ಬೀಳಗಿ ತಾಪಂ ಅಧ್ಯಕ್ಷ ಗಾದಿಗೆ ಪೈಪೋಟಿ

ನಾಲ್ವರು ಆಕಾಂಕ್ಷಿಗಳಲ್ಲಿ ಯಾರಿಗೆ ಒಲಿಯಲಿದೆ ಪಟ್ಟ ?

Team Udayavani, Jul 10, 2019, 9:57 AM IST

bk-tdy-2..

ಬೀಳಗಿ: ತಾಲೂಕು ಪಂಚಾಯತ ಕಾರ್ಯಾಲಯ.

ಬೀಳಗಿ: ಇಲ್ಲಿಯ ತಾಪಂ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಪೈಪೋಟಿ ಶು‌ರುವಾಗಿದೆ. ಜು. 12ರಂದು ನಡೆಯುವ ಚುನಾವಣೆ ನಡೆಯಲಿದ್ದು, ತಾಪಂನಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಗುಂಪುಗಾರಿಕೆ ನಡೆಯುತ್ತಿದ್ದು, ಪಕ್ಷದ ಮುಖಂಡರನ್ನು ನಿದ್ದೆಗೆಡಿಸಿದೆ.

ಒಟ್ಟು ಸದಸ್ಯ ಬಲ: ಸ್ಥಳೀಯ ತಾಪಂ ಒಟ್ಟು 15 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್‌ 11 ಹಾಗೂ ಬಿಜೆಪಿ 4 ಸದಸ್ಯ ರನ್ನು ಹೊಂದಿದ್ದು, ತಾಪಂ ಅಧಿಕಾರ ನಡೆಸಲು ಕಾಂಗ್ರೆಸ್‌ ನಿಚ್ಚಳ ಬಹುಮತ ಹೊಂದಿದೆ. ಈಗಾಗಲೇ ಕಾಂಗ್ರೆಸ್‌ನ ಶ್ರೀಶೈಲ ಸೂಳಿಕೇರಿ 33 ತಿಂಗಳು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು, ಪಕ್ಷದ ಒಳ ಒಪ್ಪಂದದಂತೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನುಳಿದ 20 ತಿಂಗಳ ಅವಧಿಗೆ ಕಾಂಗ್ರೆಸ್‌ ಸ್ವಪಕ್ಷಿಯರ ಲ್ಲಿಯೇ ಪೈಪೋಟಿ ನಡೆಯುತ್ತಿದೆ.

ಬಿಡಿಸದ ಕಗ್ಗಂಟು: ಪ್ರವರ್ಗ 2 ಅ ಸಾಮನ್ಯ ವರ್ಗಕ್ಕೆ ಮೀಸಲಾಗಿರುವ ತಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ನಾಲ್ವರು ಆಕಾಂಕ್ಷಿಗಳು ಇರುವ ಕುರಿತು ಕಾಂಗ್ರೆಸ್‌ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಮಾತು. ಈ ಬಾರಿ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ನೀಡಬೇಕೆಂದು ಕೆಲವರು ತೀವ್ರ ಜಿದ್ದಿಗೆ ಬಿದ್ದಿದ್ದಾರೆ ಹಾಗೂ ಹಿಂದುಳಿದ ವರ್ಗದವರಿಗೆ ಅಧ್ಯಕ್ಷ ಸ್ಥಾನ ಬೇಕೆಂದು ಕೆಲವರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಕಾಂಗ್ರೆಸ್‌ ವಲಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗುದ್ದಾಟ ಜೋರಾಗಿದೆ.

ಯಾರಾಗಲಿದ್ದಾರೆ ಅಧ್ಯಕ್ಷ?: ಅಲ್ಪಸಂಖ್ಯಾತ ಸಮುದಾಯದ ಶರೀಫ್‌ಬೇಗಂ ಬಾವಾಖಾನ್‌, ಡೋಂಗ್ರಿಸಾಬ ಕುದರಿ, ನೂರಜಾನ್‌ ನದಾಫ ಹಾಗೂ ಹಿಂದುಳಿದ ವರ್ಗದ ರಾಮಣ್ಣ ಬಿರಾದಾರ ಅಧ್ಯಕ್ಷ ಗಾದಿಯ ರೇಸ್‌ನಲ್ಲಿದ್ದಾರೆ. ಒಟ್ಟು 15 ಸದಸ್ಯ ಬಲದ ತಾಪಂನಲ್ಲಿ ಬಹುಮತಕ್ಕೆ 8 ಸದಸ್ಯರು ಬೇಕು. ಆದರೆ, ರಾಜಕೀಯ ಕ್ಷೀಪ್ರ ಬೆಳವಣಿಗೆಯಲ್ಲಿ ಯಾರಿಗೆ ಅದೃಷ್ಟ ಒಲಿಯುತ್ತದೆ ಎನ್ನುವುದು ಮಾತ್ರ ನಿಗೂಢ.

 

•ರವೀಂದ್ರ ಕಣವಿ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.