ಎರಡು ಬೈಕ್ಗಳಿಗೆ ಕಾರು ಡಿಕ್ಕಿ : ಮೂವರ ಸಾವು
Team Udayavani, Aug 27, 2019, 6:32 PM IST
ಲೋಕಾಪುರ (ಬಾಗಲಕೋಟೆ): ಎದುರಿಗೆ ಬರುತ್ತಿದ್ದ ಎರಡು ಬೈಕ್ಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯ ಲೋಕಾಪುರ ಸಮೀಪ ಸಂಭವಿಸಿದೆ.
ಮೃತ ಪಟ್ಟವರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ಪಾಂಡುರಂಗ ಫಕೀರಪ್ಪ ದಾಸರ (46), ರಾಮದುರ್ಗ ತಾಲೂಕಿನ ಬಿಡಕಿ ಗ್ರಾಮದ ಮದರಸಾಬ ಮೈಲಾಸಾಬ ಅಟ್ನಾಳ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟವರು. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕಾಪುರ ಕಡೆಯಿಂದ ಬೆಳಗಾವಿಗೆ ಹೊರಟಿದ್ದ ಕಾರು, ಲೋಕಾಪುರ ಹೊರವಲಯದ ಕೊಡಬಾಗಿ ಪೆಟ್ರೊಲ್ ಬಂಕ್ ಬಳಿ ಬೈಕಿಗೆ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈ ಕ್ ಮೇಲಿದ್ದ ವ್ಯಕ್ತಿಗಳು ಮೂವತ್ತು ಅಡಿ ದೂರ ಹಾರಿ ಬಿದ್ದಿದ್ದಾರೆ.
ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು