ಹೊನ್ನರಹಳ್ಳಿ ಶಾಲೆಗೆ ಬಿಇಒ ಬೆಳ್ಳಣ್ಣವರ ಭೇಟಿ

ಆಗ ಶಿಕ್ಷಕರು ಮಕ್ಕಳನ್ನು ನಿಯಂತ್ರಿಸಲು ಮುಂದಾದಾಗ ಮುಗ್ಧತೆ ಮಕ್ಕಳ ಮೊದಲ ಲಕ್ಷಣ.

Team Udayavani, Nov 25, 2021, 5:53 PM IST

ಹೊನ್ನರಹಳ್ಳಿ ಶಾಲೆಗೆ ಬಿಇಒ ಬೆಳ್ಳಣ್ಣವರ ಭೇಟಿ

ಅಮೀನಗಡ: “ಸರ್‌, ನನ್ನ ಪುಸ್ತಕ ಚೆಕ್‌ ಮಾಡ್ರಿ, ನನ್ನ ಅಕ್ಷರ ಚೆಕ್‌ ಮಾಡ್ರಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಕ್ಕಳು ದುಂಬಾಲು ಬಿದ್ದ ದೃಶ್ಯ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಡು ಬಂತು.

ಹುನಗುಂದ ಕ್ಷೇತ್ರ ಶಿಕ್ಷಣಾಧಿ ಕಾರಿ ಮಹಾದೇವ ಬೆಳ್ಳಣ್ಣವರ ಹೊನ್ನರಹಳ್ಳಿ ಪ್ರಾಥಮಿಕ ಶಾಲೆ ಪ್ರಗತಿ ಪರಿಶೀಲನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 1, 2 ಮತ್ತು 3ನೇ ತರಗತಿ ನಲಿಕಲಿ ಮಕ್ಕಳ ಬರವಣಿಗೆ ಪರಿಶೀಲಿಸುವಾಗ ಮಕ್ಕಳು ನಾ ಮುಂದು..ತಾ ಮುಂದು.. ಎಂದು ಶಿಕ್ಷಣಾ ಧಿಕಾರಿಗಳನ್ನು ಸುತ್ತುವರಿದರು.

ಆಗ ಶಿಕ್ಷಕರು ಮಕ್ಕಳನ್ನು ನಿಯಂತ್ರಿಸಲು ಮುಂದಾದಾಗ ಮುಗ್ಧತೆ ಮಕ್ಕಳ ಮೊದಲ ಲಕ್ಷಣ. ಅವರು ಸ್ವತಂತ್ರರು, ಯಾವುದೇ ಬಂಧನ, ಮುಲಾಜು ಅವರಿಗಿಲ್ಲ. ತಮಗನಿಸಿದ್ದನ್ನು ನೇರವಾಗಿ ಹೇಳುವ ಮತ್ತು ಕೇಳುವ ಸ್ವಭಾವ ಅವರದ್ದು ಎಂದು ಬಿಇಒ ಬೆಳ್ಳಣ್ಣವರ ಹೇಳಿದರು.

ಮಕ್ಕಳೊಂದಿಗೆ ಸಂವಾದ ನಡೆಸುತ್ತ ಅವರ ಪ್ರಶ್ನೆಗಳಿಗೆ ಉತ್ತರಿಸುತ್ತ ಮಾತನಾಡಿದ ಬಿಇಒ ಬೆಳ್ಳಣ್ಣವರ, ಒಂದು ಮುಕ್ಕಾಲು ವರ್ಷ ಭೌತಿಕ ತರಗತಿಗಳಿಂದ ದೂರವಿದ್ದ ಮಕ್ಕಳು ಈಗ ಶಾಲೆಗೆ ಪ್ರವೇಶ ಮಾಡಿರುವುದರಿಂದ ಶಾಲೆಯಲ್ಲಿ ಮಕ್ಕಳ ಕಲರವ ಕೇಳಿಸುತ್ತಿದೆ ಎಂದರು.

ಇಸಿಒ ಸಿದ್ದು ಪಾಟೀಲ ಮಾತನಾಡಿ, ಮಕ್ಕಳ ಕಲಿಕೆ ಗಟ್ಟಿಗೊಳಿಸಲು ವಿಭಿನ್ನ ಚಟುವಟಿಕೆಗಳ ಮೂಲಕ ಬೋಧನೆ ಮಾಡಬೇಕು. ಸ್ಮಾರ್ಟ್‌ ಕ್ಲಾಸ್‌ ಸಮರ್ಪಕವಾಗಿ ಬಳಸಿಕೊಂಡು ಆಕರ್ಷಕ ಕಲಿಕಾ ವಾತಾವರಣ ಸೃಷ್ಟಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲೆ ಭೌತಿಕ ಸೌಲಭ್ಯ, ಮಕ್ಕಳ-ಶಿಕ್ಷಕರ ಹಾಜರಾತಿ, ಕಲಿಕಾ ಮಟ್ಟ ಗಮನಿಸಿದ ಬಿಇಒ ತಂಡ ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿತು.

ಈ ವೇಳೆ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದು ಶೀಲವಂತರ, ಮುಖ್ಯ ಗುರು ಎ.ಐ. ಕಂಬಳಿ, ಶಿಕ್ಷಕರಾದ ಎಸ್‌.ಜಿ. ಪಾಟೀಲ, ಎಸ್‌. ಎಸ್‌. ಲಾಯದಗುಂದಿ, ಅಶೋಕ ಬಳ್ಳಾ, ಬಿ.ಬಿ. ವಾಲಿಕಾರ, ಕಿರಣ ವಜ್ರಮಟ್ಟಿ ಇತರರಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.