ಬಾಳು ಬಂಗಾರವಾಗಿಸಿದ `ಬಾಳೆ’: ಬಾಳೆಗೆ ಬಂಗಾರದ ಬೆಲೆ…….!


Team Udayavani, Jul 15, 2022, 2:35 PM IST

14

ರಬಕವಿ-ಬನಹಟ್ಟಿ: ರಾಜ್ಯವಷ್ಟೇ ಅಲ್ಲದೆ ಈ ಬಾರಿ ದೇಶಾದ್ಯಂತ ಬಾಳೆ ಬೆಳೆಯ ಇಳುವರಿ ಕ್ಷೀಣಿಸಿದ್ದರ ಹಿನ್ನಲೆಯಲ್ಲಿ ಜವಾರಿಯಷ್ಟೇ ಹೈಬ್ರೀಡ್ ತಳಿಯ ಬಾಳೆಗೂ ಬಾರಿ ಬೇಡಿಕೆ ಬಂದಿದ್ದು, ಐತಿಹಾಸಿಕ ದಾಖಲೆ ಬರೆಯುವಂತಾಗಿದೆ.

ಹೌದು, ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಪ್ರತಿ ಕೆಜಿ ಬಾಳೆಗೆ 2 ರಿಂದ 3 ರೂ. ಇದ್ದದ್ದು, ಇದೀಗ 22 ರಿಂದ 23 ರೂ. ಗಳವರೆಗೆ ಏರಿಕೆ ಕಂಡಿದ್ದು, ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಇಷ್ಟೊಂದು ಬೆಲೆ ಏರಿಕೆ ಕಂಡಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ.

ಜವಾರಿ, ರಸಬಾಳೆ, ಏಲಕ್ಕಿ ಬಾಳೆ ಹಣ್ಣಿನಷ್ಟೇ ಹೈಬ್ರೀಡ್ ತಳಿಯ ಜಿ-9 ಬಾಳೆಯೂ ಸಮನಾದ ಬೆಲೆಗೆ ಮಾರುಕಟ್ಟೆಯಲ್ಲಿ ದುಬಾರಿಯಾಗಿದ್ದು, ಜನರು ಹೆಚ್ಚು ಕಡಿಮೆ ಸೇಬು, ಮಾವಿನ ಹಣ್ಣಿಗೆ ನೀಡುವಷ್ಟು ಹಣ ಕೊಟ್ಟು ಬಾಳೆ ಹಣ್ಣು ಖರೀದಿಸುವದು ಅನಿವಾರ್ಯವಾಗಿದೆ.

ರಾಜ್ಯದಲ್ಲಿ ಬೆಳೆಯವ ಬಾಳೆ ಬೆಳೆ ಉತ್ಪನ್ನದಲ್ಲಿ ಕೊರತೆ ಕಾಣಿಸಿಕೊಂಡಿದೆ. ಹೀಗಾಗಿ ಈಗ ತಮಿಳುನಾಡು, ಆಂಧ್ರ ರಾಜ್ಯಗಳಿಂದ ಬಾಳೆ ಆಮದು ಮಾಡಿಕೊಳ್ಳಲಾಗುತ್ತಿದ್ದರೂ ಬೇಡಿಕೆಯಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಹಜವಾಗಿ ಬಾಳೆಹಣ್ಣಿನ ಬೆಲೆ ಗಗನಕ್ಕೇರಿದೆ. ಕೆಲವಡೆ ಬಾಳೆಹಣ್ಣು ಮಾರಾಟಕ್ಕೆ ಸಿಗುತ್ತಿಲ್ಲ. ರಾಜ್ಯದ ಸಗಟು ಮಾರುಕಟ್ಟೆಯಲ್ಲಿ ಜಿ-9 ಬಾಳೆಯು ಕ್ವಿಂಟಲ್‌ಗೆ 2,200 ರಿಂದ 2,500 ರೂ.ವರೆಗೆ ಮಾರಾಟವಾಗುತ್ತಿದೆ.

ಬೆಳೆಗಾರರ ಸಂಖ್ಯೆ ಕ್ಷೀಣ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಪ್ರತಿ ವರ್ಷ ಸಾವಿರ ಎಕರೆಯಷ್ಟು ಬಾಳೆ ಬೆಳೆಯುತ್ತಿದ್ದರು. ಕಳೆದೆರಡು ವರ್ಷಗಳಿಂದ ಸತತ ಹಾನಿಯಿಂದಾಗಿ ಅನ್ಯ ಬೆಳೆಗೆ ರೈತರು ಮೊರೆ ಹೋದ ಕಾರಣ ಸುಮಾರು 200 ಎಕರೆಯಷ್ಟು ಬಾಳೆ ಮಾತ್ರ ದೊರಕುವಂತಾಗಿದೆ.

ಶ್ರಾವಣ ಸೇರಿದಂತೆ ಸಾಕಷ್ಟು ಹಬ್ಬಗಳು ಸರದಿಯಲ್ಲಿದ್ದು, ಇನ್ನೂ ಬೆಲೆ ಹೆಚ್ಚಾಗುವ ನಿರೀಕ್ಷೆಯಿದ್ದು, ಬಾಳೆ ಬೆಳೆದ ರೈತನಿಗೆ ನಿಜವಾಗಿಯೂ ಬಂಗಾರವಾಗಿದ್ದರೆ, ಖರೀದಿ ಮಾಡುವ ಗ್ರಾಹಕನಿಗೆ ಮಾತ್ರ ಬಾಳೆ ಬಿಸಿ ತುಪ್ಪವಾಗಿದೆ.

ಸಸಿಗಳ ಕೊರತೆ: ಮೂರ‍್ನಾಲ್ಕು ವರ್ಷಗಳಿಂದ ನರ್ಸರಿಗಳಿಗೆ ಬಾಳೆ ಸಸಿಯಿಂದ ಹಾನಿ ಅನುಭವಿಸಿರುವ ಕಾರಣ ಈ ಬಾರಿ ಸಸಿಗಳನ್ನು ಕಡಿಮೆ ಪ್ರಮಾಣದಲ್ಲಿ ಉತ್ಪಾದನೆಗೆ ಕಾರಣವಾಗಿತ್ತು. ಇದೀಗ ಸಸಿ ಸಮಸ್ಯೆ ಎದುರಿಸುತ್ತಿರುವ ಹಿನ್ನಲೆ ರೈತರೂ ಸಸಿಗಳಿಗಾಗಿ ಅಲೆದಾಟ ತಪ್ಪಿಲ್ಲ.

ಜಿ-9 ತಳಿಯ ಬಾಳೆ ಈ ಬಾರಿ ಕೈ ಹಿಡಿದಿದೆ. ಹಿಂದೆಂದೂ ದೊರಕದಷ್ಟು ದಾಖಲೆಯ ಬೆಲೆ ಬಂದಿರುವದು ಸಂತಸ ತಂದಿದೆ. –ಗುರು ಉಳ್ಳಾಗಡ್ಡಿ, ಜಗದಾಳ ರೈತ.

ಬಾಳೆ ಹಣ್ಣಿನ ಬೆಲೆ ಒಂದೆರಡು ತಿಂಗಳಲ್ಲಿ ದುಪ್ಪಟ್ಟಾಗಿದೆ. ಬೇಡಿಕೆಗೆ ತಕ್ಕಂತೆ ಬಾಳೆಹಣ್ಣು ಸಿಗುತ್ತಿಲ್ಲ. ಹೀಗಾಗಿ ಗ್ರಾಹಕರಿಗೆ ಉತ್ತರಿಸುವದೂ ಕಷ್ಟವಾಗಿದೆ. –ಬಸವರಾಜ ಬೆಳಗಲಿ, ಬಾಳೆ ವ್ಯಾಪಾರಿ, ಬನಹಟ್ಟಿ.

-ಕಿರಣ್‌ ಎಸ್. ಅಳಗಿ 

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.