ಭರವಸೆ ಈಡೇರಿಸದಿದ್ರೆ ಮತ್ತೆ ಹಕ್ಕೊತ್ತಾಯ  : ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ


Team Udayavani, Apr 19, 2021, 8:26 PM IST

ljlhj

ಕೂಡಲಸಂಗಮ: ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಚಳವಳಿ ನಿಂತಿಲ್ಲ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೊಟ್ಟ ಭರವಸೆ ಈಡೇರಿಸದಿದ್ದರೆ ಅಕ್ಟೋಬರ್‌ 15 ರಂದು ಬೆಂಗಳೂರಿನಲ್ಲಿ ಮತ್ತೆ 20 ಲಕ್ಷ ಪಂಚಮಸಾಲಿಗಳನ್ನು ಸೇರಿಸಿ ಹಕ್ಕೊತ್ತಾಯ ಮಾಡಬೇಕಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ನಡೆದ ಶರಣು ಶರಣಾರ್ಥಿ ಸಮಾರೋಪ ಸಮಾರಂಭ ಹಾಗೂ ಸಂಕಲ್ಪ ದಿನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಓರ್ವ ರಾಜಕಾರಣಿ ಪ್ರತಿಷ್ಠೆ, ಅಹಂಕಾರ, ಹಣದ ಶ್ರೀಮಂತಿಕೆಯಿಂದ ಶ್ರೀ ಪೀಠದ ಪ್ರತಿಷ್ಠೆ ಕೆಡಿಸುವ, ಸ್ವಾಭಿಮಾನ ಕೆಣಕುವ ಕೆಲಸ ಮಾಡಿದ. ಭಕ್ತರು ಆಡಂಬರ, ಹಣಕ್ಕೆ ಬೆಲೆ ಕೊಡದೆ ಆದರ್ಶ, ಪ್ರಾಮಾಣಿಕತೆಗೆ ಬೆಲೆ ಕೊಟ್ಟು ಪಾದಯಾತ್ರೆಗೆ ಸಹಕರಿಸಿದರು.

12 ವರ್ಷ ಮಠ ಕಟ್ಟದೇ ಸಮಾಜ ಕಟ್ಟಿದ್ದು ಸಾರ್ಥಕವಾಯಿತು ಎಂದರು. ಅಕ್ಟೋಬರ್‌ 15ರವರೆಗೆ 12 ಜಿಲ್ಲೆಯ 10 ಸಾವಿರ ಪಂಚಾಯಿತಿ ಮಟ್ಟದಲ್ಲಿ ಸಮಾಜ ಸಂಘಟಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ ಎಂದರು. ಹಣ, ಅ ಧಿಕಾರ ಬಲ ಹೊಂದಿದ ರಾಜಕೀಯ ಓರ್ವ ಮುಖಂಡ ಕೊರೊನಾ ನೆಪದಲ್ಲಿ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದ ಶರಣು ಶರಣಾರ್ಥಿ ಕಾರ್ಯಕ್ರಮ ತಡೆಯುವ ಕಾರ್ಯ ಮಾಡಿದರೂ ಜನರು ಯಶಸ್ವಿಯಾಗಿ ಮಾಡಿದರು. ಕೊರೊನಾ ಇಳಿಮುಖಗೊಂಡ ನಂತರ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ಶ್ರೀಗಳ ಮನ ನೋಯಿಸಿದ ಮುರುಗೇಶ ನಿರಾಣಿ ಪೀಠದ ಶಾಪಕ್ಕೆ ಗುರಿಯಾಗುತ್ತಾರೆ. ಮಾತೆತ್ತಿದ್ದರೆ ಮಠಕ್ಕೆ ಜಾಗ ಕೊಡಿಸಿದ್ದೇನೆಂದು ಹೇಳುವ ನಿರಾಣಿಗೆ ಕೆಲವೇ ದಿನಗಳಲ್ಲಿ ಭಕ್ತರಿಂದ ಹಣ ಸಂಗ್ರಹಿಸಿ ಮಠದ ಜಾಗಕ್ಕೆ ನೀಡಿದ ಹಣವನ್ನು ಅವನ ಮನೆಗೆ ಕೊಟ್ಟು ಬರುವ ಕೆಲಸ ಮಾಡುತ್ತೇವೆ. ಆರಂಭದಿಂದಲೂ ಸಮಾಜದ ಹೆಸರಿನಲ್ಲಿ ಅ ಧಿಕಾರ, ಸಚಿವ ಸ್ಥಾನ ಪಡೆದ ನಿರಾಣಿ ಕುಟುಂಬದವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹನಮಂತ ನಿರಾಣಿ ಸಮಾಜದ ಕಾರ್ಯಕ್ರಮಕ್ಕೆ ಹೋಗದಂತೆ ತಡೆಯುವ ಕೆಲಸ ಮಾಡಿದ್ದಾನೆ. ವಿಜಯ ಮಲ್ಯಗೆ ಬಂದ ಸ್ಥಿತಿ ನಿರಾಣಿಗೂ ಬರುತ್ತದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ನೀಡಿದ ರೈತರಿಗೆ ಹಣ ಪಾವತಿಸದೇ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾನೆಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ, ಮುಖಂಡರಾದ ದೇವೆಂದ್ರಪ್ಪ ಬಳೂಟಗಿ, ಎಂ.ಎಸ್‌.ಮುದ್ದನಗೌಡ, ಸಂಗಪ್ಪಣ್ಣ ಪಿರೋಜ, ದಾವಣಗೆರೆಯ ಬಿ.ಜಿ.ಅಜಯಕುಮಾರ, ಗದಗ ಚನಬಸಪ್ಪ ಕಂಠಿ, ಬಿ.ಎಸ್‌.ಪಾಟೀಲ, ಅಮರೇಶ ನಾಗೂರ ಮುಂತಾದವರು ಇದ್ದರು.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.