ಬಾಗಲಕೋಟೆ: ತೇರದಾಳ ಪೊಲೀಸ್‌ ಸಿಬ್ಬಂದಿಗಿಲ್ಲ ವಸತಿಗೃಹ


Team Udayavani, Jan 19, 2024, 5:57 PM IST

Udayavani Kannada Newspaper

ಉದಯವಾಣಿ ಸಮಾಚಾರ
ತೇರದಾಳ: ಪಟ್ಟಣದಲ್ಲಿರುವ ಪೊಲೀಸ್‌ ಠಾಣೆ ಹಾಗೂ ರಬಕವಿ ಉಪ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಾಸಿಸಲು ಅಗತ್ಯಕ್ಕೆ ತಕ್ಕಂತೆ ವಸತಿ ಗೃಹಗಳು ಇಲ್ಲದ ಕಾರಣ ಬಾಡಿಗೆ ಮನೆ ಹುಡುಕಾಡುವಂತಾಗಿದೆ.

ತೇರದಾಳ ಪೊಲೀಸ್‌ ಠಾಣೆ ಹಾಗೂ ರಬಕವಿ ಉಪಠಾಣೆಯಲ್ಲಿ ಪಿಎಸ್‌ಐ, ಎಎಸ್‌ಐ ಸೇರಿದಂತೆ ಅಂದಾಜು 35 ಸಿಬ್ಬಂದಿ ಇದ್ದಾರೆ.
ಆದರೆ, ಸಿಬ್ಬಂದಿ ಇರುವಷ್ಟು ಪೊಲೀಸ್‌ ವಸತಿ ಗೃಹಗಳು ಇಲ್ಲ.

ನಾಡಕಾರ್ಯಾಲಯದ ಎದುರಿಗೆ ಕೇವಲ ಆರು ಮತ್ತು ಜಮಖಂಡಿ ರಸ್ತೆಗಿರುವ ಪೊಲೀಸ್‌ ಠಾಣೆಯ ಆವರಣದಲ್ಲಿ ಆರು ವಸತಿ ಗೃಹಗಳಿವೆ. ಅದರಂತೆ ಠಾಣಾ ವ್ಯಾಪ್ತಿಯ ಹೊರಠಾಣೆ ಹೊಂದಿದ ಸಮೀಪದ ರಬಕವಿಯಲ್ಲಿ ನಾಲ್ಕು ಪೊಲೀಸ್‌ ವಸತಿಗೃಹಗಳಿವೆ. ಪಟ್ಟಣದ ಠಾಣೆ ಆವರಣದಲ್ಲಿ ಪಿಎಸ್‌ಐ ಅವರಿಗೆ ಪ್ರತ್ಯೇಕ ವಸತಿ ಗೃಹ ಇದೆ. ಆದರೆ, ಇನ್ನೂಳಿದ 18 ಸಿಬ್ಬಂದಿಗೆ ವಸತಿಗೃಹ ಇಲ್ಲದೆ ಪಟ್ಟಣದ ಬೇರೆ ಕಡೆಗೆ ಬಾಡಿಗೆ ಮನೆಯಲ್ಲಿದ್ದಾರೆ. ಬಾಡಿಗೆ ಇದ್ದ ಕೆಲವು ಕಡೆಯಲ್ಲಿ ಅಗತ್ಯ ಸೌಲಭ್ಯಗಳು ಇಲ್ಲದಿರುವುದು ಒಂದೆಡೆಯಾದರೆ ಹೆಚ್ಚು ದುಬಾರಿಯೂ ಆಗುತ್ತಿದೆ. ಇದರ ನಡುವೆ ನಾಡಕಾರ್ಯಾಲಯ ಎದುರಿಗೆ ಇರುವ ವಸತಿಗೃಹಗಳು ಕೇವಲ ಹೆಸರಿಗಷ್ಟೇ ವಸತಿಗೃಹಗಳು ಅನಿಸಿಕೊಂಡಿವೆ. ಅಲ್ಲಿ ಶೌಚಾಲಯಗಳು ಇಲ್ಲ. ಚರಂಡಿ ಇಲ್ಲ.
ಕೊಠಡಿಗಳು ಇಕ್ಕಟ್ಟಿನಿಂದ ಕೂಡಿವೆ.

ಪಟ್ಟಣದ ಎಸ್‌ಬಿಐದಿಂದ ದೇಸಾರ ಬಾವಿ ಕಡೆಗೆ ಹೋಗುವ ರಸ್ತೆಯಲ್ಲಿ ಮೊದಲು ಪೊಲೀಸ್‌ ಇಲಾಖೆಗೆ ಸಂಬಂಧಿಸಿದ
ವಸತಿಗೃಹಗಳಿದ್ದವು. ಆದರೆ, ಅವುಗಳು ಹಾಳು ಬಿದ್ದಿದ್ದರಿಂದ ಅವುಗಳನ್ನು ತೆರವುಗೊಳಿಸಲಾಗಿದೆ. ಇದರ ನಡುವೆ ಜಾಗದ ಅತಿಕ್ರಮಣವೂ ಸದ್ದಿಲ್ಲದೆ ನಡೆದಿತ್ತು. ಈ ಬಗ್ಗೆ ಎಚ್ಚೆತ್ತುಗೊಂಡ ಪೊಲೀಸರು ಅಲ್ಲಿನ ನಿರುಪಯುಕ್ತ ವಸ್ತುಗಳನ್ನು ಹೊರತೆಗೆದು ಹಾಕುವ ಕೆಲಸ ಮಾಡಿದ್ದಾರೆ. ಈಗಿನ ಪಿಎಸ್‌ಐ ಅಪ್ಪಣ್ಣ ಐಗಳಿ ಜಾಗದ ಮುಂದೆ ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ಜಾಗ ಎಂಬ ಫಲಕ ಅಳವಡಿಸುವ ಕೆಲಸ ಮಾಡಿದ್ದಾರೆ. ಆದರೆ, ಜಾಗ ಮಾತ್ರ ಹಾಳು ಬಿದ್ದಿದೆ.

ವಸತಿಗೃಹ ಕಟ್ಟಲು ಠಾಣೆಯ ಆವರಣದಲ್ಲಿಯೂ ಸಾಕಷ್ಟು ಸ್ಥಳಾವಕಾಶ ಇದೆ. ಅದರಂತೆ ದೇಸಾರ ಬಾವಿ ರಸ್ತೆಯಲ್ಲಿಯೂ
ಇದೆ. ಆದ್ದರಿಂದ ವಸತಿಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ಮೂಲಕ ಪೊಲೀಸರಿಗೆ ಬಲ ತುಂಬುವ ಕಾರ್ಯ ಮಾಡಬೇಕಿದೆ.

ತೇರದಾಳ ಪೊಲೀಸ್‌ ಠಾಣೆಗೆ ಸಂಬಂಧಿ ಸಿದ ಜಾಗ ಅತಿಕ್ರಮಣ ಮಾಡಬಾರದು ಎಂಬ ಸದುದ್ದೇಶದಿಂದ ಠಾಣೆಯವರು ಅಲ್ಲಿ ಫಲಕ ಅಳವಡಿಸುವ ಕೆಲಸ ಮಾಡಿದ್ದಾರೆ. ಪೊಲೀಸರಿಗೆ ವಸತಿಗೃಹಗಳ ಕೊರತೆ ಇದೆ. ವಸತಿಗೃಹಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳಿಗೆ ವಾಸ್ತವ ತಿಳಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು. ಬಳಿಕ ನಿರ್ದೇಶನ ಬಂದ ಕೂಡಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ಶಾಂತವೀರ ಈ.
ಡಿಎಸ್‌ಪಿ ಜಮಖಂಡಿ

*ಬಿ.ಟಿ. ಪತ್ತಾರ

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.