ಸವದಿಯಿಂದ ನೇಕಾರರಿಗೆ ದ್ರೋಹ

ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಏಕವಚನದ ಟೀಕೆಗೆ ಪ್ರತ್ಯುತ್ತರ | ನೇಕಾರರು ಮುಗ್ಧರು, ಮಳ್ಳರಲ್ಲ

Team Udayavani, Jun 7, 2021, 7:15 PM IST

6-mlp-1

ಮಹಾಲಿಂಗಪುರ: ಮಾಜಿ ಸಚಿವೆ, ಹಿರಿಯ ಕಲಾವಿದೆ ಉಮಾಶ್ರೀ ಅವರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ತಮ್ಮ ಮಾತನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಪಕ್ಷಬೇಧ ಮರೆತು ನೇಕಾರರು ಒಂದಾಗಿ ತಮ್ಮ ಮನೆಯ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ನೇಕಾರ ಯುವ ಮುಖಂಡ ರಾಜೇಂದ್ರ ಭದ್ರಣ್ಣವರ ಹೇಳಿದರು.

ಶಾಸಕ ಸಿದ್ದು ಸವದಿಯವರು ಉಮಾಶ್ರೀ ವಿರುದ್ಧ ಏಕವಚನ ಮತ್ತು ಏನೂ ಕೆಲಸ ಮಾಡಿಲ್ಲ ಎಂಬ ಆರೋಪ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಕಾರರು ಮುಗ್ಧರು ಮಳ್ಳರಲ್ಲ. ನಾವು ಸುಮ್ಮನೆ ಕುಳಿತಿದ್ದೇವೆ ಎಂದರೆ ಕೈಗೆ ಬಳೆ ತೊಟ್ಟಿಲ್ಲ. ನೇಕಾರರು ಬಡವರಿರಬಹುದು ಆದರೆ ಸ್ವಾಭಿಮಾನಿಗಳು. ನೇಕಾರ ನಾಯಕಿಗೆ ಕೀಳು ಪದ ಬಳಸಿದರೆ ನಾವು ಸುಮ್ಮನಿರಲ್ಲ, ಬರುವ ಚುನಾವಣೆಯಲ್ಲಿ ನಾವು ಉಮಾಶ್ರೀಯವರ ಸಾಧನೆಗಳ ಬೋರ್ಡ್‌ ಹಾಕಿ ಚುನಾವಣೆ ಎದುರಿಸುತ್ತೇವೆ. ನಿಮಗೆ ಆ ತಾಕತ್‌ ಇದೆಯೇ ಎಂದು ಪ್ರಶ್ನಿಸಿದರು.

ಪಟ್ಟಣದ ನೇಕಾರ ಮುಖಂಡ ಮಲ್ಲಪ್ಪ ಭಾಂವಿಕಟ್ಟಿ ಮಾತನಾಡಿ, ಬಿಜೆಪಿ ಆಡಳಿತ ಅಚ್ಛೇ ದಿನ್‌ ಅಲ್ಲ ತುಚ್ಛೇ ದಿನ್‌. ಉಮಾಶ್ರೀಯವರ ಅ ಧಿಕಾರದಲ್ಲಿದ್ದಾಗ ಪವರ್ ಲೂಮ್‌ ಮಗ್ಗಗಳಿಗೆ ಸಬ್ಸಿಡಿ ವಿದ್ಯುತ್‌, ಸಾಲ ಮನ್ನಾ, ಸಹಕಾರಿ ನೂಲಿನ ಗಿರಣಿಗಳಿಗೆ ಸಹಾಯ ಧನ, ಜೇಡರ ದಾಸಿಮಯ್ಯ ಜಯಂತಿ 65 ಕೋಟಿ ಹಾಗೂ ಎರಡು ಎಕರೆ ಜಮೀನು ಹಾಗೂ ಸಮುದಾಯ ಭವನಗಳು ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದರು.

ನಗರ ಘಟಕದ ಅಧ್ಯಕ್ಷ ಈಶ್ವರ ಚಮಕೇರಿ ಮಾತನಾಡಿ, ಉಮಾಶ್ರೀ ಅಧಿ ಕಾರದಲ್ಲಿದ್ದಾಗ ನೇಕಾರ ಅಭಿವೃದ್ಧಿ ನಿಗಮಕ್ಕೆ ನೇಕಾರ ಸಮಾಜದ ರವೀಂದ್ರ ಕಲಬುರ್ಗಿಯವರನ್ನು ನೇಮಕ ಮಾಡಿ ನೇಕಾರರ ಮೇಲಿನ ಕಾಳಜಿ ಮೆರೆದಿದ್ದರು. ಆದರೆ ಶಾಸಕ ಸಿದ್ದು ಸವದಿ ಅವರು ಅ ಧಿಕಾರದಾಸೆಯಿಂದ ತಾವೇ ನಿಗಮದ ಅಧ್ಯಕ್ಷರಾಗಿ ನೇಕಾರ ಸಮುದಾಯಕ್ಕೆ ದ್ರೋಹ ಬಗೆದಿದ್ದಾರೆ ಎಂದರು.

ಸದಾಶಿವ ಗೋಲಕರ, ಶಂಕ್ರಪ್ಪ ಜಾಲಿಗಿಡದ, ನೀಲಕಂಠ ಮುತ್ತೂರ, ರಾಜೇಶ ಬಾವಿಗಿಡದ ಮಾತನಾಡಿದರು. ತೇರದಾಳ ಮತಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ, ಡಾ.ಯು.ಎಸ್‌. ವನಹಳ್ಳಿ, ಮಹಾದೇವ ಬರಗಿ, ರಾಜು ಭಾವಿಕಟ್ಟಿ, ಬಸವರಾಜ ಗುಡೋಡಗಿ, ಹೊಳೆಪ್ಪ ಬಾಡಗಿ, ಶಂಕರ ಸೊನ್ನದ, ಶ್ರೀಧರ ಪಿಸೆ, ಕಿರಣ ಕರಲಟ್ಟಿ, ವಿನೋದ ಸಿಂಪಿ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.