ಬಾನಾಡಿಗಳ ಕಲರವ


Team Udayavani, Mar 18, 2020, 12:01 PM IST

ಬಾನಾಡಿಗಳ ಕಲರವ

ಬೀಳಗಿ: ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಆವೃತಗೊಳ್ಳುವ ತಾಲೂಕಿನ ಅನಗವಾಡಿ ಬ್ರಿಡ್ಜ್, ಹೆರಕಲ್‌ ಬ್ರಿಡ್ಜ್ ನಿಂದ ಹಿಡಿದು ಐತಿಹಾಸಿಕ ಪ್ರವಾಸಿ ತಾಣ ಚಿಕ್ಕಸಂಗಮದವರೆಗಿನ ಪ್ರಕೃತಿ ಸೌಂದರ್ಯದಿಂದ ಬೀಗುತ್ತಿರುವ ವಿಶಾಲ ಪ್ರದೇಶಕ್ಕೆ ಚಳಿಗಾಲ, ಬೇಸಿಗೆ ಕಾಲಕ್ಕೆ ಲಗ್ಗೆ ಇಡುವ ದೇಶ-ವಿದೇಶಗಳ ವಿವಿಧ ಜಾತಿಯ ಸಾವಿರಾರು ಪಕ್ಷಿ ಸಂಕುಲಗಳ ಸಂರಕ್ಷಣೆ ನಿಟ್ಟಿನಲ್ಲಿ ಸರ್ಕಾರ ಈ ಸ್ಥಳದಲ್ಲಿ ಪಕ್ಷಿಧಾಮ ನಿರ್ಮಿಸುವ ಅವಶ್ಯಕತೆಯಿದೆ.

ಆಲಮಟ್ಟಿ ಹಿನ್ನೀರಿನ ವಿಸ್ತಾರವಾದ ಜಾಗದಲ್ಲಿಯೇ ಹೆಚ್ಚು ಪ್ರದೇಶ ಬೀಳಗಿ ತಾಲೂಕಿನದ್ದಾಗಿರುವುದು ಗಮನಾರ್ಹ. ಮಂಗೋಲಿಯಾ, ಥೈಲ್ಯಾಂಡ್‌, ಸೈಬೀರಿಯಾ, ಆಸ್ಟ್ರೇಲಿಯಾ, ಗುಜರಾತ್‌, ಅಸ್ಸಾಂ ಸೇರಿದಂತೆ ದೇಶ-ವಿದೇಶಗಳ ವಿವಿಧ ಭಾಗಗಳಿಂದ ಸುಮಾರು 60ಕ್ಕೂ ಹೆಚ್ಚು ವಿವಿಧ ಜಾತಿಯ ಸಾವಿರಾರು ಪಕ್ಷಿಗಳು ವಲಸೆ ಬರುತ್ತಿರುವುದು ಇಲ್ಲಿನ ಪ್ರಕೃತಿ ಸೌಂದರ್ಯದ ಮೆರಗು ಹೆಚ್ಚಿಸಿದೆ. ಹೆಚ್ಚು ಕಪ್ಪು ಮಣ್ಣು ಪ್ರದೇಶ ಇದಾಗಿರುವುದರಿಂದ ಇಲ್ಲಿ ಸಿಗುವ ವಿಫುಲ ಆಹಾರಕ್ಕಾಗಿ ಹಾಗೂ ಸಂತಾನೋತ್ಪತ್ತಿಗಾಗಿ ಪಕ್ಷಿಗಳು ವಲಸೆ ಬರುತ್ತವೆ.

ಪಕ್ಷಿಧಾಮ ಅಗತ್ಯ: ಕೋಟಿ, ಕೋಟಿ ವೆಚ್ಚ ಮಾಡಿ ಎಲ್ಲಿ ಬೇಕೆಂದಲ್ಲಿ ಪಕ್ಷಿಧಾಮ ನಿರ್ಮಿಸಿದರೆ ಪಕ್ಷಿಗಳು ವಲಸೆ ಬರಲಾರವು. ಆದರೆ, ಪಕ್ಷಿ ಸಂಕುಲ ತಾವು ಗುರುತಿಸಿ ಆಯ್ಕೆ ಮಾಡಿಕೊಂಡು ವಲಸೆ ಬರುವ ಸ್ಥಳದಲ್ಲಿ ಪಕ್ಷಿಧಾಮ ಕಟ್ಟಿ ಬೆಳೆಸಿದರೆ ಬಾನಾಡಿಗಳ ವಂಶಾಭಿವೃದ್ಧಿಗೆ ಅನುಕೂಲವಾಗುತ್ತದೆ. ಬೀಳಗಿ ತಾಲೂಕು ಪಕ್ಷಿಗಳ ವಲಸೆಗೆ ಮುಕ್ತವಾಗಿ ತೆರೆದುಕೊಂಡಿರುವ ಪರಿಣಾಮ, ಸರ್ಕಾರ ಈ ಜಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪಕ್ಷಿಧಾಮ ನಿರ್ಮಿಸುವುದು ಅಗತ್ಯವಾಗಿದೆ. ಸಕಲ ಜೀವಿಗಳಿಗೂ ಲೇಸನ್ನೇ ಬಯಸಿದ ಬಸವಣ್ಣನನಾಡಿನಲ್ಲಿ ಪಕ್ಷಿಧಾಮ ನಿರ್ಮಿಸಿದ್ದೇ ಆದರೆ ಪ್ರವಾಸೋದ್ಯಮಕ್ಕೆ ಬೀಳಗಿ ತಾಲೂಕು ಬೆಳಕು ಚೆಲ್ಲುವುದರಲ್ಲಿ ಸಂದೇಹವೇ ಇಲ್ಲ. ತಾಲೂಕಿನ ಚಿಕ್ಕಸಂಗಮದ ಬಳಿಯಿರುವ ನಡುಗಡ್ಡೆಯ ವಿಶಾಲ ಪ್ರದೇಶದಲ್ಲಿ ಪಕ್ಷಿಧಾಮ ನಿರ್ಮಿಸುವ ಕನಸು ಬಿತ್ತಿ ದಶಕಗಳೇ ಗತಿಸಿದೆ. ಅದರ ಸಾಕಾರಕ್ಕೆ ಜನತೆ ಕಾತರಿಸುತ್ತಿದ್ದಾರೆ.

ನೀರು ಸಂರಕ್ಷಣೆ ಅವಶ್ಯ: ಘಟಪ್ರಭಾ ನದಿ ಬೇಸಿಗೆಯಲ್ಲಿ ಒಣಗಿ ಅಲ್ಲಿನ ಜಲಚರ ಪ್ರಾಣಿಗಳು ಸತ್ತಿವೆ. ಪ್ರಾಣಿ-ಪಕ್ಷಿಗಳು ಹನಿ ನೀರಿಗಾಗಿ ಪರಿತಪಿಸಿವೆ. ಕಾರಣ, ಬೇಸಿಗೆ ಸಂದರ್ಭ ಕನಿಷ್ಠ ಮಟ್ಟದ ನೀರನ್ನಾದರೂ ಸಂರಕ್ಷಿಸುವ ಕೆಲಸ ನಡೆಯಬೇಕಿದೆ ಎನ್ನುವುದು ಪರಿಸರ ಪ್ರೇಮಿಗಳ ಒತ್ತಾಸೆ.

ಹಕ್ಕಿಗಳ ಮ್ಯಾಪ್‌ಲ್ಲಿ ಬೀಳಗಿ: ರೈಲು, ಬಸ್‌, ವಿಮಾನಗಳಿಗೆ ಮನುಷ್ಯ ಮಾರ್ಗ ಹಾಕುತ್ತಾನೆ. ಆದರಂತೆ ಪಕ್ಷಿಗಳೂ ಕೂಡ ಜಗತ್ತಿನಾದ್ಯಂತ ನಿಖರ ವಾಯುಮಾರ್ಗ ನಿರ್ಮಿಸಿರುತ್ತವೆ. ಹಕ್ಕಿಗಳ ಈ ನಿಖರ ಮ್ಯಾಪ್‌ನಲ್ಲಿ ಬೀಳಗಿಯನ್ನು ಅವುಗಳು ಗುರುತಿಸಿರುವುದು ಈ ನೆಲದ ಭಾಗ್ಯ.

ಆಹಾರ ಅರಸಿ ದೇಶ-ವಿದೇಶಗಳಿಂದ ಹಲವಾರು ಜಾತಿಯ ಸಾವಿರಾರು ಪಕ್ಷಿಗಳು ವಲಸೆ ಬರುತ್ತವೆ. ಈಗಾಗಲೇ ತಜ್ಞರು ವಲಸೆ ಪಕ್ಷಿಗಳ ಸಮೀಕ್ಷೆ ಕೂಡ ನಡೆಸಿದ್ದಾರೆ. ಪಕ್ಷಿಧಾಮ ಮಾಡುವ ಮೂಲಕ ಅವುಗಳ ಸಂರಕ್ಷಣೆ ಮಾಡುವುದು ನಾಗರಿಕ ಸಮಾಜದ ಹೊಣೆ. –ಎಚ್‌.ಬಿ. ಡೋಣಿ, ವಲಯ ಅರಣ್ಯಾಧಿಕಾರಿಗಳು, ಬೀಳಗಿ

 

-ರವೀಂದ್ರ ಕಣವಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.