ಜರ್ಮನಿಯಲ್ಲಿ  ಬಾಗಲಕೋಟೆ ವಿದ್ಯಾರ್ಥಿ ಕಾಣೆ; ಚಪ್ಪಲಿ, ಸೈಕಲ್ ಪತ್ತೆ


Team Udayavani, Jun 22, 2017, 1:10 PM IST

Bagalakot.jpg

ಬಾಗಲಕೋಟೆ: ಸರ್ಕಾರದ ಪ್ರೋತ್ಸಾಹಧನ ಯೋಜನೆಯಡಿ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಐದು ದಿನಗಳಿಂದ ಕಾಣೆಯಾಗಿದ್ದಾನೆ. ನಗರ ಸಮೀಪದ ಸೀಮಿಕೇರಿ ಗ್ರಾಮದ ಮಂಜುನಾಥ ಸಿದ್ದಣ್ಣ ಚೂರಿ (28) ಜರ್ಮನಿಯಲ್ಲಿ ಎಂಎಸ್‌ ವ್ಯಾಸಂಗ ಮಾಡುತ್ತಿದ್ದ. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹಧನ ಯೋಜನೆಯಡಿ ಹ್ಯಾಂಬರ್ಗ್‌ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಮಾಸ್ಟರ್‌ ಆಫ್‌ ಸೈನ್ಸ್‌ ವಿಭಾಗದಲ್ಲಿ 4ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ.

ಗೊತ್ತಾಗಿದ್ದು ಯಾವಾಗ?: ಒಂದೂವರೆ ವರ್ಷದ ಹಿಂದೆ ಜರ್ಮನಿಗೆ ಹೋಗಿದ್ದ ಮಂಜುನಾಥ, ಏಳು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಸಿದ್ದಣ್ಣ ಚೂರಿ ಅವರನ್ನು ಕಳೆದುಕೊಂಡಿದ್ದ. ತಂದೆ ತೀರಿಕೊಂಡಿದ್ದಾಗ ಬಾಗಲಕೋಟೆಗೆ
ಬಂದಿದ್ದ ಆತ, ತಿಂಗಳ ಬಳಿಕ ಮರಳಿ ಹೋಗಿದ್ದ. ಬೀಳಗಿ ಪಟ್ಟಣದ ಗಾಂಧಿನಗರದಲ್ಲಿ ವಾಸವಾಗಿದ್ದ ಚೂರಿ ಕುಟುಂಬ, ತಂದೆಯ ನಿಧನದ ಬಳಿಕ ಸೀಮಿಕೇರಿ ಬಳಿ ಇರುವ ಸೋದರಮಾವನ (ತಾಯಿಯ ತಮ್ಮ) ಮನೆಯ ಪಕ್ಕದಲ್ಲೇ
ಬಾಡಿಗೆ ಮನೆ ಮಾಡಿ, ತಾಯಿಯನ್ನು ಬಿಟ್ಟು ಹೋಗಿದ್ದ. ಪ್ರತಿದಿನ ಬೆಳಗ್ಗೆ ಮತ್ತು ರಾತ್ರಿ ತಾಯಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದ. ಆದರೆ, ರವಿವಾರ ಆತನಿಂದ ಫೋನ್‌ ಬಂದಿರಲಿಲ್ಲ. 

ಓದು ಹೆಚ್ಚಿಗೆ ಇರಬೇಕು. ಅದಕ್ಕಾಗಿ ಫೋನ್‌ ಮಾಡಿರಲಿಕ್ಕಿಲ್ಲ ಎಂದು ಭಾವಿಸಿ ತಾಯಿ ಮಹಾನಂದಾ ಸುಮ್ಮನಾಗಿದ್ದರು. ಸೋಮವಾರವೂ ಫೋನ್‌ ಬಂದಿರಲಿಲ್ಲ. ಆದರೆ, ಮಂಗಳವಾರ ಜರ್ಮನಿಯಲ್ಲಿ ಮಂಜುನಾಥ ಚೂರಿ ಜತೆಗೆ
ವ್ಯಾಸಂಗ ಮಾಡುತ್ತಿರುವ ಅನಿಲ ದೇಶಪಾಂಡೆ ಎಂಬಾತ ಅಲ್ಲಿನ ಪೊಲೀಸರಿಗೆ ದೂರು ನೀಡಿದ್ದಾನೆ. ಆ ಬಳಿಕ ಅಲ್ಲಿನ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹಾಗೂ ಪೊಲೀಸರು ಅನಿಲ್‌ ಮೂಲಕ ಮನೆಗೆ ಫೋನ್‌ ಮಾಡಿಸಿ, ನಿಮ್ಮ ಪುತ್ರ ಕಾಣುತ್ತಿಲ್ಲ. ಮೂರು ದಿನಗಳಿಂದ  ಕಾಣೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಆತಂಕದಲ್ಲಿ ಕುಟುಂಬ: ಮಂಜುನಾಥನಿಗೆ ತಾಯಿ ಮಹಾನಂದ ಚೂರಿ, ಹಿರಿಯ ಸಹೋದರಿ ಕವಿತಾ, ಕಿರಿಯ ಸಹೋದರಿ ವಿಜಯಲಕ್ಷ್ಮೀ ಇದ್ದಾರೆ. ಕವಿತಾಳನ್ನು ಮಹಾಲಿಂಗಪುರ ಮತ್ತು ವಿಜಯಲಕ್ಷ್ಮಿಯನ್ನು  
ಬಸವನಬಾಗೇವಾಡಿಯ ಮನಗೂಳಿಗೆ ಮದುವೆ ಮಾಡಿಕೊಡಲಾಗಿದೆ. ಸದ್ಯ ತಾಯಿ ಒಬ್ಬರೇ ಸೀಮಿಕೇರಿಯಲ್ಲಿದ್ದು, ಮಂಜುನಾಥ ಕಾಣೆಯಾದ ವಿಷಯ ತಿಳಿದು ಇಬ್ಬರೂ ಸಹೋದರಿಯರು, ಮಾವಂದಿರು ಬಂದಿದ್ದಾರೆ. ಇಡೀ ಕುಟುಂಬ, ಮಂಜುನಾಥನ ಸೋದರ ಮಾವ ಮಲ್ಲಿಕಾರ್ಜುನ ಡೋಮನಾಳ ಅವರ ಮನೆಯಲ್ಲಿದ್ದು, ತೀವ್ರ ದುಃ ಖದಲ್ಲಿದ್ದಾರೆ.

ಸುಷ್ಮಾ ಸ್ವರಾಜ್‌- ಮೋದಿಗೆ ಟ್ವೀಟ್‌:
ಮಂಜುನಾಥ ಚೂರಿ ಕಾಣೆಯಾದ ಕುರಿತು ಬಾಗಲಕೋಟೆಯ ಎಸ್ಪಿ, ಸಂಸದ ಗದ್ದಿಗೌಡರ ಅವರಿಗೆ ಕುಟುಂಬದವರು ತಿಳಿಸಿದ್ದಾರೆ. ಟ್ವೀಟ್‌ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಪ್ರಧಾನಿ ಮೋದಿ ಅವರ ಗಮನಕ್ಕೆ ತಂದಿದ್ದಾರೆ.
ಬಾಗಲಕೋಟೆಯ ಎಸ್ಪಿ ಸಿ.ಬಿ. ರಿಷ್ಯಂತ ಅವರ ಸಹಪಾಠಿಯೊಬ್ಬರು ಜರ್ಮನಿಯಲ್ಲಿ ಅಧಿಕಾರಿಯಾಗಿದ್ದು, ಅವರ ಮೂಲಕ ಮಂಜುನಾಥನ ಪತ್ತೆಗೆ ಪ್ರಯತ್ನಿಸಿದ್ದಾರೆ.

ವಿದ್ಯಾರ್ಥಿಯ ಚಪ್ಪಲಿ, ಸೈಕಲ್, ಪತ್ರ ಪತ್ತೆ:
ಜರ್ಮನಿಯಲ್ಲಿ ನಾಪತ್ತೆಯಾಗಿದ್ದ ಬಾಗಲಕೋಟೆ ವಿದ್ಯಾರ್ಥಿಯ ಸೈಕಲ್, ಚಪ್ಪಲ್ ಹಾಗೂ ಕನ್ನಡದಲ್ಲಿ ಬರೆದಿಟ್ಟಿರುವ ಪತ್ರ ಹ್ಯಾಮ್ಸ್ ಬರ್ಗ್ ನದಿ ಸಮೀಪ ಪತ್ತೆಯಾಗಿರುವುದಾಗಿ ಜರ್ಮನಿಯ ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.