ಬೇಕೆ ಬೇಕು, ಡಿಜೆ ಬೇಕು: ಗಣಪತಿ ಮಂಡಳಿಯಿಂದ ಪ್ರತಿಭಟನೆ


Team Udayavani, Sep 11, 2021, 8:08 PM IST

banahatti news

ಬನಹಟ್ಟಿ : ಸರ್ಕಾರ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನನ್ನು ಕೂರಿಸಲು ಅನುಮತಿ ನೀಡಿದೆ. ಆದರೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಹೊಸುರನಲ್ಲಿ ಡಿ ಜೆ ಸಾಂಗ್ ಹಾಕಿಕೊಂಡು ಆಟೋ ಮತ್ತು ಟ್ರ‍್ಯಾಕ್ಟರ್ ಮೇಲೆ ಮೆರವಣಿಗೆ ಮಾಡುತ್ತಾ ಗಣಪತಿ ತರುವ ಸಂಧರ್ಭದಲ್ಲಿ ಪೊಲೀಸ್ ಇಲಾಖೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಸೂಚಿಸಿದರು.ಇನ್ನೂ ಕೊರೊನಾ ಹಾವಳಿ ಮುಗಿದಿಲ್ಲ ಹೀಗಾಗಿ ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಅಂತ ಸೂಚಿಸಿದರು.

ಆದರೆ ನಮಗೆ ಡಿಜೆ ಗೆ ಅನುಮತಿ ನೀಡುವವರೆಗೂ ನಾವು ಗಣಪತಿಯನ್ನು ಮುಂದೆ ಒಯ್ಯುವುದಿಲ್ಲ ಎಂದು ಗಣಪತಿ ಮಂಡಳಿ ರಸ್ತೆ ಮಧ್ಯೆಯೇ ಅನುಮತಿ ನೀಡಲು ತಾಲೂಕು ಆಡಳಿತಕ್ಕೆ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಕೂಡಾ ಸ್ಥಳ ಆಗಮಿಸಿ ಗಣಪತಿ ಮಂಡಳಿ ಅವರಿಗೆ ಮತ್ತು ಹೋರಾಟಕ್ಕೆ ಬೆಂಬಲಿಸಿದ ಮುಖಂಡರಿಗೂ, ಕಾರ್ಯಕರ್ತರಿಗೂ ಸರ್ಕಾರ ಯಾರು ಉಲ್ಲಂಘನೆ ಮಾಡುವುದು ಬೇಡ ಎಲ್ಲರೂ ಸಂತೋಷದಿಂದ ಖುಷಿಯಿಂದ ಆಚರಿಸಿ ಎಂದು ತಿಳಿ ಹೇಳಿದರು.

ಇದನ್ನೂ ಓದಿ:ಚೆಕ್ ಬೌನ್ಸ್:3.5 ಲಕ್ಷ ಪರಿಹಾರ, 6 ತಿಂಗಳ ಶಿಕ್ಷೆ

ಇದೇ ಸಂದರ್ಭದಲ್ಲಿ ತೇರದಾಳ ಶಾಸಕ ಸವದಿಯವರೊಂದಿಗೆ ಡಿಜೆ ಸೌಂಡಗೆ ಅನುಮತಿ ನೀಡಲು ವಾಗ್ವಾದ ಕೂಡ ಕೆಲ ಹೊತ್ತು ನಡೆಯಿತು.ತದ ನಂತರ ಪುನಃ ಗಣಪತಿ ಮಂಡಳಿಯವರು ರಾಮಸೇನೆ ಹಾಗೂ ಭಜರಂಗ ಧಳ ಸಂಘಟನೆಗಳ ಬೆಂಬಲದೊಂದಿಗೆ ಮತ್ತೆ ರಾತ್ರಿವರೆಗೂ ಕೂಡ ಅನುಮತಿ ಸಲುವಾಗಿ  ಹೋರಾಟ ಮುಂದುವರೆಯಿತು. ಶಾಸಕ ಸವದಿ ಸುಪುತ್ರ ವಿದ್ಯಾಧರ ಸವದಿ ಕೂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರು.

ವಾಹನಗಳನ್ನೆಲ್ಲಾ ತಡೆ ಹಿಡಿದು ಅನುಮತಿ ನೀಡಲೇ ಬೇಕೆಂದು ಗಣೇಶನ ಜೈಕಾರ ಹಾಕುತ್ತಾ ಹೋರಾಟ ಮುಂದುವರೆಸಿದರು. ವರ್ಷಕ್ಕೆ ಒಂದು ಬಾರಿ ಗಣೇಶನ ಹಬ್ಬ ಬರುತ್ತೆ ಆದ್ದರಿಂದ ಈ ಬಾರಿ ಡಿಜೆ ಗೆ ಅವಕಾಶ ನೀಡಬೇಕು. ಕಳೆದ ಎರಡು ವರ್ಷಗಳಿಂದ ಕೊರೊನಾ ಹಾವಳಿಯಿಂದ ವಿಜೃಂಭಣೆಯಿಂದ ಆಚರಣೆ ಮಾಡೇ ಮಾಡುತ್ತೇವೆ ಎಂದು ಸ್ಥಳೀಯ ಹಿಂದೂ ಪರ ಸಂಘಟನೆಗಳಿಂದ ಶಾಸಕರಿಗೆ ಅನುಮತಿ ನೀಡುವಂತೆ ಒತ್ತಾಯಿಸಲಾಯಿತು.

ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಸಂಜಯ್ ಇಂಗಳೇ, ಸಿಪಿಐ ಕರುನೇಶಗೌಡ, ಪಿಎಸೈ ಸುರೇಶ ಮಂಟೂರ, ಹಾಗೂ ಮಹಾಲಿಂಗಪುರ ಪಿಎಸ್‌ಐ ವಿಜಯ ಕಾಂಬಳೆ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಜನರನ್ನು ನಿಯಂತ್ರಿಸುವಲ್ಲಿ ಕಾರ್ಯನಿರತರಾಗಿದ್ದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.