ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

ವಚನವನ್ನು ಜೀವನದಲ್ಲಿ ಅಳವಡಿಸಕೊಂಡಲ್ಲಿ ಅಪರಾಧಗಳು ಈ ಜಗತ್ತಿನಲ್ಲಿ ನಡೆಯಲು ಸಾಧ್ಯವಿಲ್ಲ

Team Udayavani, Nov 29, 2021, 5:51 PM IST

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

ಲೋಕಾಪುರ: ಒಂದು ಸಾವಿರ ವರ್ಷದ ಹಿಂದೆಯೇ ರಾಜ ಮಹಾರಾಜರು ಆಳುವ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಧರ್ಮವನ್ನು ಮೊಟ್ಟ ಮೊದಲು ತಂದವರು ಬಸವಣ್ಣನವರು ಎಂದು ಮುಂಡರಗಿಯ ಶ್ರೀ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಗುರುಬಸವ ಸತ್ಸಂಗ ಸಮಿತಿ ಸಹಯೋಗದಲ್ಲಿ ಚೆನ್ನಬಸವಣ್ಣನವರ ಜಯಂತಿ ಹಾಗೂ ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಚನ ಎಂದರೆ ಪ್ರಜಾಪ್ರಭುತ್ವದ ಧರ್ಮ ಗ್ರಂಥ, ವಚನ ಸಾಹಿತ್ಯ ವಿಶ್ವ ಶ್ರೇಷ್ಠ ಪ್ರಜಾಪ್ರಭುತ್ವ ಮೌಲ್ಯಗಳನ್ನು ಸಾರುವ ವಿಶ್ವ ಸಂವಿಧಾನವಾಗಿದೆ. ವಚನಗಳಲ್ಲಿರುವ ಅಂಶಗಳು ಸಂವಿಧಾನದ ಚೌಕಟ್ಟಿನಲ್ಲಿ ಕಾಣುತ್ತೇವೆ.

ಪ್ರಪಂಚಕ್ಕೆ ಸಮಾನತೆ ಸಂದೇಶ ಸಾರುವ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊಟ್ಟ ಮೊದಲು ಬಾರಿ ಜಾಗತಿಕ ಪ್ರಪಂಚಕ್ಕೆ ಕೊಟ್ಟವರು. ಅದನ್ನು ಜಾರಿಗೆ ತಂದವರು ಬಸವಣ್ಣನವರು ಎಂದರು. ಅಸಮಾನತೆ ತೊಡೆದು ಹಾಕಿ ಸಮಸಮಾಜ ನಿರ್ಮಾಣ ಮಾಡುವ ಸಲುವಾಗಿ ಬಸವಣ್ಣನವರು ಕ್ರಾಂತಿಯನ್ನೇ ಮಾಡಿದರು, ಜಾತಿ, ಲಿಂಗ ಹಾಗೂ ಮೇಲು ಕೀಲು ಎಂಬ ಭಾವನೆಗಳನ್ನು ದೂರ ಮಾಡಿ ಎಲ್ಲರೂ ಒಂದೇ ಎಂಬ ಭಾವದಿಂದ ಬದುಕುವುದನ್ನು ಕಲಿಸಿಕೊಟ್ಟವರು ಬಸವಣ್ಣನವರು ಎಂದರು.

ರಾಜಕಾರಣಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಬಸವಣ್ಣನವರ ವಚನವಾದ ಕಳಬೇಡ, ಕೊಲಬೇಡ ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ ಇದೇ ನಮ್ಮ ಕೂಡಲಸಂಗಮ ದೇವರ ನೆಲೆಸುವ ಪರಿ ಎಂಬ ವಚನವನ್ನುಹೇಳುವಂತಾಗಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಇಳಕಲ್ಲದ ಶ್ರೀ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಬಸವಣ್ಣ ಸರ್ವ ಸಮಾನತೆಯ ಧರ್ಮವನ್ನು ಸ್ಥಾಪಿಸುವ ಜತೆಗೆ ಧರ್ಮ ಸ್ವೀಕಾರ ಮಾಡುವ ಪ್ರತಿಯೊಬ್ಬರಿಗೂ ಇಷ್ಟಲಿಂಗ ದೀಕ್ಷೆಯನ್ನು ನೀಡುವ ಕಾರ್ಯ ಬಸವಣ್ಣನವರು ಮಾಡಿದರು ಎಂದು ಹೇಳಿದರು.

ಹಾರೂಗೇರಿಯ ಶರಣ ವಿಚಾರ ವಾಹಿನಿಯ ಅಧ್ಯಕ್ಷ ಆಯ್‌.ಆರ್‌.ಮಠಪತಿ ಮಾತನಾಡಿ, ಅನುಭವ ಮಂಟಪದ ಮೂಲಕ ಇಡೀ ಮನುಕುಲದ ಉದ್ಧಾರಕ್ಕಾಗಿ ಸರ್ವರ ಕಲ್ಯಾಣಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತಂದ ಕೀರ್ತಿ ಮತ್ತು ಶ್ರೇಯಸ್ಸು ಬಸವಣ್ಣನವರ ಆದಿಯಾಗಿ ಇಡೀ ಶರಣ ಸಂಕುಲಕ್ಕೆ ಸಲ್ಲುತ್ತದೆ. ಜತೆಗೆ ಸಕಲ ಜೀವಾತ್ಮರೆಲ್ಲರಿಗೂ ಲೇಸು ಬಯಸಿದ ಜಗತ್ತಿನ ಮೊಟ್ಟ ಮೊದಲ ಸಮತವಾದಿ ಬಸವಣ್ಣನವರು ಎಂದರು.

ಶಿರೂರದ ವಿಜಯ ಮಹಾಂತೇಶ್ವರ ನಿಸರ್ಗಧಾಮದ ಡಾ| ಬಸವಲಿಂಗ ಸ್ವಾಮೀಜಿ ಮಾತನಾಡಿ ,ವಚನಗಳು ನಮ್ಮ ಬದುಕಿಗೆ ದಾರಿದೀಪವಾಗಿವೆ. ಸಪ್ತಶೀಲದ ವಚನವನ್ನು ಜೀವನದಲ್ಲಿ ಅಳವಡಿಸಕೊಂಡಲ್ಲಿ ಅಪರಾಧಗಳು ಈ ಜಗತ್ತಿನಲ್ಲಿ ನಡೆಯಲು ಸಾಧ್ಯವಿಲ್ಲ. ಈ ವಚನದ ಆಶಯವನ್ನೇ ನಮ್ಮ ಸಂವಿಧಾನ ತಿಳಿಸುತ್ತದೆ ಎಂದರು.

ಬಸವೇಶ್ವರ ವೃತ್ತದಲ್ಲಿ ವಚನ ಗ್ರಂಥಗಳ ಮೆರವಣಿಗೆಗೆ ಅಕ್ಕ ಅನ್ನಪೂರ್ಣ ತಾಯಿಯವರು ಚಾಲನೆ ನೀಡಿದರು. ಸದಲಗಾ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ವೀರೇಶ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ವಚನ ವಿಜಯೋತ್ಸವದಲ್ಲಿ ಸಾವಿರಾರು ಶರಣಭಕ್ತರು ಮೆರವಣಿಗೆಯಲ್ಲಿ ಬಸವಣ್ಣನವರ ವಚನ ಗ್ರಂಥವನ್ನು ತಲೆಯ ಮೇಲೆ ಹೊತ್ತು ಸಾಗಿದರು. ಹೂವಿನಿಂದ ಅಲಂಕರಿಸಿದ ರಥದಲ್ಲಿ ಬಸಣ್ಣನವರ ವಚನ ಗ್ರಂಥ ಮೆರವಣಿಗೆ
ಮಾಡಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಎಪಿಎಂಸಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ವಚನ ವಿಜಯೋತ್ಸವದಲ್ಲಿ ಹಲವು ಕಲಾ ತಂಡಗಳು ನೃತ್ಯ ಪ್ರದರ್ಶನ ಮಾಡುವ ಮೂಲಕ ಜನರ ಗಮನ ಸಳೆಯಿತು.

ಲೋಕಣ್ಣ ಉದಪುಡಿ, ಎಸ್‌.ಎನ್‌.ಹಿರೇಮಠ, ಎಂ.ಎಂ.ವಿರಕ್ತಮಠ, ವ್ಹಿ.ಎಂ.ತೆಗ್ಗಿ, ಕೆ.ಆರ್‌ .ಬೋಳಿಶೆಟ್ಟಿ, ಶಿವಾನಂದ ಉದಪುಡಿ, ರವಿ ಬೋಳಿಶೆಟ್ಟಿ, ಮಲ್ಲಪ್ಪ ಅಂಗಡಿ, ಷಣ್ಮೂಕಪ್ಪ ಕೋಲ್ಹಾರ, ಪ್ರಕಾಶ ಚುಳಕಿ, ಸದಾಶಿವ ಉದಪುಡಿ, ಅಣ್ಣಪ್ಪ ಪಡಸಲಗಿ, ಅಪ್ಪಣಗೌಡ ಕೊಳಚಿ, ಹಣಮಂತ ಬುದ್ನಿ, ಮುತ್ತಪ್ಪ ಗಡದವರ, ಬಸವರಾಜ ಉದಪುಡಿ, ನಿಂಗಪ್ಪ ದಾದನಟ್ಟಿ, ಶ್ರೀಕಾಂತ ನರಗಟ್ಟಿ, ಲಕ್ಷ್ಮಣ ಮುದ್ದಾಪುರ, ಲೋಕಣ್ಣ ಹುಲಸದ, ರವಿ ಉಪ್ಪಾರ ಸಂಗಪ್ಪ ಪರಣ್ಣವರ, ಭೀಮಶೆಪ್ಪ ತೆಗ್ಗಿ, ಲೋಕಣ್ಣ ಸಕ್ರಿ, ಲೋಕಣ್ಣ ಮುದ್ದಾಪುರ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.