ಬೆಳಗಲ್ಲ ಗ್ರಾಪಂ ನೂತನ ಕಟ್ಟಡ ಉದ್ಘಾಟನೆ
Team Udayavani, May 16, 2020, 4:19 AM IST
ಹುನಗುಂದ: ಬೆಳಗಲ್ಲ ಗ್ರಾಮ ಪಂಚಾಯತ ನೂತನ ಕಟ್ಟಡ ಲಾಕ್ಡೌನ್ ಮಧ್ಯೆಯೂ ಶುಕ್ರವಾರ ಉದ್ಘಾಟನೆಗೊಂಡಿತು.
ಭೂ ಸೇನಾ ನಿಗಮದಿಂದ 18 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದ್ದ ಹೊಸ ಕಟ್ಟಡದ ಪ್ರವೇಶ ಕಾರ್ಯಕ್ರಮ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ಜರುಗಿತು. ಬಿಸನಾಳ ಗ್ರಾಮದ ಹಾಲಮತ ಸಮಾಜದ ಗ್ಯಾನೇಶ್ವರ ಪೀಠದ ಏಕಪ್ಪಯ್ಯ ಗ್ಯಾನಪ್ಪಯ್ಯನವರ ಸಾನ್ನಿಧ್ಯದಲ್ಲಿ ಕೂಡಲಸಂಗಮ ಜಿಪಂ ಸದಸ್ಯ ವೀರೇಶ ಉಂಡೋಡಿ ಹೊಸ ಕಟ್ಟಡ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ಮಹಾಂತೇಶ ಉಂಡೋಡಿ ಅಧ್ಯಕ್ಷತೆ ವಹಿಸಿದ್ದರು.
ಅಂಗನವಾಡಿ ಕಟ್ಟಡ ಉದ್ಘಾಟನೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 5 ಲಕ್ಷ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 3 ಲಕ್ಷ ಅನುದಾನದಲ್ಲಿ ನಿರ್ಮಾಣವಾಗಿದ್ದ ಅಂಗನವಾಡಿಯ ಕಟ್ಟಡವನ್ನು ಗ್ರಾಪಂ ಉಪಾಧ್ಯಕ್ಷೆ ಮತ್ತು ಸರ್ವ ಮಹಿಳಾ ಸದಸ್ಯರು ಸೇರಿ ಉದ್ಘಾಟಿಸಿದರು. ಗ್ರಾಪಂ ಹಳೆಯ ಕಟ್ಟಡದಲ್ಲಿ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.
ಗ್ರಾಪಂ ಉಪಾಧ್ಯಕ್ಷೆ ಶಾಂತವ್ವ ಗುರಿಕಾರ, ಸದಸ್ಯರಾದ ಸಂಗಣ್ಣ ಶಿರೂರ, ಸಿದ್ರಾಮಪ್ಪ ಅಂಗಡಿ, ಧರ್ಮಣ್ಣ ಹಳ್ಳಪ್ಪನವರ, ನಾಗಮ್ಮ ಬಿಜಕಲ್ಲ, ದ್ಯಾಮಣ್ಣ ಭಜಂತ್ರಿ, ಬಸವ್ವ ವಾಲ್ಮೀಕಿ, ಶರಣವ್ವ ಮಾದರ, ಚನ್ನಮ್ಮ ಗೌಡರ, ಮಲ್ಲನಗೌಡ ಪಾಟೀಲ, ಸೋಮವ್ವ ಚಲವಾದಿ, ಹುಲಗವ್ವ ಕಳ್ಳಿಗುಡ್ಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ