ಬ್ಯಾಂಕ್ ನೌಕರರ ಮುಷ್ಕರ; ಗ್ರಾಹಕ ಕಂಗಾಲು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Mar 29, 2022, 12:34 PM IST
ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖೀಲ ಭಾರತ ಬ್ಯಾಂಕ್ ನೌಕರರು ಎರಡು ದಿನಗಳ ಮುಷ್ಕರ ನಡೆಸುತ್ತಿದ್ದು, ಗ್ರಾಹಕರು ಪರದಾಡುವಂತಾಯಿತು.
ಕಳೆದ ನಾಲ್ಕು ದಿನಗಳಿಂದ ಬ್ಯಾಂಕ್ಗಳ ಕಾರ್ಯ ಚಟುವಟಿಕೆ ಸ್ಥಗಿತಗೊಂಡಿವೆ. ಕೊನೆಯ ಶನಿವಾರ, ರವಿವಾರ ರಜೆ ಇದ್ದವು. ಅಲ್ಲದೇ ಸೋಮವಾರ ಮತ್ತು ಮಂಗಳವಾರ ಎರಡು ದಿನ ನೌಕರರು ಮುಷ್ಕರಕ್ಕೆ ಕಡೆ ನೀಡಿದ್ದಾರೆ.
ನೌಕರರ ಮುಷ್ಕರದ ಕುರಿತು ಗೊತ್ತಿಲ್ಲದೇ ಗ್ರಾಹಕರು ಬ್ಯಾಂಕ್ನತ್ತ ಆಗಮಿಸಿ, ನಿರಾಸೆಯಿಂದ ಮರಳಿದರು. ಮುಖ್ಯವಾಗಿ ಕೇಂದ್ರೀಯ ವಿದ್ಯಾಲಯ ಸಹಿತ ವಿವಿಧ ಶಾಲೆಗಳ ಮಕ್ಕಳ ಶಾಲಾ ಶುಲ್ಕ ಪಾವತಿ, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿದ್ದು, ಮಾರ್ಚ್ ಕೊನೆ ಆಗಿದ್ದರಿಂದ ಆನ್ಲೈನ್ ವ್ಯವಸ್ಥೆ ಕೂಡ ಸ್ಥಗಿತಗೊಂಡಿದೆ. ಹೀಗಾಗಿ ಹಲವಾರು ಪಾಲಕರು, ವಿದ್ಯಾಗಿರಿಯ ಯೂನಿಯನ್ ಬ್ಯಾಂಕ್ ಶಾಖೆಗೆ ಆಗಮಿಸಿ, ಶುಲ್ಕ ಪಾವತಿಸಲಾಗದೇ ಮರಳಿದರು.
ಬೇಡಿಕೆ ಈಡೇರಿಕೆಗೆ ಒತ್ತಾಯ: ಕರ್ನಾಟಕ ಪ್ರದೇಶ ಬ್ಯಾಂಕ್ ನೌಕರರ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಆನಂದ ಕುಲಕರ್ಣಿ ನೇತೃತ್ವದಲ್ಲಿ ವಿದ್ಯಾಗಿರಿಯ ಬ್ಯಾಂಕ್ ಆಫ್ ಬರೋಡಾ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
ಸಾರ್ವಜನಿಕರಿಗೆ ಆರ್ಥಿಕ ಸಹಕಾರ ನೀಡುವ ಬ್ಯಾಂಕ್ ಬಲಪಡಿಸಬೇಕು, ಖಾಸಗೀಕರಣ ನಿಲ್ಲಿಸಬೇಕು. ಕಟಬಾಕಿ ಸಾಲ ವಸೂಲಿಗೆ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕು. ಬ್ಯಾಂಕ್ನ ಠೇವಣಿ ಮೇಲಿನ ಬಡ್ಡಿ ದರ ಹೆಚ್ಚಿಸಬೇಕು. ಹೆಚ್ಚಿನ ಸೇವಾ ಶುಲ್ಕಗಳನ್ನು ಕಡಿಮೆ ಮಾಡಿ, ಗ್ರಾಹಕರಿಗೆ ಹೊರೆಯಾಗದಂತೆ ನಿಯಮ ರೂಪಿಸಬೇಕು. ಎನ್ಪಿಎಸ್ ರದ್ದುಪಡಿಸಿ, ಡಿಎ ಲಿಂಕ್ಡ್ ಪಿಂಚಣಿ ಯೋಜನೆ ಪುನಃ ಆರಂಭಿಸಬೇಕು. ಹೊರ ಗುತ್ತಿಗೆ ನಿಲ್ಲಿಸಿ, ನೇಮಕಾತಿಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಸಂಗಮ್, ಪ್ರಮುಖರಾದ ಮಂಜುನಾಥ ಬಿರಾದಾರ, ಶಿವಶಂಕರ ಮುದಗಲ್, ಅಂಜನ ಝಳಕಿ, ಶ್ರೀಮಂತ ನೀರಗುದಿ, ಶರಣು ಅಂಟಿನ್, ರಾಘವೇಂದ್ರ ಧಾಮಜಿ, ಸುಮಿತ ಜೂಜಿನ, ಹರ್ಷವರ್ಧನ ಹಣಮಂತ ಕದಾಂಪುರ, ಪ್ರವೀಣ ಕುದರಿ ಸೇರಿದಂತೆ ನೂರಾರು ಜನ ಬ್ಯಾಂಕ್ನ ನೌಕರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ