ಬಸವ ಬ್ಯಾಂಕ್‌ ಗ್ರಾಹಕರ ಜೀವನಾಡಿ: ಚರಂತಿಮಠ


Team Udayavani, May 26, 2019, 10:39 AM IST

bk-tdy-3..

ಬಾಗಲಕೋಟೆ: ಬಸವೇಶ್ವರ ಬ್ಯಾಂಕ್‌ನ ಅಡತ ಬಜಾರ್‌ ಶಾಖೆಯ ನವೀಕೃತ ಕಟ್ಟಡವನ್ನು ಶಾಸಕ ಡಾ| ವೀರಣ್ಣ ಚರಂತಿಮಠ ಉದ್ಘಾಟಿಸಿದರು.

ಬಾಗಲಕೋಟೆ: ಶತಮಾನ ಪೂರೈಸಿರುವ ಬಸವೇಶ್ವರ ಸಹಕಾರಿ ಬ್ಯಾಂಕ್‌ ಗ್ರಾಹಕರ ಜೀವನಾಡಿಯಾಗಿ ಅತ್ಯುತ್ತಮ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ| ವೀರಣ್ಣ ಚರಂತಿಮಠ ಹೇಳಿದರು.

ನಗರದ ಬಸವೇಶ್ವರ ಸಹಕಾರಿ ಬ್ಯಾಂಕ್‌ನ ಅಡತ ಬಜಾರ್‌ ಶಾಖೆಯ ನವೀಕೃತ ಕಟ್ಟಡ ಹಾಗೂ ನೂತನ ಎಟಿಎಂ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶತಮಾನದ ಇತಿಹಾಸ ಹೊಂದಿರುವ ಈ ಬ್ಯಾಂಕ್‌ ಗ್ರಾಹಕರ ವಿಶ್ವಾಸ ಉಳಿಸಿಕೊಂಡು, ಉತ್ತಮವಾಗಿ ಕೆಲಸ ಮಾಡುತ್ತಿದೆ. 100 ವರ್ಷಗಳ ಹಿಂದೆ ಅಡತ ಬಜಾರ್‌ ಶಾಖೆಯಲ್ಲಿ ಬಸವೇಶ್ವರ ಬ್ಯಾಂಕ್‌ ಸಣ್ಣಪುಟ್ಟ ವಹಿವಾಟಿನೊಂದಿಗೆ ಆರಂಭಗೊಂಡು ಇಂದು ದೊಡ್ಡಮಟ್ಟದಲ್ಲಿ ಬೆಳೆದು ನಿಂತಿದೆ. ಗ್ರಾಹಕರು, ವರ್ತಕರ ಬಹು ದಿನಗಳ ಬೇಡಿಕೆಯಂತೆ ಎಟಿಎಂಗೆ ಚಾಲನೆ ನೀಡಿದ್ದು, ಶಾಖೆಯ ಹಳೇ ಕಟ್ಟಡಕ್ಕೆ ಹೊಸ ರೂಪ ನೀಡಿರುವುದು ಉತ್ತಮ ಕೆಲಸ ಎಂದರು.

ಚರಂತಿಮಠದ ಶ್ರೀ ಪ್ರಭು ಸ್ವಾಮೀಜಿ ಮಾತನಾಡಿ, ಬಸವೇಶ್ವರ ಬ್ಯಾಂಕ್‌ ನಗರ ಹಾಗೂ ಜಿಲ್ಲೆಯ ಜನ ಸಾಮಾನ್ಯರ ಆರ್ಥಿಕ ಬಲವರ್ಧನೆಗೆ ಶ್ರಮಿಸುತ್ತಿದೆ. ಇಂದಿನ ವೈಜ್ಞಾನಿಕ ಕಾಲಕ್ಕೆ ತಕ್ಕಂತೆ ಗ್ರಾಹಕರಿಗೆ ಅನುಕೂಲವಾಗುವ ಸೇವೆ ಒದಗಿಸಿ, ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬ್ಯಾಂಕ್‌ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತನ್ನ ಸೇವೆ ವಿಸ್ತರಿಸಿಕೊಳ್ಳಲಿ ಎಂದರು.

ಬಸವೇಶ್ವರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಮಾತನಾಡಿ, ಈ ಅಡತ ಬಜಾರ್‌ ಶಾಖೆಯಿಂದ ಶತಮಾನದ ಹಿಂದೆ ಬಸವೇಶ್ವರ ಬ್ಯಾಂಕ್‌ ವಹಿವಾಟು ಆರಂಭಿಸಿತ್ತು. ಇದೀಗ ಶತಮಾನದ ಕಟ್ಟಡವನ್ನು ನವೀಕರಣಗೊಳಿಸಲಾಗಿದೆ. ವರ್ತಕರು, ಗ್ರಾಹಕರ ಆಸೆಯಂತೆ ಎಟಿಎಂ ಸೇವೆ ಒದಗಿಸಲಾಗಿದೆ. ಗ್ರಾಹಕರ ಬೇಡಿಕೆಗೆ ತಕ್ಕಂತೆ ಎಲ್ಲ ರೀತಿಯ ಸೇವೆ ನೀಡುತ್ತಿದೆ. ಜನ, ಸಾಮಾನ್ಯರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಕೊಡುಗೆ ನೀಡುವಲ್ಲಿ ಬ್ಯಾಂಕ್‌ ಶ್ರಮಿಸುತ್ತಿದೆ ಎಂದು ಹೇಳಿದರು.

ಬ್ಯಾಂಕಿನ ಉಪಾಧ್ಯಕ್ಷ ಎಂ.ಜಿ. ವಾಲಿ, ಜಿಪಂ ಸದಸ್ಯ ಹಾಗೂ ಬ್ಯಾಂಕ್‌ನ ನಿರ್ದೇಶಕ ಹೂವಪ್ಪ ರಾಠೊಡ, ನಿರ್ದೇಶಕರಾದ ಎಸ್‌.ಸಿ. ಆರಬ್ಬಿ, ಮನೋಹರ ಏಳಮ್ಮಿ, ರವಿ ಪಟ್ಟಣದ, ವೀರಪ್ಪ ಶಿರಗಣ್ಣವರ, ಮುತ್ತು ಜೋಳದ, ರಂಗನಗೌಡ ದಂಡನ್ನವರ, ಶ್ರೀನಿವಾಸ ಬಳ್ಳಾರಿ, ಸುನೀತಾ ಮುಳಗುಂದ, ಪ್ರಧಾನ ವ್ಯವಸ್ಥಾಪಕ ಬಿ.ಪಿ. ಬಣಗಾರ, ಶಾಖಾ ವ್ಯವಸ್ಥಾಪಕಿ ರಾಜೇಶ್ವರಿ ಶೆಟ್ಟರ, ಬ್ಯಾಂಕ್‌ನ ಅಧಿಕಾರಿ ಪಿ.ಎನ್‌.ಹಳ್ಳಿಕೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.