ಮಲೇರಿಯಾ ಹರಡದಂತೆ ಜಾಗೃತಿ ವಹಿಸಿ
Team Udayavani, Jul 20, 2020, 11:02 AM IST
ಗಲಗಲಿ: ಮಲೇರಿಯಾ ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಮಲೇರಿಯಾ ಬರದಂತೆ ಜಾಗೃತಿ ವಹಿಸಬೇಕು ಎಂದು ಗಲಗಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅನೀಲ ಕುಂಚನೂರ ಹೇಳಿದರು.
ಬಾಡಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅರೋಗ್ಯ ವಿಸ್ತರಣಾ ಕೇಂದ್ರ ಹಾಗೂ ಬಾಡಗಿ ಗ್ರಾಮ ಪಂಚಾಯತ ಆಶ್ರಯದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆಯ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ವಿವರಿಸಿದರಲ್ಲದೇ ಅಂಥ ರೋಗಗಳು ಹರಡದಂತೆ ತಡೆಯಲು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ತಿಳಿಸಿದರು.
ಬಾಡಗಿ ಗ್ರಾಮ ಆರೋಗ್ಯ ವಿಸ್ತರಣಾ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರಕಾಶ ಪಡುಮುಖೀ ಮಾತನಾಡಿ, ಮನೆಯ ಸುತ್ತಲಿನ ಪರಿಸರದಲ್ಲಿ ಸೊಳ್ಳೆಗಳು ಬಾರದಂತೆ ಸ್ವಚ್ಛತೆಗೆ ಮಹತ್ವ ನೀಡಬೇಕು ಎಂದರಲ್ಲದೇ ಕೋವಿಡ್ ತಡೆಗಟ್ಟುವ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ ಪಿಡಿಒ ಲಕ್ಷ್ಮಣ ಆಲಗುಂಡಿ, ಕಾರ್ಯದರ್ಶಿ ಬಡಿಗೇರ, ರವಿ ಸಾಳುಂಕೆ ಮುಂತಾದವರು ಪಾಲ್ಗೊಂಡಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ಗಲಗಲಿಯ ಆರೋಗ್ಯ ಶಿಕ್ಷಣಾಧಿಕಾರಿ ಎ.ವಿ.ಗವಳಿ, ಈ ವರ್ಷದ ಘೋಷಣೆಯಾದ ಶೂನ್ಯ ಮಲೇರಿಯಾ ನಮ್ಮಿಂದ ಪ್ರಾರಂಭ ಎಂಬುದರ ಬಗ್ಗೆ ವಿವರಿಸಿದರು. ಸುನಂದಾ ಕಂಬಳೆ, ಶ್ರೀದೇವಿ ಮಾದರ, ವಿಜಯಲಕ್ಷ್ಮೀ ಚಿತವಾಡಗಿ, ಆನಂದ ಹಿರೇಮಠ, ಪ್ರಕಾಶ ಯಲಗೋಡ ಉಪಸ್ಥಿತರಿದ್ದರು. ಶಿವು ಗೋಕಾವಿ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ