ಬನಹಟ್ಟಿ ಪೊಲೀಸರ ಕಾರ್ಯಾಚರಣೆ: ಮೂವತ್ತಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ, ಮೂವರ ಬಂಧನ
Team Udayavani, May 25, 2023, 6:00 PM IST
ರಬಕವಿ-ಬನಹಟ್ಟಿ: ಸಮೀಪದ ಯಲ್ಲಟ್ಟಿ ಗ್ರಾಮದ ಮೂಲಕ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮೂವತ್ತಕ್ಕೂ ಹೆಚ್ಚು ಜಾನುವಾರುಗಳನ್ನು ಬನಹಟ್ಟಿ ಠಾಣೆಯ ಪೊಲೀಸ್ ರು ಬುಧವಾರ ವಶಪಡಿಸಿಕೊಂಡ ಘಟನೆ ನಡೆದಿದೆ.
ಒಟ್ಟು ಮೂರು ವಾಹನಗಳಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಈ ಸಂಬಂಧ ಮೂವರು ವಾಹನ ಚಾಲಕರಾದ ಅಥಣಿ ತಾಲ್ಲೂಕಿನ ಮುಸಗುಪ್ಪಿಯ ರಾವಸಾಬ ಹಾರೂಗೇರಿ, ಮಹಾರಾಷ್ಟ್ರದ ಕವಟೆಮಂಕಾಳದ ಸಾಗರ ಲೊಂಡೆ ಮತ್ತು ಕವಟೆಮಂಕಳ ತಾಲ್ಲೂಕಿನ ಇಂಗನಗಾವ್ ಗ್ರಾಮದ ಅಶೋಕ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಜಾನುವಾರುಗಳನ್ನು ಮಾಂಸದ ಉದ್ದೇಶಕ್ಕಾಗಿ ಆಕ್ರಮವಾಗಿ ಸಾಗಿಸಲಾಗುತ್ತಿತ್ತು. ಜಾನುವಾರುಗಳ ಒಟ್ಟು ಮೌಲ್ಯವು ರೂ. 4 ಲಕ್ಷದಷ್ಟು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಕ್ಷಣೆ ಮಾಡಿದ ಜಾನುವಾರುಗಳನ್ನು ರಬಕವಿ ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿರುವ ಗೋಶಾಲೆಗೆ ಬಿಡಲಾಯಿತು.
ಈ ಕುರಿತು ಸ್ಥಳೀಯ ಪಿಎಸ್ಐ ರಾಘವೇಂದ್ರ ಖೋತ ಕರ್ನಾಟಕ ಗೋಹತ್ಯೆ ಮತ್ತು ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ನಡೆಸಿದ್ದಾರೆ.
ಇದನ್ನೂ ಓದಿ: Nithyananda ನೊಂದಿಗೆ ನನ್ನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ: ನಟ ಅಶೋಕ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ