ದೇಶದ ಅತಿ ದೊಡ್ಡ ಮಾಸ್ಕ್ ನಾಡಿದ್ದು ಅನಾವರಣ

ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿ ಕೋವಿಡ್ ಜಾಗೃತಿ

Team Udayavani, Mar 27, 2021, 3:24 PM IST

ದೇಶದ ಅತಿ ದೊಡ್ಡಮಾಸ್ಕ್ ನಾಡಿದ್ದು ಅನಾವರಣ

ಅಮೀನಗಡ: ಅತಿ ದೊಡ್ಡ ಮಾಸ್ಕ್ ಸಿದ್ಧಗೊಂಡಿದ್ದು, ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿ ಅನಾವರಣಗೊಳ್ಳಲಿದೆ. ಪಟ್ಟಣದಿಂದ ಶ್ರೀಶೈಲ ಪಾದಯಾತ್ರೆಗೆ ಹೊರಡುವ ಭಕ್ತರು ಈ ಬಾರಿ ಪಾದಯಾತ್ರೆಯಲ್ಲಿ ಕೋವಿಡ್ ಜಾಗೃತಿ ಮೂಡಿಸಲು 8 ಅಡಿ ಉದ್ದ, 6 ಅಡಿ ಅಗಲಹೊಂದಿದ ದೇಶದ ಅತಿ ದೊಡ್ಡ ಮಾಸ್ಕ್ತಯಾರಿಸಿದ್ದು, ಪಾದಯಾತ್ರೆಯುದ್ದಕ್ಕೂವಿವಿಧ ಪ್ರಮುಖ ನಗರಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ರಸ್ತೆಯುದ್ದಕ್ಕೂ ಮಾಸ್ಕ್ ವಿತರಿಸುವ ಇವರು ಸ್ಯಾನಿಟೈಸರ್‌ ಬಳಕೆ ಮತ್ತುಸಾಮಾಜಿಕ ಅಂತರ ಕಾಪಾಡಿಕೊಳ್ಳುವಕುರಿತಂತೆ ಮೈಕ್‌ ಮೂಲಕ ಕೊರೊನಾಜಾಗೃತಿ ಅಭಿಯಾನ ಕೈಗೊಳ್ಳಲು ಸಿದ್ಧತೆನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಂಗಳೂರಿನ ಅಮ್ಮಾ ಫೌಂಡೇಶನ್‌ಮತ್ತು ಪಟ್ಟಣದ ಶ್ರೀಶೈಲ ಭಕ್ತರು ಶ್ರೀಶೈಲಮಲ್ಲಿಕಾರ್ಜುನ ಪಾದಯಾತ್ರೆಯಲ್ಲಿಧಾರ್ಮಿಕ ಹಾಗೂ ಕೊರೊನಾ ಜಾಗೃತಿಮೂಡಿಸಲು, ಸಾಮಾಜಿಕ ಕಳಕಳಿ ಚಟುವಟಿಕೆ ಕೈಗೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾರಾಜಿಸಲಿದೆ 108 ಅಡಿ ಮಲ್ಲಯ್ಯನ ಧ್ವಜ: ಪಟ್ಟಣದಿಂದ ಶ್ರೀಶೈಲಪಾದಯಾತ್ರೆಗೆ ಹೋಗುವ ಮಲ್ಲಯ್ಯನಭಕ್ತರು ಸುಮಾರು 108 ಅಡಿ ಉದ್ದದಮಲ್ಲಯ್ಯ ಧ್ವಜವನ್ನೂ ಸಿದ್ಧಪಡಿಸಿದ್ದು, ಪಾದಯಾತ್ರೆಯಲ್ಲಿಧಾರ್ಮಿಕ ಜಾಗೃತಿಕೈಗೊಳ್ಳಲು ವಿಶೇಷ ತಯಾರಿ ನಡೆಸಿದ್ದಾರೆ.

ಅಸ್ಲಂನ ಕೈಚಳಕ: ಮಲ್ಲಯ್ಯನ ಧ್ವಜಕ್ಕೆ ಗದಗ ಜಿಲ್ಲೆಯ ಸ್ಯಾಟಿನ್‌ ಬಟ್ಟೆ ಬಳಸಲಾಗಿದ್ದು, ಬಾಗಲಕೋಟೆಯ ಖ್ಯಾತ ಕಲಾವಿದ ಅಸ್ಲಂ ಕಲಾದಗಿ ಹಾಗೂ ರವೀಂದ್ರ ಬಂಡಿ ಬಟ್ಟೆಯ ಮೇಲೆ ಆಕರ್ಷಕವಾದ ಮಲ್ಲಯ್ಯನ ಚಿತ್ರ ಮತ್ತು ಮಾಸ್ಕ್ ಜಾಗೃತಿ ಸಂದೇಶ ಬಿಡಿಸಿದ್ದಾರೆ.

ಬೆಂಗಳೂರಿನಿಂದಲೂ ಬರುತ್ತಾರೆ ಭಕ್ತರು: ಪಟ್ಟಣದ ಉದ್ಯಮಿ ಮಂಜುನಾಥಬಂಡಿ ರಾಜಧಾನಿ ಬೆಂಗಳೂರಿಗೂಈ ಭಕ್ತಿಯ ನಂಟು ಹಚ್ಚಿಸಿದ್ದಾರೆ.ಬೆಂಗಳೂರಿನ ಅಮ್ಮಾ ಫೌಂಡೇಶನ್‌ ಮತ್ತುಪಟ್ಟಣದ ಶ್ರೀಶೈಲ ಭಕ್ತರು ಕಳೆದ 7 ವರ್ಷಗಳಿಂದ ಅಮೀನಗಡದಿಂದ ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ ಮಾಡುತ್ತಾರೆ. ಪಟ್ಟಣದಿಂದಲೂ ಸುಮಾರು 200 ಭಕ್ತರುಶ್ರೀಶೈಲಕ್ಕೆ ಪಾದಯಾತ್ರೆ ಮಾಡುತ್ತಾರೆ.ದಾರಿಯುದ್ದಕ್ಕೂ ದಾಸೋಹ: ಪಟ್ಟಣದಿಂದ ಹೋಗುವ ಪಾದಯಾತ್ರೆ ಶ್ರೀಶೈಲಮಲ್ಲಿಕಾರ್ಜುನ ದೇವಸ್ಥಾನ ತಲುಪುವರೆಗೂದಾರಿಯುದ್ದಕ್ಕೂ ದಾಸೋಹ ನಡದೇಇರುತ್ತದೆ. ವಿವಿಧ ರೀತಿಯ ಸೇವೆ ಮಾಡುವಮುಖ್ಯಸ್ಥರಿಗೆ ಅಮ್ಮಾ ಫೌಂಡೇಶನ್‌ ಮತ್ತುಅಮೀನಗಡ ಶ್ರೀಶೈಲ ಭಕ್ತರ ಪರವಾಗಿಸನ್ಮಾನಿಸಿ ದಾಸೋಹ ಕುರಿತು ಜಾಗೃತಿ ಮಾಡಲಾಗುತ್ತಿದೆ.

ಮಾ.29ರಂದು 108 ಅಡಿ ಉದ್ದದ ಧ್ವಜ- ದೇಶದ ಅತಿ ದೊಡ್ಡ ಮಾಸ್ಕ್ ಅನಾವರಣ :

ಶ್ರೀಶೈಲ ಪಾದಯಾತ್ರೆಯಲ್ಲಿ ಧಾರ್ಮಿಕ ಹಾಗೂ ಕೊರೊನಾ ಜಾಗೃತಿ ಮೂಡಿಸಲು 108ಅಡಿ ಉದ್ದದ ಮಲ್ಲಯ್ಯನ ಧ್ವಜ ಹಾಗೂ ದೇಶದ ಅತಿ ದೊಡ್ಡ ಮಾಸ್ಕ್ ಅನಾವರಣಕಾರ್ಯಕ್ರಮ ಮಾ.29ರಂದು ಸಂಜೆ 4ಕ್ಕೆ ನಡೆಯಲಿದೆ. ಸಂಸದ ಪಿ.ಸಿ.ಗದ್ದಿಗೌಡರಅನಾವರಣಗೊಳಿಸಲಿದ್ದು, ಗಚ್ಚಿನಮಠದ ಶಂಕರರಾಜೇಂದ್ರ ಸ್ವಾಮೀಜಿ, ಶ್ರೀಶೈಲಜಗದ್ಗುರು ಪೀಠದ ಶಾಖಾಮಠ ಸಂಡೂರ ತಾಲೂಕಿನ ಅಂತಾಪುರದ ಕುಮಾರಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಂಗಳೂರಿನ ನಾಗಾರ್ಜುನವಿವಿಯ ನಿರ್ದೇಶಕ ಮನೋಹರ ಸರೋಜಿ, ರಾಷ್ಟ್ರೀಯ ಆಟಗಾರ ರೋಹಿತಕೆಂಪೇಗೌಡ, ರಾಷ್ಟ್ರೀಯ ಆಟಗಾರ್ತಿ ಪ್ರಮೀಳಾ ಗಟ್ಟಿ, ಸಂಪನ್ಮೂಲ ವ್ಯಕ್ತಿ ರಮೇಶಉಮ್ರಾಣಿ, ಜ್ಞಾನಜ್ಯೋತಿ ಕಾಲೇಜ್‌ ಪ್ರಾಚಾರ್ಯ ರಮೇಶ ಸೇರಿದಂತೆ ಪಟ್ಟಣದಗಣ್ಯರಿಂದ 150 ಕೆಜಿ ಹೂಗಳ ಪುಷ್ಪಾರ್ಚನೆ ಮೂಲಕ ಪಥ ಸಂಚಲನ ನಡೆಯಲಿದೆ ಎಂದು ಉದ್ಯಮಿ ಮಂಜುನಾಥ ಬಂಡಿ ತಿಳಿಸಿದ್ದಾರೆ.

 

-ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.