ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ
Team Udayavani, May 19, 2022, 11:45 PM IST
ರಬಕವಿ-ಬನಹಟ್ಟಿ : ರಬಕವಿ-ಬನಹಟ್ಟಿ ನಗರ ಮತ್ತು ಸುತ್ತಮುತ್ತಲೀನ ಗ್ರಾಮೀಣ ಪ್ರದೇಶದಲ್ಲಿ ಗುರುವಾರ ಸಂಜೆ 2 ಗಂಟೆಗಳಿಗಿಂತ ಹೆಚ್ಚು ಕಾಲ ಮಿಂಚು ಗುಡುಗುಗಳೊಂದಿಗೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಿತು.
ಮಳೆಯಿಂದಾಗಿ ನಗರದ ಪ್ರಮುಖ ಬೀದಿಗಳು ನೀರಿನಿಂದಾಗಿ ಜಲಾವೃತವಾಗಿರುವುದರ ಜೊತೆಗ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಗುರುವಾರ ಬೆಳ್ಳಿಗ್ಗೆಯಿಂದ ಜಿಟಿ ಜಿಟಿ ಮಳೆ ಇತ್ತು. ಸಂಜೆ ಸುರಿದ ಬಾರಿ ಮಳೆಯಿಂದಾಗಿ ನಗರದಲ್ಲಿ ತಂಪೆರೆದ ವಾತಾವರಣ ನಿರ್ಮಾಣಗೊಂಡಿದೆ. ಈ ಭಾಗದ ಜನರು ಸಾಕಷ್ಟು ಬೀಸಿಲಿನಿಂದ ಬಸವಳಿದಿದ್ದು, ಈಗ ಸುರಿದ ಮಳೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ.
ಈಗಾಗಲೇ ಈ ಭಾಗದ ಸಾಕಷ್ಟು ರೈತರು ಬಿತ್ತನೆಯನ್ನು ಪ್ರಾರಂಭಿಸಿದ್ದು ಕೆಲವು ಜನರು ನಾಟಿ ಕಾರ್ಯ ಮುಗಿಸಿದ್ದಾರೆ. ಈಗ ಸುರಿದ ಮಳೆಯು ಅತ್ಯವಶ್ಯಕವಾಘಿ ಬೇಕಾಗಿತ್ತು. ಬೇಸಿಗೆಯಿಂದಾಗಿ ಬಾವಿ ಮತ್ತು ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕೂಡಾ ಕಡಿಮೆಯಾಗಿತ್ತು. ಈ ಮಳೆಯಿಂದಾಗಿ ಭೂಮಿಗೆ ಸಾಕಷ್ಟು ನೀರು ಬಂದಿದ್ದು ರೈತರಲ್ಲಿ ಮಂದಹಾಸ ಮೂಡಿದೆ ಎಂದು ರೈತರಾದ ಸಿದ್ದು ಗೌಡಪ್ಪನವರ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು