ಬಾಗಲಕೋಟೆಯಲ್ಲಿ ಪ್ರಭಾವ, ಹಣವಿದ್ದರೆ ಮಾತ್ರ ಬೆಡ್-ಔಷಧ
Team Udayavani, May 1, 2021, 5:18 PM IST
ಬಾಗಲಕೋಟೆ: ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹೊತ್ತಲ್ಲೇ ಖಾಸಗಿ ಆಸ್ಪತ್ರೆಗಳು ಬೆಡ್ ಖಾಲಿ ಇಲ್ಲ ಎಂಬ ನೆಪ ಹೇಳುತ್ತಿರುವ ಪ್ರಸಂಗ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಪ್ರಭಾವ-ಹೆಚ್ಚಿನ ಹಣ ಕೊಟ್ಟರೆ ಮಾತ್ರ ಬೆಡ್ ಸಿಗುತ್ತಿವೆ. ರೆಮ್ಡೆಸಿವಿಯರ್ ಔಷಧಕ್ಕೆ ಜಿಲ್ಲೆಯಲ್ಲೂ ಹೆಚ್ಚಿನ ಬೇಡಿಕೆ ಇದ್ದು, ಕೊರೊನಾ ಪಾಸಿಟಿವ್ ಬಂದ್ರೆ ಸಾಕು ಈ ಔಷಧ ಯಾವ ಆಸ್ಪತ್ರೆಯಲ್ಲಿ ಸಿಗುತ್ತದೆಯೋ ಅಲ್ಲಿಯೇ ಸೋಂಕಿತ ವ್ಯಕ್ತಿಯನ್ನು ದಾಖಲಿಸೋಣ ಎಂಬ ವಾದಕ್ಕೆ ಜನರೂ ಬಂದಿದ್ದಾರೆ.
ಕೆಲವರಂತೂ ಸೋಂಕಿತ ವ್ಯಕ್ತಿಯನ್ನು ದಾಖಲು ಮಾಡುವ ಮೊದಲೇ ಆಸ್ಪತ್ರೆಯವರಿಗೆ ಫೋನ್ ಮಾಡಿ ನಿಮ್ಮಲ್ಲಿ ರೆಮ್ಡೆಸಿವಿಯರ್ ಔಷಧ ಇದೆಯೋ ಇಲ್ವೋ, ನಾವೇ ತಂದು ಕೊಡಬೇಕಾ, ನೀವೇ ಅರೇಂಜ್ ಮಾಡ್ತಿರಾ ಎಂದೆಲ್ಲ ಕೇಳಿ, ಆ ಬಳಿಕ ಸೋಂಕಿತ ವ್ಯಕ್ತಿಯನ್ನು ದಾಖಲಿಸಲಾಗುತ್ತಿದೆ.
ನಗರದಲ್ಲಿ ಸುಮಾರು ಏಳು ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಆರಂಭಿಸಿದ್ದು, ಅದರಲ್ಲಿ ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆ 550 ಬೆಡ್ ಗಳ ವಿಶೇಷ ವಿಭಾಗವನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟಿದೆ. ಇನ್ನು ಉಳಿದ ಆರು ಆಸ್ಪತ್ರೆಯಲ್ಲಿ ಒಂದು ಆಸ್ಪತ್ರೆ ಅತ್ಯಾಧುನಿಕ ಆಕ್ಸಿಜನ್ ಸೌಲಭ್ಯಯುಳ್ಳ 10 ಬೆಡ್ಗಳ ವಿಭಾಗ ಆರಂಭಿಸಿದ್ದು, ಉಳಿದೆಲ್ಲ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಆರಂಭಿಸಿದ್ದರೂ ಅದಕ್ಕೆ ಬೇಕಾದ ಔಷಧ ಸಂಗ್ರಹ ಇಲ್ಲ ಎಂಬ ಆರೋಪ ಕೇಳಿ ಬಂದಿದೆ.
ಜಿಲ್ಲೆಯಲ್ಲಿ ರೆಮ್ಡೆಸಿವಿಯರ್ ಅಥವಾ ಇತರೇ ಔಷಧ ಹೆಚ್ಚಿನ ಬೆಲೆಗಾಗಲಿ, ಕಾಳ ಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣ ಕಂಡು ಬಂದಿಲ್ಲ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಈ ಔಷಧಿಯನ್ನು ಎಂಆರ್ಪಿ ಬೆಲೆಗಿಂತ ಹೆಚ್ಚಿನ ಬೆಲೆಗೆ ಸೋಂಕಿತರಿಗೆ ನೀಡಲಾಗುತ್ತಿದೆ ಎಂಬ ಆರೋಪವಿದೆ. ಇದರ ಮೇಲೆ ಜಿಲ್ಲಾಡಳಿತ ಹೆಚ್ಚಿನ ನಿಗಾ ವಹಿಸಿದೆಯಾದರೂ ಈವರೆಗೆ ಅಂತಹ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 450 ಹಾಗೂ ಕುಮಾರೇಶ್ವರ ಆಸ್ಪತ್ರೆಯಲ್ಲಿ 550 ಬೆಡ್ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 350ಕ್ಕೂ ಹೆಚ್ಚು ಬೆಡ್ಗಳ ಸೌಲಭ್ಯವಿದೆ. ಸದ್ಯ ಜಿಲ್ಲಾಸ್ಪತ್ರೆ ಸಹಿತ ಎಲ್ಲ ಆಸ್ಪತ್ರೆಯಲ್ಲೂ ಸೋಂಕಿತರು ಪೂರ್ಣವಾಗಿಲ್ಲ. ಆದರೂ ಚಿಕಿತ್ಸೆಗಾಗಿ ಬರುವವರಿಗೆ ಬೆಡ್ ಇಲ್ಲ ಎಂದು ಖಾಸಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ