ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ‘ಬಾರ್’ ಸೀಜ್
Team Udayavani, Apr 21, 2021, 6:54 PM IST
ಜಮಖಂಡಿ: ತಾಲೂಕಿನಲ್ಲಿ ಕೋವಿಡ್ 2ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬಾರ್ಮತ್ತು ರೆಸ್ಟೊರೆಂಟ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು, ಮಾಸ್ಕ್ ಧರಿಸದೇ ವ್ಯವಹಾರ ನಡೆಸುತ್ತಿರುವುದನ್ನು ಗಮನಿಸಿದ ಉಪವಿಭಾಗಾಧಿಕಾರಿ ಡಾ|ಸಿದ್ದು ಹುಲ್ಲೊಳ್ಳಿ ನಗರದ ಬಾರ್ ಮತ್ತು ರೆಸ್ಟೊರೆಂಟ್ ಒಂದಕ್ಕೆ ಬೀಗ ಜಡಿದರು.
ತಾಲೂಕಿನಲ್ಲಿ ಬಹುತೇಕ ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಸರ್ಕಾರದ ಕೊರೊನಾ ಮಾರ್ಗಸೂಚಿ ಪಾಲಿಸದೇ ಬೇಕಾಬಿಟ್ಟಿ ವ್ಯವಹಾರ ನಡೆಸುತ್ತಿದ್ದರು. ಗ್ರಾಹಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬಾರ್ ಗಳಲ್ಲಿ ವಿಪರೀತ ಜನಸಂದಣಿ ಸೇರಿಸುವುದನ್ನು ಮಾಹಿತಿ ಸಂಗ್ರಹಿಸಿದ ಗಮನಿಸಿದ ಎಸಿ ಡಾ| ಸಿದ್ದು ಹುಲ್ಲೋಳ್ಳಿ ಹಠಾತ್ ದಾಳಿ ನಡೆಸಿ ಅಲ್ಲಿರುವ ಜನಜಂಗುಳಿಯನ್ನು ವೀಕ್ಷಿಸಿ ದಂಗಾದರು.
ಕೂಡಲೇ ಗ್ರಾಹಕರನ್ನು ಹೊರಹಾಕುವಂತೆ ಸೂಚಿಸಿದರು. ಅಬಕಾರಿ ಅಧಿಕಾರಿ ಸಂಗಮೇಶ ಮುರನಾಳ ಭೇಟಿ ನೀಡಿ, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಬಾರ್, ಮದ್ಯದ ಅಂಗಡಿಗಳ ಮೇಲೆ ನಿಗಾವಹಿಸುವಂತೆ ಆದೇಶಿಸಿದರು. ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಸರಕಾರಿ ಇಲಾಖೆಗಳ ಅಧಿಕಾರಿಗಳೇ ನಿಷ್ಕಾಳಜಿ ತೋರಬಾರದು ಎಂದು ಸೂಚಿಸಿದರು.
ವೃತ್ತ ನಿರೀಕ್ಷಕ ಈರಯ್ನಾ ಮಠಪತಿ, ಪಿಎಸ್ಐ ಶಶಿಕುಮಾರ ಕುರಳೆ, ಅಬಕಾರಿ ಅಧಿಕಾರಿ ಸಂಗಮೇಶ ಮುರನಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್