ರೈತರಿಗೆ ಆರ್ಥಿಕ ಬೆಳೆಯಾಗಿದೆ ಎಂದರು.
ಕ್ಷೇತ್ರೋತ್ಸವ ಎಂಬುದು ಬೆಳೆಯ ಪ್ರಾತ್ಯಕ್ಷಿಕೆ, ವಿಜ್ಞಾನಿಗಳು ಮತ್ತು ರೈತರ ಜೊತೆಗೆ ಚರ್ಚೆ ಆದರೆ ಉತ್ತಮ ಫಲಿತಾಂಶ ಕಾಣಲು ಸಾಧ್ಯ. ಈ ಹಿನ್ನೆಲೆಯಲ್ಲಿ ತೋವಿವಿಯ ವಿಜ್ಞಾನಿಗಳು ರೈತರಿಗೆ ಸಲಹೆ ಸೂಚನೆಗಳನ್ನು ನೀಡಲು ಸದಾ ಸಿದ್ಧವಾಗಿದ್ದಾರೆ ಎಂದು ತಿಳಿಸಿದರು.
ತೋಟಗಾರಿಕೆ ಕಲೇಜಿನ ಡೀನ್ ಡಾ|ಬಾಲಾಜಿ ಕುಲಕರ್ಣಿ ಮಾತನಾಡಿ, ರೈತರಿಗೆ ಕೊರತೆ ಇರುವ ಕೃಷಿಭೂಮಿ, ನೀರು ಮತ್ತು ಮಾರುಕಟ್ಟೆ ಗಮನದಲ್ಲಿಟ್ಟುಕೊಂಡು ತಮ್ಮ ಆರ್ಥಿಕ ಭದ್ರತೆಯನ್ನು ಕಾಪಾಡಿಕೊಳ್ಳಲು ಪುಷ್ಪಕೃಷಿ ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದರು.
ವಿಸ್ತರಣಾ ನಿರ್ದೇಶಕ ಹಾಗೂ ಡೀನ್, ವಿದ್ಯಾರ್ಥಿ ಕಲ್ಯಾಣ ಡಾ|ಕೆ. ರಾಮಚಂದ್ರ ನಾಯ್ಕ ಮಾತನಾಡಿ, ಇಂತಹ ವಿಶೇಷವಾದ
ಕ್ಷೇತ್ರೋತ್ಸವಗಳನ್ನು ಮಾಡಿ ರೈತರಿಗೆ ಪ್ರಯೋಜನ ನೀಡುವುದು ನಮ್ಮ ತೋವಿವಿಯ ಕರ್ತವ್ಯವಾಗಿದೆ. ಇಂದಿನ ಆಧುನಿಕ
ತಾಂತ್ರಿಕತೆಯ ಕಾರಣಗಳಿಂದ 10 ಗುಂಟೆ ಕೃಷಿಭೂಮಿಯನ್ನು 5 ಎಕರೆಗಳಷ್ಟು ಬೆಳೆಸಿಕೊಳ್ಳಬಹುದಾಗಿದೆ ಎಂದರು.
ಇದೇ ವೇಳೆ ಪುಷ್ಪಕೃಷಿಗೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸಗಳನ್ನು ಡಾ| ಸತೀಶ ಪಾಟೀಲ, ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಪುಷ್ಪಕೃಷಿ ವಿಭಾಗ, ಡಾ|ವಸೀಮ್. ಎಂ.ಎ., ಸಹಾಯಕ ಪ್ರಾಧ್ಯಾಪಕರು, ಕೀಟಶಾಸ್ತ್ರ, ತೋವಿಶಿಘ ಹಾಗೂ ಡಾ| ನೂರುಲ್ಲಾ ಹಾವೇರಿ, ಸಹಾಯಕ ಪ್ರಾಧ್ಯಾಪಕರು, ಸಸ್ಯರೋಗಶಾಸ್ತ್ರ, ತೋಮವಿ ಇವರು ನೀಡಿದರು. ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ರೈತರು ಉಪಸ್ಥಿತರಿದ್ದರು.
ತೋವಿವಿಯ ರೈತ ವಿಕಾಸ ಭವನ ಮುಖ್ಯಸ್ಥ ಡಾ|ವಸಂತ ಗಾಣಿಗೇರ, ತೋವಿವಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಸ್ತರಣಾ ಮುಂದಾಳು ಹಾಗೂ ಡಾ| ಶಶಿಕುಮಾರ .ಎಸ್. ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.